ಮತಾಂತರ ನಿಲ್ಲಿಸದಿದ್ದರೆ ಒದ್ದು ಓಡಿಸುತ್ತೇವೆ : ಕ್ರೈಸ್ತ ಸಮುದಾಯದವರಿಗೆ ಪ್ರಮೋದ್ ಮುತಾಲಿಕ್ ಎಚ್ಚರಿಕೆ

Date:

‘ರಾಜ್ಯದಲ್ಲಿ 3,600ರಷ್ಟು ಲಂಬಾಣಿ ತಾಂಡಾಗಳಿದ್ದು, ಶೇ 50ರಷ್ಟು ತಾಂಡಾಗಳಿಗೆ ಕ್ರೈಸ್ತರು ಪ್ರವೇಶಿಸಿ ಮತಾಂತರ ಯತ್ನದಲ್ಲಿ ತೊಡಗಿದ್ದಾರೆ. ಈ ಪ್ರಯತ್ನ ನಿಲ್ಲಿಸದಿದ್ದರೆ ಶ್ರೀರಾಮ ಸೇನೆ ಸಂಘಟನೆ ವಿಶೇಷ ಪಡೆ ರಚಿಸಿಕೊಂಡು ಅವರನ್ನು ಒದ್ದು ಓಡಿಸಲಿದೆ’ ಎಂದು ಸಂಘಟನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಎಚ್ಚರಿಸಿದ್ದಾರೆ.

ವಿಜಯಪುರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ನಿಮ್ಮ ಯಾವುದೇ ರೀತಿಯ ಭಜನೆ, ಪ್ರಾರ್ಥನೆ ಚರ್ಚ್‌ ಒಳಗೆ ಇರಲಿ. ಹೊರಗಡೆ, ತಾಂಡಾಗಳಲ್ಲಿ ಮೋಸಮಾಡಿ ನೀವು ಮಾಡುವ ಕೆಲಸವನ್ನು ಏಸು ಒಪ್ಪುವುದಿಲ್ಲ’ ಎಂದರು.

‘ತಾಂಡಾಗಳ ಬಡತನ, ಅನಕ್ಷರತೆಯನ್ನು ಬಳಸಿಕೊಂಡು, ಅವರಿಗೆ ಆಸೆ ತೋರಿಸಿ ಮಾಡುವ ಮತಾಂತರ ಯತ್ನವನ್ನು ತಕ್ಷಣ ನಿಲ್ಲಿಸಬೇಕು. ನಮ್ಮ ಧರ್ಮ, ನಮ್ಮ ದೇವರು ನಮಗೆಲ್ಲ ಶಾಂತಿ, ಸುಖ ಕೊಡುತ್ತಿದ್ದಾನೆ. ಏನೇನೋ ತಪ್ಪು ಮಾಹಿತಿ ನೀಡಿ ಈ ರೀತಿ ಮತಾಂತರ ಮಾಡುವುದನ್ನು ಸರ್ಕಾರ ಹತ್ತಿಕ್ಕಬೇಕು. ಮತಾಂತರ ನಿಷೇಧ ಕಾಯ್ದೆ ಈಗಲೂ ಜಾರಿಯಲ್ಲಿದ್ದು, ಅದನ್ನು ಪಾಲಿಸಬೇಕು’ ಎಂದು ಮುತಾಲಿಕ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗ್ಯಾರಂಟಿಗಳ ಅಸ್ತಿಭಾರದ ಮೇಲೆ ಕಟ್ಟಿದ ಅಹಿಂದ ಬಜೆಟ್

‘ಹಿಂದೂ ರಾಷ್ಟ್ರ ಎಂದಾಗ ಇಲ್ಲಿನ ಮುಸ್ಲಿಮರು ಇದ್ದಾರೆ, ಕ್ರೈಸ್ತರು ಇದ್ದಾರೆ, ಅವರ ಗತಿ ಏನು ಎಂದು ಕೇಳುವವರಿದ್ದಾರೆ. ಅವರು ಇಲ್ಲೇ ಇರುತ್ತಾರೆ, ಬಹುಸಂಖ್ಯಾತರ ಆಚರಣೆ, ಸಂಸ್ಕೃತಿಯನ್ನು ಅವರು ಗೌರವಿಸಿದರೆ ಯಾವುದೇ ತೊಂದರೆ ಇರುವುದಿಲ್ಲ’ ಎಂದರು.

‘ರಾಮಮಂದಿರ ನಿರ್ಮಾಣ ಹಿನ್ನೆಲೆಯಲ್ಲಿ ರಾಜಕೀಯ ಅಧಿಕಾರ ಏಕೆ ತೆಗೆದುಕೊಳ್ಳಬಾರದು? ಇಡೀ ದೇಶದಲ್ಲಿ ರಾಮನ ಪರವಾಗಿ ನಿಂತಿದ್ದೇ ಬಿಜೆಪಿ, ಆರೆಸ್ಸೆಸ್, ವಿಎಚ್‌ಪಿ, ಶ್ರೀರಾಮ ಸೇನೆಯಂತಹ ಸಂಘಟನೆಗಳು. ನಾವು ತ್ಯಾಗ ಮಾಡಿದ್ದೇವೆ. ಕಾಂಗ್ರೆಸ್ ಬಾಬರನ ಪರವಾಗಿ ನಿಂತಿತ್ತು. ರಾಮನ ಹೆಸರು ಎತ್ತಲು ಸಹ ಕಾಂಗ್ರೆಸಿಗರಿಗೆ ಯೋಗ್ಯತೆ ಇಲ್ಲ. ನಾವು ರಾಮರಾಜ್ಯ ಸ್ಥಾಪಿಸುವ ಸಲುವಾಗಿಯೇ ರಾಮನ ಹೆಸರು ಹೇಳುತ್ತೇವೆಯೇ ಹೊರತು ಸ್ವಾರ್ಥಕ್ಕಾಗಿ ಅಲ್ಲ‘ ಎಂದರು.

‘ನಾವೂ ರಾಮಮಂದಿರ ನಿರ್ಮಿಸುತ್ತೇವೆ ಎಂದು ಕಾಂಗ್ರೆಸ್‌ನವರು ಹೇಳುವುದು ಬರೀ ಬುರುಡೆ. ಬಜೆಟ್‌ನಲ್ಲಿ ಇದಕ್ಕಾಗಿ ಒಂದು ರೂಪಾಯಿ ಸಹ ನೀಡಿಲ್ಲ. ಮುಸ್ಲಿಮರಿಗೆ, ಕ್ರೈಸ್ತರಿಗೆ ಹಣ ಇಡಲು ನಿಮಗೆ ಸಾಧ್ಯವಿದೆ. ರಾಮನ ದೇವಸ್ಥಾನಕ್ಕೆ ಏಕೆ ಹಣವಿಲ್ಲ’ ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...