ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯದ ಸತ್ಯ ಜನರಿಗೆ ಕಂಡಿದೆ: ಬಸವರಾಜ ಬೊಮ್ಮಾಯಿ

Date:

ರಾಜ್ಯ ಸರ್ಕಾರದಿಂದ ಉತ್ತರ ಕರ್ನಾಟಕ ಅಷ್ಟೇ ಅಲ್ಲ ಇಡಿ ಕರ್ನಾಟಕದಲ್ಲಿ ಯಾವುದೇ ಮೂಲ ಸೌಕರ್ಯಗಳ ಕಾಮಗಾರಿಗಳು ಪ್ರಾರಂಭವಾಗದಿರುವುದು ಕಟು ಸತ್ಯದ ಅನುಭವ ಜನರಿಗೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅಭಿವೃದ್ಧಿ ವಿಚಾರಗಳ ಕುರಿತು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, “ಹೊಸ ಸರ್ಕಾರ ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಸಂದರ್ಭದಲ್ಲಿ ಉತ್ತರ ಕರ್ನಾಟಕದ ಬಗ್ಗೆ ವಿಶೇಷ ಚರ್ಚೆ ಮತ್ತು ಸಮರ್ಪಕವಾಗಿ ಉತ್ತರವನ್ನು ಉತ್ತರ ಕರ್ನಾಟಕದ ಜನರು ನಿರೀಕ್ಷೆ ಮಾಡಿದ್ದರು. ಆದರೆ, ಯಾವುದೇ ಅಭಿವೃದ್ಧಿ ಪರ ನಿರ್ಣಯಗಳನ್ನು ಸರ್ಕಾರ ಘೋಷಿಸಲಿಲ್ಲ” ಎಂದಿದ್ದಾರೆ.

“ಕೃಷ್ಣಾ ಮೇಲ್ದಂಡೆ ಹಂತ 3 ರ 130 ಟಿಎಂಸಿ ನೀರು ಬಳಕೆ ಮಾಡಲು ನಮ್ಮ ಸರ್ಕಾರ ಪ್ರಾರಂಭ ಮಾಡಿರುವ ಪುನರ್ ವಸತಿ ಮತ್ತು ಪುನರ್‌ ನಿರ್ಮಾಣನಕ್ಕೆ‌ ಈ ವರ್ಷ ಒಂದು ರೂಪಾಯಿಯನ್ನೂ ಬಿಡುಗಡೆ ಮಾಡಿಲ್ಲ. ಇದು ತಮ್ಮ ಸರ್ಕಾರಕ್ಕೆ ಇರುವ ಅಸಡ್ಡೆ ಭಾವನೆ ಗೊತ್ತಾಗುತ್ತದೆ. ಅದೇ ರೀತಿ ಮಹದಾಯಿ ಯೋಜನೆಗೆ ಕೇಂದ್ರ ಸರ್ಕಾರ ಡಿಪಿಆರ್ ಗೆ ಅನುಮೋದನೆ ಕೊಟ್ಟಿದ್ದು ಅರಣ್ಯ ಇಲಾಖೆಯ ಅನುಮತಿ ಪಡೆಯಲು ತೆಗೆದುಕೊಂಡ ಕ್ರಮದ ಬಗ್ಗೆ ವಿವರಣೆಯನ್ನು ಕೊಡದಿರುವುದು ನೋಡಿದರೆ ತಮ್ಮ ಐದು ವರ್ಷದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳುವ ಬಗ್ಗೆ ತಮ್ಮ ಆಸಕ್ತಿ ಇಲ್ಲದಂತೆ ಕಾಣಿಸುತ್ತದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತುಂಗಭದ್ರ ಸಮತೋಲನ ಜಲಾಶಯಕ್ಕೆ ನಮ್ಮ ಸರ್ಕಾದ ಡಿಪಿಆರ್ ಮಾಡಿದೆ. ಕೂಡಲೇ ನೆರೆ ರಾಜ್ಯಗಳೊಂದಿಗೆ ಮಾತನಾಡಿ, ಯೋಜನೆ ಜಾರಿಗೆ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸುತ್ತೇನೆ. ಉತ್ತರ ಕರ್ನಾಟಕದ ಸಾಸಲಟ್ಟಿ ಶಿವಲಿಂಗೇಶ್ವರ, ಮಂಟೂರು ಮಹಾಲಕ್ಷ್ಮೀ ಮತ್ತು ಶ್ರೀವೆಂಕಟೇಶ್ವರ ಏತ ನೀರಾವರಿ ಸೇರಿದಂತೆ ಹಲವಾರು ಏತ ನೀರಾವರಿ ಯೋಜನೆಗಳಿಗೆ ನಮ್ಮ ಸರ್ಕಾರ ಚಾಲನೆ ನೀಡಿದೆ ಅವುಗಳನ್ನು ಮುಂದುವರೆಸುವ ಬಗ್ಗೆ ಬಜೆಟ್ ನಲ್ಲಿ ಯಾವುದೆ ಹಣ ಮೀಸಲಿಡದಿರುವುದು ಅಧಿವೇಶನದಲ್ಲಿಯೂ ಪ್ರಸ್ತಾಪಿಸದೇ ಇರುವುದು ಹಲವಾರು ಜಿಲ್ಲೆಗಳ ನೀರಾವರಿಗೆ ಹಿನ್ನಡೆ ಆಗುವುದು ಖಚಿತ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜಕೀಯ ಸಂಸ್ಕೃತಿಯನ್ನು ಅಧೋಗತಿಗೆ ತಳ್ಳುತ್ತಿರುವ ಬಿಜೆಪಿ ಅಂತಃಕಲಹ

