ಈದಿನ.ಕಾಮ್ ಮೇಲೆ‌ ಜನರ ನಂಬಿಕೆ ಮೂಡಿದೆ: ಶಾಸಕ‌ ಬಿ.ಆರ್ ಪಾಟೀಲ್

Date:

“ಹಲವು ಮಾಧ್ಯಮಗಳು ಗಾಸಿಪ್, ವಿವಾದಗಳ ಕುರಿತೇ ಹೆಚ್ಚು ಮಾತನಾಡುತ್ತವೆ. ಜನರ ಅಳಲಿಗೆ ಕಿವಿಗೊಡುವುದಿಲ್ಲ. ಇಂತಹ ಸಮಯದಲ್ಲಿ ಜನರದನಿಯಾಗಿ ಕೆಲಸ ಮಾಡಲು ರೂಪುಗೊಂಡಿರುವ ಈದಿನ.ಕಾಮ್ ಮೇಲೆ‌ ಜನರ ನಂಬಿಕೆ ಮೂಡಿದೆ. ರಾಜ್ಯದ ಹಿಂದುಳಿದ‌ ಸಮುದಾಯಗಳು ಮತ್ತು ಪ್ರದೇಶಗಳ‌ ದನಿಯಾಗಿರುವುದು ಸ್ವಾಗತಾರ್ಹ” ಎಂದು ಆಳಂದ ಶಾಸಕ ಬಿ.ಆರ್ ಪಾಟೀಲ್‌ ಹೇಳಿದರು.

ಕಲಬುರಗಿಯಲ್ಲಿ ನಡೆದ ಈದಿನ.ಕಾಮ್‌ ‘ಓದುಗರ ಸಮಾವೇಶ’ದಲ್ಲಿ ‘ಜೈ ಹಿಂದ್ – ಜಯ ಕರ್ನಾಟಕ’ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.

“ಕರ್ನಾಟಕದಲ್ಲಿ ಲಂಕೇಶ್ ಪತ್ರಿಕೆ ತನ್ನದೇ ಛಾಪು ಮೂಡಿಸಿದೆ. ಜನರನ್ನು ಜಾಗೃತಿಗೊಳಿಸಿದೆ. ಅಂತೆಯೇ‌ ಕೆಲವು ಪತ್ರಿಕೆಗಳು ಕಾರ್ಟೂನ್‌ಗಳ ಮೂಲಕವೂ ಜನರನ್ನು ಎಚ್ಚರಿಸುವ ಕೆಲಸ ಮಾಡಿದೆ. ಅದೇ ಹಾದಿಯಲ್ಲಿ ಈದಿನ.ಕಾಮ್ ಸಾಗುತ್ತಿದೆ. ಲಂಕೇಶ್ ಪತ್ರಿಕೆಯಂತೆ ಈದಿನ.ಕಾಮ್ ಕೂಡ ಜನರ ದನಿಯಾಗಿ ಬೆಳೆಯುವ ವಿಶ್ವಾಸವಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದ ಹಲವು ಮಂತ್ರಿಗಳಿಗೆ ಔರಾದ, ಶಹಾಪುರ ಎಲ್ಲಿದೆ ಎಂಬುದೇ ಗೊತ್ತಿಲ್ಲ. ಅವರಿಗೆ ಯಾವ ಪ್ರದೇಶದಲ್ಲಿ ಏನಿದೆ ಎಂಬುದರ ಅರಿವಿಲ್ಲ. ಕಲ್ಯಾಣ ಕರ್ನಾಟಕಕ್ಕೆ ಬಹಳ ಅನ್ಯಾಯವಾಗಿದೆ. ಈ ಭಾಗದ ಹಲವು ಪ್ರದೇಶಗಳಿಗೆ ಹೆದ್ದಾರಿಗಳೇ ಇಲ್ಲ. ಸುತ್ತಿ-ಬಳಸಿ ಹೋಗಬೇಕು. ಹಿಂದುಳಿದ ಪ್ರದೇಶಗಳ‌ ಸಮಸ್ಯೆ ಕುರಿತು ಸದನದಲ್ಲೂ ಚರ್ಚೆಗೆ ಹೆಚ್ಚು ಅವಕಾಶ ದೊರೆಯುತ್ತಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಈದಿನ.ಕಾಮ್ ದುಡಿವ, ತಳ ಸಮುದಾಯಗಳ ಹಾಗೂ ಹಿಂದುಳಿದ ಪ್ರದೇಶಗಳಿಗಾಗಿ ಇರುವ ಪಕ್ಷಪಾತಿ ಮಾಧ್ಯಮ: ಡಾ. ಎಚ್.ವಿ ವಾಸು

“ಕನಿಷ್ಟ 100 ದಿನ‌ವಾದರೂ ಸದನ ನಡೆಯಬೇಕೆಂದು ನಾವು ನಿರ್ಣಯ ಮಾಡಿದ್ದೆವು. ಆದರೆ, ರಾಜ್ಯದಲ್ಲಿ ಕೇವಲ 35 ದಿನ ಸದನ ನಡೆಯುತ್ತದೆ. ಉತ್ತರ ಪ್ರದೇಶದಂತಹ ಬೃಹತ್ ರಾಜ್ಯದಲ್ಲಿ ಬರೀ‌ 17 ದಿನ ಮಾತ್ರವೇ ಅಧಿವೇಶನ ನಡೆಯುತ್ತದೆ. ಸಂಸತ್ ಅಧಿವೇಶನ ನಡೆಯುವ ದಿನಗಳೂ‌ ಕಡಿಮೆಯಾಗಿವೆ. ಕರ್ನಾಟಕದ ಸದನದಲ್ಲಿ‌ಕಲ್ಯಾಣ ಕರ್ನಾಟಕ ಬಹುತೇಕ ಶಾಸಕರು ಭಾಗಿಯಾಗುವುದೇ ಇಲ್ಲ. ಈ ಭಾಗದ ಜನರ ಸಮಸ್ಯೆಗಳ ಕುರಿತು ಪ್ರಶ್ನೆ ಎತ್ತುವುದೇ ಇಲ್ಲ. ಸದನವು ಬಹುತೇಕ ಕರಾವಳಿ, ಮಲೆನಾಡು ಹಾಗೂ ಮೈಸೂರು ಭಾಗದ ಚರ್ಚೆಗೆ ಸೀಮಿತವಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...