ಪರವಾನಗಿ ಭೂ ಮಾಪಕರ ಖಾಯಂ ಅಸಾಧ್ಯ, ಅವರ ಸಹಾಯಕ್ಕೆ ಸರ್ಕಾರ ಬದ್ಧ: ಸಚಿವ ಕೃಷ್ಣ ಬೈರೇಗೌಡ

Date:

ಪರವಾನಗಿ ಭೂ ಮಾಪಕರನ್ನು ಖಾಯಂಗೊಳಿಸುವುದು ಅಸಾಧ್ಯ. ಆದರೆ, ಅವರ ಮೇಲೆ ಸರ್ಕಾರಕ್ಕೆ ಸಹಾನುಭೂತಿ ಇದ್ದು, ಅವರ ಕಲ್ಯಾಣಕ್ಕೆ ಹಾಗೂ ಘನತೆಯ ಜೀವನಕ್ಕೆ ಉದಾರ ಮನಸ್ಸಿನಿಂದ ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಮಂಗಳವಾರ ವಿಧಾನ ಪರಿಷತ್ನಲ್ಲಿ ಸದಸ್ಯರಾದ ಶಿವಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ಪರವಾನಗಿ ಭೂ ಮಾಪಕರನ್ನು ಖಾಲಿ ಹುದ್ದೆಗಳನ್ನು ತುಂಬಿಸುವುದಕ್ಕಾಗಿ ಸರ್ಕಾರ ನೇಮಕ ಮಾಡಿಲ್ಲ. ಬದಲಾಗಿ ಗುತ್ತಿಗೆ ಆಧಾರದಲ್ಲಿ ಮಾತ್ರ ನೇಮಕ ಮಾಡಿಕೊಳ್ಳಲಾಗಿದೆ. ಸರ್ವೇ ಇಲಾಖೆಯಲ್ಲಿ ಖಾಲಿ ಹುದ್ದೆಗಳೇ ಇಲ್ಲದ ಮೇಲೆ ಗುತ್ತಿಗೆ ನೌಕರರನ್ನು ಖಾಯಂ ಮಾಡುವುದು ಹೇಗೆ” ಎಂದು ಮರು ಪ್ರಶ್ನೆ ಹಾಕಿದರು.

“ಅಸಲಿಗೆ ಇಲಾಖೆಯಲ್ಲಿ 750 ಸರ್ಕಾರಿ ಹುದ್ದೆ ಖಾಲಿ ಇದೆ. ಆದರೆ, ಅದಕ್ಕೂ ಇದಕ್ಕೂ ಸಂಬಂಧವೇ ಇಲ್ಲ. ಏಕೆಂದರೆ ನಾವು ಗುತ್ತಿಗೆ ನೌಕರರನ್ನು ಖಾಯಂ ಮಾಡಲು ಮುಂದಾದರೆ ತುಂಬಾ ಪ್ರಚಲಿತದಲ್ಲಿರುವ ಉಮಾದೇವಿ ಪ್ರಕರಣ ಎದುರಾಗುತ್ತದೆ. ಈ ಪ್ರಕರಣದಲ್ಲಿ ಗುತ್ತಿಗೆ ನೌಕರರನ್ನು ಖಾಯಂಗೊಳಿಸಲು ಅವಕಾಶ ಇಲ್ಲ ಎಂಬ ಸುಪ್ರೀಂ ಕೋರ್ಟ್ ತೀರ್ಪು ಅಡ್ಡ ಬರುತ್ತದೆ. ಇದಲ್ಲದೆ, ಈ ಹಿಂದೆ ಪರವಾನಗಿ ಭೂ ಮಾಪಕರು ತಮ್ಮನ್ನು ಖಾಯಂಗೊಳಿಸುವಂತೆ ಕೆಐಟಿ ಯಲ್ಲಿ ಅರ್ಜಿ ಹಾಕಿದ್ದರು. ವಾದ-ವಿವಾದ ಆಲಿಸಿದ ಕೆಐಟಿ ಸಹ ಖಾಯಂಗೊಳಿಸಲು ಬರೋದಿಲ್ಲ ಎಂದು ಆ ಮನವಿಯನ್ನೇ ತಿರಸ್ಕಾರ ಮಾಡಿದೆ. ಹೀಗಾಗಿ ಪರವಾನಗಿ ಭೂ ಮಾಪಕರನ್ನು ಖಾಯಂ ನೌಕರರಾಗಿ ನೇಮಕ ಮಾಡುವುದು ಕಾನೂನಿನ ಅಡಿಯಲ್ಲಿ ಅಸಾಧ್ಯ” ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪರವಾನಗಿ ಭೂ ಮಾಪಕರ ಜೀವನಕ್ಕೂ ಅನುಕೂಲ ಮಾಡಿಕೊಡಬೇಕು ಎಂಬ ಸಹಾನುಭೂತಿ ಸರ್ಕಾರಕ್ಕೆ ಇದೆ. ಇದೇ ಕಾರಣಕ್ಕೆ ಅವರಿಗೆ ದರ್ಖಾಸ್ತು ಪೋಡಿ ಮಾಡಲು ಅನುಕೂಲ ಮಾಡಿಕೊಟ್ಟಿದ್ದೇವೆ. ಈ ಹಿಂದೆ ಸರ್ವೇ ಮಾಡಿದರೆ ಸರ್ವೇ ಶುಲ್ಕವನ್ನು ರೈತರು ಪಾವತಿಸುತ್ತಿದ್ದರು. ಆದರೆ, ದರ್ಖಾಸ್ತು ಪೋಡಿ ವಿಚಾರದಲ್ಲಿ ನಾವೇ ರೈತರ ಮನೆ ಬಾಗಿಲಿಗೆ ಹೋಗಿ ಸರ್ವೇ ಕೆಲಸ ಮುಗಿಸಿ ಪೋಡಿ ಮಾಡಿಕೊಡುತ್ತಿರುವ ಕಾರಣ ಅವರಿಂದ ಯಾವುದೇ ಶುಲ್ಕ ಪಡೆಯದೆ ಉಚಿತವಾಗಿ ಮಾಡಿಕೊಡುತ್ತಿದ್ದೇವೆ. ಹೀಗಾಗಿ ಸರ್ಕಾರವೇ ಪರವಾನಗಿ ನೌಕರರಿಗೆ ಆ ಶುಲ್ಕವನ್ನು ನೀಡುತ್ತಿದೆ. ಕೆರೆ ಅಳತೆ ಮಾಡಿದ್ರೂ ಸಹ ಖಾಸಗಿ ಸರ್ವೇಯರ್ಗಳ ಸಂಭಾವನೆಗೆ ಸಮಾಂತರವಾಗಿ ಗೌರವ ಧನ ನೀಡುತ್ತಿದ್ದೇವೆ” ಎಂದು ಮಾಹಿತಿ ನೀಡಿದರು.

