ಹಿರಿಯ ರಾಜಕಾರಣಿ, ಸಮಾಜವಾದಿ ಚಿಂತಕ ಕೆ.ಎಚ್. ಶ್ರೀನಿವಾಸ್ ಇನ್ನಿಲ್ಲ

Date:

ಹಿರಿಯ ರಾಜಕಾರಣಿ, ಸಮಾಜವಾದಿ ಚಿಂತಕ ಕೆ.ಎಚ್. ಶ್ರೀನಿವಾಸ್(85) ಅವರು ನಿಧನರಾಗಿದ್ದಾರೆ. ಶುಕ್ರವಾರ ಬೆಳಗ್ಗೆ ಸುಮಾರು 11 ಗಂಟೆಗೆ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ.

ಕೆ. ಎಚ್. ಶ್ರೀನಿವಾಸ್ ನಿಧನದ ಬಗ್ಗೆ ಪುತ್ರಿ ವೈಶಾಲಿ ಶ್ರೀನಿವಾಸ್ ಮಾಹಿತಿ ನೀಡಿದ್ದಾರೆ. “ಅಪಾರ ದುಃಖದಿಂದ ನಾನು ನಿಮಗೆ ನನಗಾದ ದೊಡ್ಡ ನಷ್ಟದ ಬಗ್ಗೆ ತಿಳಿಸುತ್ತೇನೆ. ನನ್ನ ತಂದೆ ಕೆ.ಎಚ್. ಶ್ರೀನಿವಾಸ್ ಅವರು ಇನ್ನಿಲ್ಲ. ಅವರು ಇಂದು ಬೆಳಗ್ಗೆ 11 ಗಂಟೆಗೆ ನಮ್ಮ ನಿವಾಸದಲ್ಲಿ ನಿಧನರಾದರು” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಉಡುಪಿ | ಸನ್ಮಾರ್ಗ, ಅನುಪಮ ಪತ್ರಿಕೆಯ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ವೈ ಸಿ ಅಬ್ದುಲ್ಲಾ ನಿಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

1939ರಲ್ಲಿ ಜನಿಸಿದ ಕೆ.ಎಚ್. ಶ್ರೀನಿವಾಸ್ ಅವರು ಶಿವಮೊಗ್ಗ ಜಿಲ್ಲೆಯ ಸಾಗರದವರು. ಇಂಗ್ಲಿಷ್ ಎಂಎ ಜೊತೆಗೆ ಕಾನೂನು ಪದವಿ ಪಡೆದಿದ್ದಾರೆ. ರಾಜಕಾರಣಿ ಮಾತ್ರವಲ್ಲದೇ ಸಾಹಿತ್ಯ, ಸಂಗೀತಕ್ಕೂ ಅವರ ಕೊಡುಗೆ ಅಪಾರ.

ಡಿ ದೇವರಾಜ ಅರಸು ಸರ್ಕಾರದಲ್ಲಿ ಸಚಿವರಾಗಿ ಇಂಧನ, ವಾರ್ತಾ, ಯುವಜನ ಸೇವೆ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯೋಜನಾ ಖಾತೆಗಳನ್ನು ನಿರ್ವಹಿಸಿದ ಕೆ.ಎಚ್. ಶ್ರೀನಿವಾಸ್ ಅವರು ಮೂರು ಬಾರಿ ಶಾಸಕರಾಗಿ ಗೆದ್ದು, ಒಂದು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಗೆಲುವಿಗಿಂತ ಹೆಚ್ಚಾಗಿ ಸೋಲನ್ನೇ ಕಂಡವರು.

ಇದನ್ನು ಓದಿದ್ದೀರಾ? ರಾಜಕೀಯ ಚಿಂತಕ, ಹಿರಿಯ ವಿದ್ವಾಂಸ ಎ ಜಿ ನೂರಾನಿ ಇನ್ನಿಲ್ಲ

ಕುವೆಂಪು-ಗೋಪಾಲಗೌಡರ ಪ್ರಭಾವಕ್ಕೆ ಒಳಗಾಗಿ, ಅನಂತಮೂರ್ತಿ-ಲಂಕೇಶರ ಒಡನಾಟ ಹೊಂದಿದ್ದ ಶ್ರೀನಿವಾಸ್ ಅವರು ಸಮಾಜವಾದಿ ಚಿಂತಕರೂ ಹೌದು. ಕವಿ ಹೃದಯದ, ಸೌಮ್ಯಸ್ವಭಾವದ ವ್ಯಕ್ತಿ ಎಂದೇ ಹೆಸರಾದವರು.

ಕಾನಗೋಡು ಮನೆ, ಒಳಸೊನ್ನೆ ಹೊರಸೊನ್ನೆ, ಚಂದ್ರ ನೀನೊಬ್ಬನೆ ಮೂರು ಕವನ ಸಂಕಲನಗಳು, ಗುಬ್ಬಚ್ಚಿಯ ಗೂಡು ಎಂಬ ಚುಟುಕುಗಳ ಸಂಕಲನ, ಕೀನ್ ಎಂಬ ನಾಟಕ, ಸಾರ್ತೃನ ಪದಚರಿತ, ಸಾದತ್ ಹಸನ್ ಮಾಂಟೊ ಕುರಿತ ಅನುವಾದಿತ ಕೃತಿಗಳನ್ನು ಕನ್ನಡ ಸಾಹಿತ್ಯಲೋಕಕ್ಕೆ ಕೊಡುಗೆಯಾಗಿ ಕೊಟ್ಟವರು.

ಸಾಹಿತ್ಯ, ಸಂಗೀತ, ಕಾನೂನು, ರಾಜಕಾರಣದಲ್ಲಿ ತನ್ನದೇ ಆದ ಛಾಪು ಮೂಡಿಸಿದ ಶ್ರೀನಿವಾಸ್ ಅವರು ಎಲ್ಲ ಕ್ಷೇತ್ರಗಳ ಜನರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದವರು.

ಕೆ. ಎಚ್. ಶ್ರೀನಿವಾಸ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. “ಮಾಜಿ ಸಚಿವರು, ಜನತಾ ಪರಿವಾರದ ಹಿರಿಯ ನಾಯಕರು ಆದ ಕೆ.ಹೆಚ್.ಶ್ರೀನಿವಾಸ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ರಾಜಕೀಯದ ಜೊತೆಗೆ ಕಲೆ, ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿದ್ದ ಬಹುಮುಖಿ ವ್ಯಕ್ತಿ ಶ್ರೀನಿವಾಸ್ ಅವರು ಹಳೆಯ ಮತ್ತು ಹೊಸ ತಲೆಮಾರಿನ ರಾಜಕಾರಣದ ಕೊಂಡಿಯಾಗಿದ್ದರು. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ” ಎಂದು ಸಿಎಂ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...