ಹೆಣ್ಣುಮಕ್ಕಳಿಗೆ ಟಿಕೆಟ್‌ ಕೊಡಲು ಕಾರ್ಯಕರ್ತರು ಒಪ್ಪಲ್ಲ; ನಯನಾ ಆರೋಪಕ್ಕೆ ಸಿದ್ದರಾಮಯ್ಯ ಉತ್ತರ

Date:

ಚುನಾವಣೆಯ ಸಮಯದಲ್ಲಿ ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರ ಅಭಿಪ್ರಾಯ ಕೇಳಿದಾಗ ಮಹಿಳಾ ಅಭ್ಯರ್ಥಿಗಳನ್ನು ಕಾರ್ಯಕರ್ತರು ಒಪ್ಪಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡರು. ಶನಿವಾರ ಗಾಂಧಿ ಭವನದಲ್ಲಿ ಮಹಿಳಾ ಮೀಸಲಾತಿ ಕುರಿತ ವಿಚಾರ ಸಂಕಿರಣದಲ್ಲಿ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ, ತಾವು ಟಿಕೆಟ್‌ ಪಡೆಯಲು ಪಟ್ಟ ಕಷ್ಟದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆಯೇ ಹೇಳಿಕೊಂಡರು.

“ಮೂಡಿಗೆರೆಯಿಂದ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್‌ ಆಕಾಂಕ್ಷಿ ಎಂದು ಗೊತ್ತಾದ ಕೂಡಲೇ ಹಿತೈಷಿಯೊಬ್ಬರು ಹೇಳಿದ ಕಿವಿಮಾತನ್ನು ಪ್ರಸ್ತಾಪಿಸಿದರು. ಪುರುಷ ರಾಜಕಾರಣಿಯ ಮಗ ಅಥವಾ ಮಗಳಾದರೆ ಓಕೆ. ಮಹಿಳಾ ರಾಜಕಾರಣಿಯ ಪುತ್ರ ಆದರೂ ಓಕೆ. ಆದರೆ, ನೀನು ಮಹಿಳಾ ರಾಜಕಾರಣಿಯ ಪುತ್ರಿ ಆಗಿದ್ದಿ. ಹಾಗಾಗಿ ಇದು ಕಷ್ಟದ ಪಯಣ ಎಂದು ಹೇಳಿದ್ದರು. ಟಿಕೆಟ್‌ಗೆ ಪ್ರಯತ್ನ ಪಡುವಾಗ ನನಗೆ ಅದು ಅರಿವಿಗೆ ಬಂತು. ಕಷ್ಟಪಟ್ಟು ಟಿಕೆಟ್‌ ಪಡೆದುಕೊಂಡೆ. ಮೂರನೇ ಪಟ್ಟಿಯಲ್ಲಿ ನನ್ನ ಹೆಸರಿತ್ತು. ನಾನು ಮೂರನೇ ಸ್ಥಾನ ಪಡೆಯಬಹುದು, ಠೇವಣಿ ಕಳೆದುಕೊಳ್ಳಬಹುದು ಎಂದೇ ಎಲ್ಲರೂ ನಂಬಿದ್ದರು. ಆದರೆ ಎಲ್ಲರ ನಿರೀಕ್ಷೆಗೂ ಮೀರಿ ವಿಜಯಿಯಾದೆ. ಇದೆಲ್ಲ ನೋಡುವಾಗ ಮಹಿಳಾ ಮೀಸಲಾತಿ ಮಸೂದೆ ಪಾಸಾಗಿರುವುದು ಖುಷಿ ತಂದಿದೆ. ಬಹುಶಃ ಮುಂದಿನ ಸಲವಾದರೂ ಕಷ್ಟ ಪಡದೇ ಟಿಕೆಟ್‌ ಪಡೆಯಬಹುದು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ, “ನಮಗೂ ಅನೇಕ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್‌ ನೀಡಬೇಕು ಎಂಬ ಮನಸ್ಸಿದ್ದರೂ ಆಂತರಿಕ ಸಮೀಕ್ಷೆಯಲ್ಲಿ ಹೆಣ್ಣುಮಕ್ಕಳಿಗೆ ಹೆಚ್ಚು ಬೆಂಬಲ ಸಿಗುತ್ತಿಲ್ಲ. ನಿನಗೂ ಸಮೀಕ್ಷೆಯಲ್ಲಿ ಬೆಂಬಲ ಸಿಕ್ಕಿರಲಿಲ್ಲ. ಕಾರ್ಯಕರ್ತರು ಒಪ್ಪದಿದ್ದರೆ ಏನೂ ಮಾಡಲು ಸಾಧ್ಯವಿಲ್ಲ. ನಿನ್ನಮ್ಮ ಶಾಸಕಿಯಾಗಿದ್ರು, ಆ ಕ್ಷೇತ್ರದಲ್ಲಿ ಮಹಿಳೆಯರ ಪರ ಕೆಲಸ ಮಾಡಿದ ಕಲ್ಚರ್‌ ಇದೆ. ಹಾಗಾಗಿ ನೀನು ಗೆದ್ದು ಬಂದೆ. ಅದು ಯಾವುದೇ ಪಕ್ಷವಾದರೂ ಅಷ್ಟೇ. ಪುರುಷ ಆಕಾಂಕ್ಷಿಗಳು ಹೆಚ್ಚು ಇರುತ್ತಾರೆ. ನನ್ನ ಬಳಿ ಟಿಕೆಟ್‌ ಆಕಾಂಕ್ಷಿ ಮಹಿಳೆಯರು ಬಂದಾಗ, ನೀವೆಲ್ಲ ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ಒತ್ತಾಯಿಸಿ ಹೋರಾಟ ಮಾಡಿ ಎಂದು ಹೇಳಿದ್ದೇನೆ. ಅದು ಜಾರಿಯಾದರೆ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ತಾಲ್ಲೂಕು, ಜಿಲ್ಲಾ ಪಂಚಾಯ್ತಿ, ಪುರಸಭೆ, ಮಹಾನಗರ ಪಾಲಿಕೆಗಳಲ್ಲಿ ಈಗಾಗಲೇ ಮೀಸಲಾತಿ ಕೊಟ್ಟಿದ್ದೇವೆ. ಹಿಂದಿನ ಸಲದ ಬಿಬಿಎಂಪಿಯ 198 ವಾರ್ಡ್‌ಗಳಲ್ಲಿ 103 ಮಂದಿ ಮಹಿಳಾ ಅಭ್ಯರ್ಥಿಗಳಿದ್ದರು. ಅದು ಶೇ 50ಕ್ಕಿಂತ ಹೆಚ್ಚು ಎಂದು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...