“ಸರ್ಕಾರಿ ಕೆಲಸ ಮಾಡಿದ್ರೆ ಪರವಾನಗಿ ನೌಕರರಿಗೂ ಸಂಭಾವನೆ ಸಿಗಬೇಕು ಎಂದು ನಿರ್ಧಾರ ಮಾಡಿದ್ದು ಸಹ ನಾವೆ. ಮೊದಲು ಇದಕ್ಕೆ ಪ್ರಾವಿಷನ್ ಇರಲಿಲ್ಲ, ಅವರು ತಮ್ಮ ಕೆಲಸವನ್ನು ಉಚಿತವಾಗಿ ಮಾಡಬೇಕಿತ್ತು. ಆದರೆ, ನಾನು ಕಳೆದ ಏಪ್ರಿಲ್ನಲ್ಲಿ ಲೆಕ್ಕಹಾಕಿ ಉತ್ತಮವಾಗಿ ಕೆಲಸ ಮಾಡಿದವರಿಗೆ ಒಂದು ಲಕ್ಷದ ವರೆಗೆ ಹಣ ನೀಡಿದ್ದೇನೆ” ಎಂದು ತಿಳಿಸಿದರು.

ಬಾಂದ್ ಜವಾನರ ಬಗ್ಗೆಯೂ ಗಮನ ಸೆಳೆದ ಸಚಿವರು, “ಬಾಂದ್ ಜವಾನರೆಂದರೆ ಹಿಂದನ ಕಾಲದಲ್ಲಿ ಸರ್ವೇಯರ್ ಹಿಂದೆ ಸರ್ವೇ ಸಾಮಗ್ರಿಗಳನ್ನು ಎತ್ತಿಕೊಂಡು ಓಡಾಡುವವರು. ಇದು ಒಪ್ಪುವಂತಹ ಘನತೆಯ ಕೆಲಸ ಅಲ್ಲ. ಕಾಲ ಬದಲಾದಂತೆ ಎಲ್ಲರೂ ಸ್ವಾಭಿಮಾನದಿಂದ ಬದುಕುವ ವಾತಾವರಣ ನಿರ್ಮಾಣ ಮಾಡಬೇಕು. ಯಾರೂ ಯಾರಿಗೂ ಜವಾನರಾಗಿ ಬದುಕಬಾರದು. ಆ ಕೆಲಸದ ಹೆಸರೇ ಜವಾನ ಅಂತ, ಇಲ್ಲಿ ಯಾರೂ ಜವಾನರಾಗಿ ಬ್ಯಾಗು ಹೊತ್ಕೋಂಡು ಬಾಗಿಲು ಕಾಯೋ ಜವಾನತನ ಸರಿಯಲ್ಲ. ಹೀಗಾಗಿಯೇ ನಾವು ಇಂದು ಎಲ್ಲಾ ಸರ್ವೇಯರ್ಗಳಿಗೆ ಆಧುನಿಕ ತಂತ್ರಜ್ಞಾನ ನಿರ್ಮಿತ ರೋವರ್ ನೀಡುತ್ತಿದ್ದೇವೆ. ಇದು ಡಿಜಿಟಲ್ ಸರ್ವೇ ಯಂತ್ರೋಪಕರಣವಾಗಿದ್ದು, ಸರ್ವೇ ಕೆಲಸ ಮಾಡುವವರಿಗೂ ಘನತೆ ನೀಡಿದೆ” ಎಂದು ಸಂತಸ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...