“ಹುಬ್ಬಳ್ಳಿಯಲ್ಲಿ ಎಫ್ ಎಂಸಿಜಿಗೆ ನಮ್ಮ ಸರ್ಕಾರ ಜಮೀನು ಮಂಜೂರು ಮಾಡಿ ವಿಶೇಷ ರಿಯಾಯ್ತಿ ನೀಡಿದೆ. ಸುಮಾರು 1 ಲಕ್ಷ ಜನರಿಗೆ ಉದ್ಯೋಗ ನೀಡುವ ಯೋಜನೆಗೆ ತಮ್ಮ ಸರ್ಕಾರ ಯಾವುದೇ ಮುಂದಿನ ಕ್ರಮ ಕೈಗೊಳ್ಳದಿರುವುದು ದುರದೃಷ್ಟಕರ. ರಾಯಚೂರಿನಲ್ಲಿ‌ ಉದ್ದೇಶಿತ ಫಾರ್ಮಾ ಪಾರ್ಕ್ ಬಗ್ಗೆಯೂ ಕೂಡ ತಮ್ಮ ಉತ್ತರದಲ್ಲಿ ತಾವು ಪ್ರಸ್ತಾಪಿಸಲಿಲ್ಲ. ವಿಜಯಪುರ ಜಿಲ್ಲೆಯಲ್ಲಿ ದ್ರಾಕ್ಷಿ ಬೆಳೆಯ ಸಂಸ್ಕರಣ ಮತ್ತು ಶೀತಲ ಘಟಕ ಸ್ಥಾಪನೆಗೆ ನಮ್ಮ ಸರ್ಕಾರ ಇದ್ದಾಗ 100 ಕೋಟಿ ರೂ. ಮಂಜೂರು ಮಾಡಿದ್ದು ಈ ಬಗ್ಗೆ ಯಾವುದೇ ಭರವಸೆ ನೀಡದಿರುವುದು ನಿರಾಸೆಯಾಗಿದೆ” ಎಂದು ತಿಳಿಸಿದ್ದಾರೆ.

