ರಾಜ್ಯದ ಜನರಿಗೆ ಮತ್ತೊಂದು ಬಿಸಿ;ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳಕ್ಕೆ‌ ನಿರ್ಧಾರ

Date:

ಇತ್ತೀಚೆಗೆ ಬೆಲೆ ಏರಿಕೆ ವಿಚಾರ ಭಾಗಿ ಚರ್ಚೆ ಆಕ್ರೋಶಕ್ಕೆ‌ ಕಾರಣವಾಗಿದೆ. ಮೆಟ್ರೋ, ಹಾಲು, ಪೆಟ್ರೋಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ‌ ಏರಿಕೆ ಮಾಡಲಾಗಿದೆ. ಕೇಂದ್ರ, ರಾಜ್ಯ ಸರ್ಕಾರಗಳ ‌ವಿರುದ್ಧ ಭಾರೀ‌ ಆಕ್ರೋಶ ವ್ಯಕ್ತವಾಗಿತ್ತಿದೆ. ಈ ನಡುವೆ, ಈಗ ಖಾಸಗಿ ಬಸ್‌ಗಳ ಟಿಕೆಟ್ ದರವನ್ನೂ ಏರಿಕೆ ಮಾಡಲು ಖಾಸಗಿ ಬಸ್ ಮಾಲೀಕರ ಒಕ್ಕೂಟ ನಿರ್ಧರಿಸಿದೆ.

ಪೆಟ್ರೋಲ್, ಡೀಸೆಲ್‌ ದರ ಏರಿಕೆ ಹಾಗೂ ಟೋಲ್ ದರ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ‌ ಟಿಕೆಟ್ ದರ ಹೆಚ್ಚಸಲು ಖಾಸಗಿ ಬಸ್‌ಗಳ‌ ಮಾಲೀಕರು ಮುಂದಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಡೀಸೆಲ್​ ದರ ಸುಮಾರು ಐದು ರೂಪಾಯಿ ಏರಿಕೆಯಾಗಿದೆ. ಟೋಲ್ ದರವೂ ಹೆಚ್ಚಾಗಿದೆ. ಬಸ್‌ಗಳನ್ನು ಓಡಿಸುವುದು ಹೊರೆಯಾಗುತ್ತಿದೆ. ಹೀಗಾಗಿ, ದರ ಏರಿಸದಿದ್ದರೆ ಖಾಸಗಿ ಬಸ್ ಉದ್ಯಮವೇ ಸ್ಥಗಿತಗೊಳ್ಳುತ್ತದೆ” ಎಂದು‌ ಖಾಸಗಿ‌ ಬಸ್ ಮಾಲೀಕರ ಸಂಘ ಹೇಳಿದೆ.

“ಟೋಲ್, ಡೀಸೆಲ್, ಸಿಬ್ಬಂದಿ‌ವೇತನ‌ ಸೇರಿದಂತೆ‌ ಪ್ರತಿ ಬಸ್​ ನಿರ್ವಹಣೆಗೆ ದಿನಕ್ಕೆ 18 ರಿಂದ 20 ಸಾವಿರ ರೂಪಾಯಿ ಹೆಚ್ಚುವರಿ ಖರ್ಚಾಗುತ್ತದೆ. ಬೆಲೆ ಏರಿಕೆಯು ಈ ಹೊರೆಯನ್ನು ಮತ್ತಷ್ಟು ಹೆಚ್ಚಿಸಿದೆ. ಹಾಗಾಗಿ, ದರ ಏರಿಕೆ ಮಾಡುವುದು‌ ಅನಿವಾರ್ಯವಾಗಿದೆ. ಪ್ರತಿ ಟಿಕೆಟ್ ಗರಿಷ್ಠ‌ 3 ರೂ. ಏರಿಕೆ ಮಾಡಲು ಚಿಂತನೆ‌ ನಡೆದಿದೆ. ಮುಂದಿನ ವಾರ ನಿರ್ಧರಿಸಿ, ನಿಗದಿ ಮಾಡಲಾಗುತ್ತದೆ” ಎಂದು ಸಂಘದ ಕಾರ್ಯದರ್ಶಿ ಕುಯಿಲಾಡಿ ಸುರೇಶ್ ನಾಯ್ಕ್ ಹೇಳಿದ್ದಾರೆ.

ಸದ್ಯ ರಾಜ್ಯದಲ್ಲಿ ಒಟ್ಟು 8,000 ಖಾಸಗಿ ಬಸ್‌ಗಳು‌ ಪ್ರಯಾಣ ಸೇವೆ ಒದಗಿಸುತ್ತಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...