ಪಿಟಿಐ ಅಧ್ಯಕ್ಷರಾಗಿ ‘ಪ್ರಜಾವಾಣಿ’ಯ ನಿರ್ದೇಶಕ ಕೆ ಎನ್ ಶಾಂತಕುಮಾರ್ ಆಯ್ಕೆ

Date:

ದೇಶದ ಖ್ಯಾತ ಸುದ್ದಿ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ(ಪಿಟಿಐ)ದ ಅಧ್ಯಕ್ಷರಾಗಿ ‘ಪ್ರಜಾವಾಣಿ’ ಕನ್ನಡ ದಿನಪತ್ರಿಕೆಯ ನಿರ್ದೇಶಕ ಕೆ.ಎನ್.ಶಾಂತಕುಮಾರ್ ಆಯ್ಕೆಯಾಗಿದ್ದಾರೆ.

ನವದೆಹಲಿಯ ಸುದ್ದಿ ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಶುಕ್ರವಾರ ನಡೆದ ವಾರ್ಷಿಕ ಸಾಮಾನ್ಯ ಸಭೆಯ ನಂತರ ಪಿಟಿಐಯ ನಿರ್ದೇಶಕರ ಮಂಡಳಿಯ ಸಭೆಯಲ್ಲಿ ಒಂದು ವರ್ಷದ ಅವಧಿಗೆ ಶಾಂತಕುಮಾರ್ ಅವರ ಆಯ್ಕೆ ನಡೆಯಿತು.

ಹಿಂದೂಸ್ತಾನ್ ಟೈಮ್ಸ್‌ನ ಸಿಇಒ ಪ್ರವೀಣ್ ಸೋಮೇಶ್ವರ್ ಅವರನ್ನು ಮಂಡಳಿಯು ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ. ಸತತ ಎರಡು ಅವಧಿಗೆ ಅಧ್ಯಕ್ಷರಾಗಿ ಅವೀಕ್ ಸರ್ಕಾರ್ ಅವರು ಸೇವೆ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆ.ಎನ್.ಶಾಂತಕುಮಾರ್ ಅವರು, ‘ಪ್ರಜಾವಾಣಿ’ ಮತ್ತು ‘ಡೆಕ್ಕನ್ ಹೆರಾಲ್ಡ್’ ಪತ್ರಿಕೆಗಳ ಮಾತೃಸಂಸ್ಥೆಯಾದ ‘ದಿ ಪ್ರಿಂಟರ್ಸ್ (ಮೈಸೂರು) ಪ್ರೈವೇಟ್ ಲಿಮಿಟೆಡ್’ನ (ಟಿಪಿಎಂಎಲ್) ಆಡಳಿತ ಮಂಡಳಿಯ ನಿರ್ದೇಶಕರಾಗಿದ್ದಾರೆ. ಮಯೂರ ಮಾಸಿಕಕ್ಕೆ ಈಗಲೂ ಸಂಪಾದಕರಾಗಿ ಕೆ.ಎನ್.ಶಾಂತಕುಮಾರ್ ಅವರೇ ಸೇವೆ ಸಲ್ಲಿಸುತ್ತಿದ್ದಾರೆ. ಸುಮಾರು ಎಂಟು ಒಲಿಂಪಿಕ್ಸ್‌ಗೆ ಫೋಟೋಗ್ರಾಫರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ.

ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ(ಪಿಟಿಐ) ದೇಶದ ಅತಿದೊಡ್ಡ ಮತ್ತು ಹಳೆಯ ಖಾಸಗಿ ಸುದ್ದಿ ಸಂಸ್ಥೆಯಾಗಿದೆ. ಇದನ್ನು 1947ರಲ್ಲಿ ಸ್ವಾತಂತ್ರ್ಯ ಸಿಕ್ಕ ಎರಡು ವಾರಗಳ ನಂತರ ಇದನ್ನು ಪ್ರಾರಂಭಿಸಲಾಗಿತ್ತು.

ಪಿಟಿಐ ಅಧ್ಯಕ್ಷರಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಶಾಂತಕುಮಾರ್, ‘ಸುದ್ದಿಯ ಜತೆಗೆ ಇತ್ತೀಚೆಗೆ ವಿಡಿಯೊ ಸುದ್ದಿಗಳನ್ನು ನೀಡಲು ಆರಂಭಿಸುವ ಮೂಲಕ ಕುತೂಹಲಕರ ಸಂಕ್ರಮಣ ಕಾಲದಲ್ಲಿರುವ ಸುದ್ದಿ ಸಂಸ್ಥೆ ಪಿಟಿಐನ ಅಧ್ಯಕ್ಷನಾಗಿ ನೇಮಕಗೊಂಡಿರುವುದು ಅತ್ಯಂತ ಸಂತಸ ತಂದಿದೆ’ ಎಂದಿದ್ದಾರೆ.

ಶಾಂತಕುಮಾರ್‌ ಅವರು ‘ದಿ ಪ್ರಿಂಟರ್ಸ್ (ಮೈಸೂರು) ಪ್ರೈವೇಟ್ ಲಿಮಿಟೆಡ್’ನ (ಟಿಪಿಎಂಎಲ್) ಆಡಳಿತ ಮಂಡಳಿಯಲ್ಲಿ 1983ರಿಂದ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸುತ್ತಿದ್ದಾರೆ. ಎಬಿಸಿಯ ಅಧ್ಯಕ್ಷರಾಗಿ, 20 ವರ್ಷಗಳಿಗೂ ಹೆಚ್ಚು ಕಾಲದಿಂದ ಐಎನ್‌ಎಸ್‌ನ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಮತ್ತು ಪಿಟಿಐನ ಈ ಹಿಂದಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ. ಪಿಟಿಐನ ಅಧ್ಯಕ್ಷರಾಗುವ ಪೂರ್ವದಲ್ಲಿ ಅವರು ಇದೇ ಸುದ್ದಿ ಸಂಸ್ಥೆಯ ಉಪಾಧ್ಯಕ್ಷರಾಗಿದ್ದರು.

ಶಾಂತಕುಮಾರ್ ಅವರ ಆಯ್ಕೆ ಕುರಿತು ಪ್ರತಿಕ್ರಿಯಿಸಿರುವ ಪಿಟಿಐನ ಸಿಇಒ ಹಾಗೂ ಸಂಪಾದಕ ವಿಜಯ್ ಜೋಶಿ, ‘ಶಾಂತಕುಮಾರ್ ಅವರಂತಹ ದಕ್ಷತೆಯುಳ್ಳವರು ಸುದ್ದಿ ಸಂಸ್ಥೆಯ ಚುಕ್ಕಾಣಿ ಹಿಡಿದಿರುವುದು ಪಿಟಿಐನ ಅದೃಷ್ಟವೇ ಸರಿ. ವೃತ್ತಪತ್ರಿಕೆಗಳ ವ್ಯವಹಾರದಲ್ಲಿ ಅವರಿಗಿರುವ ಅನುಭವ ಹಾಗೂ ನವಯುಗದ ಡಿಜಿಟಲ್ ಸುದ್ದಿಗಳ ಕುರಿತ ತಿಳಿವಳಿಕೆಯು ಸುದ್ದಿ ಸಂಸ್ಥೆಗೆ ಹೆಚ್ಚಿನ ಪ್ರಯೋಜನವನ್ನು ತಂದುಕೊಡಲಿದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...