ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: ಮೇ 30ರಂದು ರಾಜ್ಯಾದ್ಯಂತ ಹೋರಾಟಕ್ಕೆ ಜನಪರ ಸಂಘಟನೆಗಳ ತೀರ್ಮಾನ

Date:

ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಆರೋಪದಡಿ ದೂರು ದಾಖಲಾಗಿರುವ ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೂಡಲೇ ಬಂಧಿಸಿ, ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕು ಎಂದು ಆಗ್ರಹಿಸಿ ಮೇ 30ರಂದು ಬೃಹತ್ ಹೋರಾಟ ಹಮ್ಮಿಕೊಳ್ಳಲು ಜನಪರ ಸಂಘಟನೆಗಳು ನಿರ್ಧರಿಸಿದೆ.

ಬೆಂಗಳೂರಿನ ಕಸಾಪ ಭವನದಲ್ಲಿ ಹಾಸನ ಜಿಲ್ಲಾ ಜನಪರ ಚಳವಳಿಗಳ ಒಕ್ಕೂಟ ನಡೆಸಿದ ರಾಜ್ಯಮಟ್ಟದ ಸಮಾಲೋಚನಾ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕರ್ನಾಟಕ ರಾಜ್ಯ ಜನಪರ ಚಳವಳಿಗಳ ನೇತೃತ್ವದಲ್ಲಿ ಹೋರಾಟಕ್ಕೆ ಕರೆ ನೀಡಲಾಯಿತು.

ರಾಜ್ಯಾದ್ಯಂತ ಸಹಸ್ರಾರು ಸಂಖ್ಯೆಯಲ್ಲಿ ಜನರು ಸೇರಿ ಬೃಹತ್‌ ಪ್ರತಿಭಟನೆ ನಡೆಸಬೇಕು ಎಂದು ಕರೆ ಕೊಡಲಾಯಿತು. ವಿವಿಧ ಜನಪರ, ರೈತ, ಕಾರ್ಮಿಕ, ಯುವಜನ, ಮಹಿಳಾ, ವಿದ್ಯಾರ್ಥಿ ಸಂಘಟನೆಗಳು ಹೋರಾಟಕ್ಕೆ ಬೆಂಬಲ ಸೂಚಿಸಿದೆ. ಸಭೆಯಲ್ಲಿ ಹತ್ತು ಹಲವು ಸಂಘಟನೆಗಳ ನೂರಾರು ಮುಖಂಡರು, ಹೋರಾಟಗಾರರು, ಚಿಂತಕರು, ಸಾಹಿತಿಗಳು ಭಾಗಿಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯ ಸರಕಾರ ಪ್ರಜ್ವಲ್ ರೇವಣ್ಣನನ್ನು ಕೂಡಲೇ ಬಂಧಿಸಬೇಕು. ಈ ಸಂಬಂಧ ಕೂಡಲೇ ರೆಡ್ ಕಾರ್ನರ್ ನೋಟೀಸ್ ನೀಡಬೇಕು. ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣನ ರಾಜತಾಂತ್ರಿಕ ವೀಸಾವನ್ನು ಕೂಡಲೇ ರದ್ದುಪಡಿಸಿ ಆತ ಜಗತ್ತಿನ ಯಾವುದೇ ದೇಶದಲ್ಲಿದ್ದರೂ ಅಂತಾರಾಷ್ಟ್ರೀಯ ಪೊಲೀಸರ ಸಹಾಯ ಪಡೆದು ಆತನನ್ನು ಕೂಡಲೇ ಬಂಧಿಸಲು ರಾಜ್ಯ ಸರ್ಕಾರಕ್ಕೆ ಸಹಾಯ ನೀಡಬೇಕು. ಸಂತ್ರಸ್ತ ಮಹಿಳೆಯರ ಲೈಂಗಿಕ ವೀಡಿಯೋಗಳು ಮತ್ತು ಚಿತ್ರಗಳನ್ನು ಸಾರ್ವಜನಿಕರಿಗೆ ಪೆನ್‌ಡ್ರೈವ್, ಸಾಮಾಜಿಕ ಮಾಧ್ಯಮ ಮತ್ತಿತರೆ ಸಾಧನಗಳ ಮುಖಾಂತರ ಸಾರ್ವಜನಿಕವಾಗಿ ಹಂಚಲು ಸಂಚು ನಡೆಸಿದ ಹಾಗೂ ಸಾರ್ವಜನಿಕವಾಗಿ ಹಂಚಿದ ವ್ಯಕ್ತಿಗಳನ್ನು ಕೂಡಲೇ ಬಂಧಿಸಬೇಕು. ಅವರ ಮೇಲೆ ಕಠಿಣ ಕಾನೂನು ಪ್ರಕರಣ ದಾಖಲಿಸಬೇಕು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಎಸ್‌ಐಎಲ್‌ ವರದಿಯನ್ನು ಆದಷ್ಟು ಬೇಗ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಆರ್‌ಸಿಬಿ Vs ಚೆನ್ನೈ ಪಂದ್ಯದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂಗೆ ನುಗ್ಗೋದಾಗಿ ಹೇಳಿದ್ದವ ಪೊಲೀಸ್ ಅತಿಥಿ!

ಸಭೆಯಲ್ಲಿ ಹೈ ಕೋರ್ಟ್ ಹಿರಿಯ ವಕೀಲರಾದ ವೆಂಕಟೇಶ್‌, ಜನವಾದಿ ಮಹಿಳಾ ಸಂಘಟನೆಯ ರಾಜ್ಯಾಧ್ಯಕ್ಷೆ ಮೀನಾಕ್ಷಿ ಬಾಳಿ, ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಕೆ.ಎಸ್. ವಿಮಲಾ, ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಗೌರಮ್ಮ ಸಿಐಟಿಯು ರಾಜ್ಯಾಧ್ಯಕ್ಷ ವರಲಕ್ಷ್ಮೀ, ಮೈಸೂರು ಪ್ರಗತಿಪರ ಚಿಂತಕ ಉಗ್ರ ನರಸಿಂಹ ಗೌಡ, ಕರ್ನಾಟಕ ಜನ ಶಕ್ತಿ ಅಧ್ಯಕ್ಷ ಮಲ್ಲಿಗೆ ಕಾಮಾತಿ, ಅಖಿಲ ವಿದ್ಯಾಸಂದ್ರ ಸೇರಿದಂತೆ ಪ್ರಗತಿಪರ ಹೋರಾಟಗಾರರು, ಜನಪರ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...