ಪಥಸಂಚಲನ ಪಾಲಿಟಿಕ್ಸ್‌ | RSS ನಾಯಕರ ಜೊತೆ ಎಜಿ ಕಚೇರಿಯಲ್ಲಿ ನಡೆದ ಶಾಂತಿ ಸಭೆ

Date:

ಸಚಿವ ಪ್ರಿಯಾಂಕ್‌ ಖರ್ಗೆ ಕ್ಷೇತ್ರವಾದ ಚಿತ್ತಾಪುರದಲ್ಲಿ ಇತ್ತೀಚೆಗೆ ನಡೆದ ಆರ್‌ಎಸ್‌ಎಸ್‌ ಪಥಸಂಚಲನ ಮತ್ತು ಭೀಮ್ ಆರ್ಮಿ ಸೇರಿದಂತೆ ವಿವಿಧ ನಡುವಿನ ಜಟಾಪಟಿ ವಿಚಾರಕ್ಕೆ ಸಂಬಂಧಿಸಿದಂತೆ ಬುಧವಾರ (ನ.5) ಬೆಂಗಳೂರಿನಲ್ಲಿ ಎಜಿ ಕಚೇರಿಯಲ್ಲಿ ಶಾಂತಿ ಸಭೆ ನಡೆದಿದೆ.

ಹೈಕೋರ್ಟ್​ ಆದೇಶದ ಮೇರೆಗೆ ಶಾಂತಿ ಸಭೆ ನಡೆದಿದೆ. ಈ ವೇಳೆ ಅರ್ಜಿದಾರರು ಪ್ರಸ್ತಾವನೆ ಸಲ್ಲಿಸಿದ್ದು, ನ.13 ಅಥವಾ 16ರಂದು ಪಥಸಂಚಲನಕ್ಕೆ ಅನುಮತಿ ಕೋರಿದ್ದಾರೆ. ಪಥಸಂಚಲನ ವಿಚಾರವಾಗಿ ನಡೆದ ಎರಡನೇ ಶಾಂತಿ ಸಭೆ ಇದಾಗಿದ್ದು, ಅಕ್ಟೋಬರ್ 28ರಂದು ಕಲಬುರಗಿಯಲ್ಲಿ ನಡೆದಿದ್ದ ಮೊದಲ ಸಭೆ ವಿಫಲವಾಗಿತ್ತು.

ಬೆಂಗಳೂರಿನ‌ ಅಡ್ವೊಕೇಟ್ ಜನರಲ್ ಎಜಿ ಶಶಿಕಿರಣ್ ಶೆಟ್ಟಿ ಕಚೇರಿಯಲ್ಲಿ ಅರ್ಜಿದಾರ ಅಶೋಕ್ ಪಾಟೀಲ್, ಹಿರಿಯ ವಕೀಲ ಅರುಣ್ ಶ್ಯಾಮ್, ಕಡ್ಲೂರ್ ಸತ್ಯನಾರಾಯಣಾಚಾರ್ಯ, ಎಜಿ ಶಶಿಕಿರಣ್ ಶೆಟ್ಟಿ, ಕಲಬುರಗಿ ಜಿಲ್ಲಾಡಳಿತದ ಅಧಿಕಾರಿಗಳು ಭಾಗಿಯಾಗಿದ್ದರು. ಅಧಿಕಾರಿಗಳು ಭಾಗಿಯಾಗಿದ್ದರು. ಇಂದಿನ ಸಭೆಯಲ್ಲಾದ ತೀರ್ಮಾನದ ವರದಿಯನ್ನ ನ.7ರಂದು ಹೈಕೋರ್ಟ್​ಗೆ ಎಜಿ ತಿಳಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರ್ ಎಸ್ಎಸ್ ಮುಖಂಡ ಪ್ರಹ್ಲಾದ್ ವಿಶ್ವಕರ್ಮ ಸಭೆಯಲ್ಲಿ ರೂಟ್ ಮ್ಯಾಪ್ ಬಗ್ಗೆ ಮಾಹಿತಿ, ನವೆಂಬರ್ 13 ಅಥವಾ 16 ರಂದು ಪಥಸಂಚಲನ ಮಾಡುವುದಾಗಿ ತಿಳಿಸಿದರು. ಗಣವೇಷಧಾರಿಗಳು ಮಾತ್ರ ಪಥ ಸಂಚಲದಲ್ಲಿ ಭಾಗಿಯಾಗಲಿದ್ದಾರೆ. 850 ಮಂದಿ ಮಾತ್ರ ಗಣವೇಷಧಾರಿಗಾಳು ಮಾತ್ರ ಇರಲಿದ್ದಾರೆ. ಸಂಜೆ 3 ಗಂಟೆಯಿಂದ 6 ಗಂಟೆವರೆಗೆ ಮಾತ್ರ ಪಥಸಂಚಲನ ಮಾಡಲಿದ್ದೇವೆ. ಜೊತೆಗೆ ನಾಲ್ಕು ಲೈನ್ ಪಥಸಂಚಲನದ ಬದಲಿಗೆ ಮೂರು ಲೈನ್ ನಲ್ಲಿ ಹೋಗುತ್ತೇವೆ” ಎಂದು ಹೇಳಿದರು.