“ವಿಜಯಪುರ ವಿಮಾನ ನಿಲ್ದಾಣ ಪೂರ್ಣಗೊಳ್ಳುವ ಹಂತದಲ್ಲಿದ್ದರೂ ಕೂಡ ಈ ವರ್ಷದ ಬಜೆಟ್ ನಲ್ಲಿ ಹಣ ಮೀಸಲಿಟ್ಟಿಲ್ಲ. ಕೊಪ್ಪಳ ಮತ್ತು ರಾಯಚೂರು ವಿಮಾನ‌ನಿಲ್ದಾಣಕ್ಕೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ಇಟ್ಟ ಹಣ ಪ್ರಯೋಜನ ಪಡೆಯಲು ತಮ್ಮ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್‌ ಘೊಷಣೆ ಏನಾಯ್ತು? ಉತ್ತರ ಕರ್ನಾಟಕದ ಪ್ರಮುಖ ರೈಲ್ವೆ ಯೋಜನೆಗಳಾದ ಧಾರವಾಡ- ಬೆಳಗಾವಿ, ಬಾಗಲಕೋಟೆ- ಕುಡಚಿ, ಮುಮಿರಾಬಾದ್ – ಗಿಣಿಗೆರಾ-ರಾಯಚೂರು, ಗದಗ- ವಾಡಿ ಯೋಜನೆಗಳನ್ನು ಮಾಡುವ ಮುಖಾಂತರ ಪ್ರವಾಸೋದ್ಯಮಕ್ಕೆ ಉತ್ತೇಜನ ಕೊಡಲು ಸಾಧ್ಯ. ಆದರೆ, ತಮ್ಮ ಸರ್ಕಾರದ ಯಾವುದೇ ಕ್ರಮ ಈ ದಿಕ್ಕಿನಲ್ಲಿ‌ ಕಾಣಿಸುತ್ತಿಲ್ಲ” ಎಂದು ಹೇಳಿದ್ದಾರೆ.

“ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದ ಅಭಿವೃದ್ದಿಗೆ ಯೋಜನೆ ರೂಪಿಸಲಾಗಿದ್ದು, ಈ ಬಗ್ಗೆ ನಿಮ್ಮ ಸರ್ಕಾರ ಆಲೋಚನೆ ಮಾಡಿಲ್ಲ. ಈಗಾಗಲೇ ನಮ್ಮ ಸರ್ಕಾರದ ಅವಧಿಯಲ್ಲಿ ಹುಬ್ಬಳ್ಳಿ ಪ್ರಾರಂಭವಾಗಿರುವ ಜಯದೇವ ಹೃದ್ರೋಗ ಸಂಸ್ಥೆ ಹಾಗೂ ಬೆಳಗಾವಿಯಲ್ಲಿ ಕಿದ್ವಾಯಿ ಸಂಸ್ಥೆಗಳಿಗೆ ಅನುದಾನ ಘೋಷಣೆ ಮಾಡುತ್ತಾರೆನ್ನುವ ನಿರೀಕ್ಷೆ ಹುಸಿಯಾಗಿದೆ. ಹಾವೇರಿಯಲ್ಲಿ ಮೆಡಿಕಲ್ ಕಾಲೇಜ್ ಆರಂಭಿಸಿದ್ದು ಅಗತ್ಯ ಹಣ ಬಿಡುಗಡೆ ಮಾಡಬೇಕು. ಹಾವೇರಿ ಮೆಗಾ ಡೈರಿಗೆ ಕೂಡಲೆ ಹಣ ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

“ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ನೂತನ ವಿಶ್ವ ವಿದ್ಯಾಲಯಗಳನ್ನು ಅನುದಾನದ ಕೊರತೆ ನೆಪ ಹೇಳಿ ವಿಶ್ವ ವಿದ್ಯಾಲಯಗಳನ್ನು ಮುಚ್ಚಲು ಮುಂದಾಗುತ್ತಿರುವುದು ಹಿಂದುಳಿದ ಜಿಲ್ಲೆಗಳು ಮತ್ತು ಬಡ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಅನ್ಯಾಯ ಮಾಡಿದಂತಾಗುತ್ತದೆ. ಆದ್ದರಿಂದ ನೂತನ ವಿಶ್ವ ವಿದ್ಯಾಲಯಗಳನ್ನು ಅನುದಾನದ ಕೊರತೆ ನೆಪದಲ್ಲಿ ಮುಚ್ಚುವ ಪ್ರಸ್ತಾಪವನ್ನು ಕೈಬಿಡಬೇಕು” ಎಂದು ಬೊಮ್ಮಾಯಿ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...