ರೈತ ಹೋರಾಟ | ರೈತರ ಮೇಲೆ ಕೇಂದ್ರದ ದೌರ್ಜನ್ಯ ಖಂಡಿಸಿ ಫೆ.16ರಂದು ಪ್ರತಿಭಟನೆ; ಡಿವೈಎಫ್‌ಐ ಬೆಂಬಲ

Date:

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನೀಡುವುದಾಗಿ ಮತ್ತು ರೈತರ ಸಾಲ ಮನ್ನಾ ಮಾಡುವದಾಗಿ ಭರವಸೆ ನೀಡಿದ್ದ ಕೇಂದ್ರ ಸರ್ಕಾರ ಮಾತು ತಪ್ಪಿದೆ. ಸರ್ಕಾರ ತನ್ನ ಭರವಸೆಗಳನ್ನು ಈಡೇರಿಸಬೇಕೆಂದು ರೈತರು ದೆಹಲಿ ಚಲೋಗೆ ಕರೆ ಕೊಟ್ಟು, ದೆಹಲಿಯತ್ತ ಹೊರಟಿದ್ದಾರೆ. ಆದರೆ, ರೈತರನ್ನು ತಡೆಯಲು ಕೇಂದ್ರ ಮತ್ತು ಬಿಜೆಪಿ ಆಡಳಿತದ ಹರಿಯಾಣ ಸರ್ಕಾರಗಳು ರೈತರ ಮೇಲೆ ದೌರ್ಜನ್ಯ ಎಸಗುತ್ತಿವೆ. ಬಿಜೆಪಿ ಸರ್ಕಾರಗಳ ದೌರ್ಜನ್ಯವನ್ನು ಖಂಡಿಸಿ ಫೆಬ್ರವರಿ 16ರಂದು ಕರ್ನಾಟಕದಲ್ಲಿ ರಾಜ್ಯಾದ್ಯಂತ ಪ್ರತಿಭಟನೆಗೆ ಸಂಯುಕ್ತ ಹೋರಾಟ ಕರ್ನಾಟಕ ಕರೆ ಕೊಟ್ಟಿದೆ. ಪ್ರತಿಭಟನೆಗೆ ಡಿವೈಎಫ್‌ಐ ಬೆಂಬಲ ನೀಡಿದೆ.

ಪ್ರತಿಭಟನೆ ಬೆಂಬಲಿಸಿ ಡಿವೈಎಫ್‌ಐ ಅಧ್ಯಕ್ಷ ಮುನೀರ್ ಕಾಟಿಪಳ್ಳ ಪತ್ರಿಕಾ ಹೇಳಿಕೆ ನೀಡಿದ್ದಾರೆ. “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಂತಿಯುತವಾಗಿ ಪ್ರತಿಭಟಿಸುವುದು ದೇಶದ ಪ್ರತಿಯೊಬ್ಬ ಪ್ರಜೆಯ ಮೂಲಭೂತ ಹಕ್ಕಾಗಿದೆ. ರೈತರ ಶಾಂತಿಯುತ ಹೋರಾಟದ ಮೇಲೆ ಪೊಲೀಸ್ ಹಾಗೂ ಸಶಸ್ತ್ರ ಭದ್ರತಾ ಪಡೆಗಳನ್ನು ಛೂ ಬಿಟ್ಟಿರುವುದಲ್ಲದೇ, ಲಾಠಿ ಪ್ರಹಾರ, ರಬ್ಬರ್ ಬುಲೆಟ್, ಆಶ್ರುವಾಯು ಸಿಡಿತದಂತಹ ಪೈಶಾಚಿಕ ದೌರ್ಜನ್ಯವನ್ನು ರೈತರ ಮೇಲೆ ಎಸಗಿರುವುದನ್ನು ಡಿವೈಎಫ್ಐ ರಾಜ್ಯ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ” ಎಂದಿದ್ದಾರೆ.

“ದೆಹಲಿಯಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನೆಯನ್ನು ತಡೆಯಲ್ಪಟ್ಟ ಸ್ಥಳದಲ್ಲೇ ಠಿಕಾಣಿ ಹೂಡಿ ಮಧ್ಯ ರಾತ್ರಿ ರೈತರು ನಿದ್ರಿಸುತ್ತಿದ್ದ ಸಮಯದಲ್ಲಿ ರೈತರ ಮೇಲೆ ಡ್ರೋನ್ ಬಳಸಿ ಅಶ್ರುವಾಯು ಶೆಲ್ ಗಳ ಸುರಿಮಳೆ ನಡೆಸಿರುವುದು ಅತ್ಯಂತ ಅಘಾತಕಾರಿಯಾದ ಘಟನೆಯಾಗಿದೆ. ದೇಶದ ಅನ್ನದಾತರನ್ನು ಸರ್ಕಾರದ ಅಥವಾ ದೇಶದ ಶತೃಗಳು ಎಂಬಂತೆ ನರೇಂದ್ರ ಮೋದಿ ಸರ್ಕಾರವು ಬ್ರಿಟಿಷರಿಗಿಂತ ಕ್ರೂರವಾಗಿ ನಡೆಸಿಕೊಂಡಿದೆ. ತಮ್ಮ ಜ್ವಲಂತ ಬೇಡಿಕೆಗಳ ಈಡೇರಿಕೆಗೆ ಪ್ರತಿಭಟಿಸಲೇಬೇಕಾದ ಆನಿವಾರ್ಯತೆಗೆ ಒಳಗಾದ ರೈತರ ಹೋರಾಟವನ್ನು ಕ್ರೂರವಾಗಿ ದಮನಿಸುವುದು ಪ್ಯಾಸಿಸ್ಟ್ ಸರ್ವಾಧಿಕಾರವಾಗಿದೆ ಎಂದು ಡಿವೈಎಫ್ಐ ರಾಜ್ಯ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೆಹಲಿ ಚಲೋ ಪ್ರತಿಭಟನೆಯನ್ನು ನಡೆಸುವ ರೈತರ ಹಕ್ಕನ್ನು ರಕ್ಷಿಸಬೇಕು, ಕೂಡಲೇ ರೈತರ ಪ್ರತಿಭಟನೆ ಹತ್ತಿಕ್ಕಲು ಜಮೆ ಮಾಡಿರುವ ಎಲ್ಲಾ ಪಡೆಗಳನ್ನು ವಾಪಸ್ಸು ಕರೆಸಿಕೊಳ್ಳಬೇಕು ಮತ್ತು ರೈತರ ಹಾಗೂ ಕಾರ್ಮಿಕರ ಹೋರಾಟವನ್ನು ಹಾಗೂ ಅವರ ನ್ಯಾಯಯುತ ಆಗ್ರಹಗಳನ್ನು ಮಾತುಕತೆಯ ಮೂಲಕ ಇತ್ಯರ್ಥ ಪಡಿಸಬೇಕು ಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ)ಕರ್ನಾಟಕ ರಾಜ್ಯ ಸಮಿತಿಯು ಕೇಂದ್ರ ಸರ್ಕಾರವನ್ನು ಆಗ್ರಹಿಸುತ್ತದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...