“ಹೊರಗಡೆ ಅವರಿಗೆ ಬರಬೇಡಿ ಎಂದು ಸೂಚನೆ ನೀಡಿದ್ದೇವೆ. ನಮಗೆ ಅವಕಾಶ ನೀಡದ ದಿನ ಬೇರೆ ಸಂಘಟನೆಗಳಿಗೆ ಅವಕಾಶ ಕೊಡಬೇಡಿ. ಫಥಸಂಚಲನದಲ್ಲಿ ಕಲಬುರ್ಗಿಯ ಆರ್ ಎಸ್ ಎಸ್ ಕಾರ್ಯಕರ್ತರಿಗೆ ಮಾತ್ರ ಅವಕಾಶ ಕೊಡಿ” ಎಂದು ಎ ಜಿ ಶಶಿಕಿರಣ್ ಶೆಟ್ಟಿ ಅವರಿಗೆ ವಿನಂತಿಸಿದರು.

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನದ ವಿಚಾರವಾಗಿ ಹೈಕೋರ್ಟ್​ ಸೂಚನೆ ಮೇರೆಗೆ ಅಕ್ಟೋಬರ್ 28ರಂದು ಕಲಬುರಗಿಯಲ್ಲಿ 10 ಸಂಘಟನೆಗಳ ಜತೆ ನಡೆದ ಸಾಂತಿಸಭೆ ವಿಫಲವಾಗಿತ್ತು. ಡಿಸಿ ಫೌಜಿಯಾ, SP ಅಡ್ಡೂರು ಶ್ರೀನಿವಾಸಲು ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಆರ್​ಎಸ್​ಎಸ್​ ಹಾಗೂ ಭೀಮ್ ಆರ್ಮಿ ನಡುವೆ ವಾಗ್ವಾದ ನಡೆದಿದ್ದರಿಂದ ಯಾವುದೇ ನಿರ್ಧಾರ ಆಗಿರಲಲ್ಲಿಲ್ಲ. ಈ ವಿಚಾರವಾಗಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಕೋರ್ಟ್​ ಅಂತಿಮವಾಗಿ ನವೆಂಬರ್ 5ರಂದು ಬೆಂಗಳೂರಿನ‌ ಅಡ್ವೊಕೇಟ್ ಜನರಲ್ ಕಚೇರಿಯಲ್ಲಿ ಮತ್ತೊಂದು ಶಾಂತಿ ನಡೆಸಲು ಸೂಚಿಸಿ ವಿಚಾರಣೆಯನ್ನು ನವೆಂಬರ್ 7ಕ್ಕೆ ಮುಂದೂಡಿತ್ತು.

ಸಭೆಯಲ್ಲಿ ಶಾಂತಿ ಭಂಗ ಉಂಟಾಗಬಹುದು ಎಂಬ ಕಾರಣದಿಂದ ಹಾಗೂ ಉಳಿದ ಸಂಘಟನೆಗಳು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸದ ಹಿನ್ನೆಲೆಯಲ್ಲಿ, ಭೀಮ್ ಆರ್ಮಿ ಸೇರಿದಂತೆ ಇತರ 9 ಸಂಘಟನೆಗಳಿಗೂ ಆಹ್ವಾನ ನೀಡಲಾಗಿಲ್ಲ. ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಆರ್‌ಎಸ್‌ಎಸ್‌ ಮುಖಂಡರಿಗೆ ಮಾತ್ರ ಹಾಜರಾಗುವಂತೆ ತಿಳಿಸಲಾಗಿದೆ. ಸಭೆಯಲ್ಲಿ ಆರ್‌ಎಸ್‌ಎಸ್‌ ಮುಖಂಡರ ಮತ್ತು ವಕೀಲರ ಲಿಖಿತ ಹೇಳಿಕೆಗಳನ್ನು ಎಜಿ ಮತ್ತು ಜಿಲ್ಲಾಡಳಿತ ಪಡೆದುಕೊಂಡಿದ್ದು, ನ್ಯಾಯಾಲಯಕ್ಕೆ ಸಲ್ಲಿಸಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...