ನಾಯಕತ್ವ ಬದಲಾವಣೆ ಬಗ್ಗೆ ಪ್ರಶ್ನೆ, ಗಿಣಿ ಶಾಸ್ತ್ರ ಹೇಳುವವರ ಬಳಿ ಕೇಳಿ ಎಂದ ಡಿ ಕೆ ಶಿವಕುಮಾರ್

Date:

ಸಚಿವ ಸಂಪುಟ ಪುನಾರಚನೆ ಆಗುತ್ತದೆಯೋ ಅಥವಾ ನಾಯಕತ್ವ ಬದಲಾವಣೆ ಆಗುತ್ತದೆಯೋ ಎಂದು ಪತ್ರಕರ್ತರು ಕೇಳಿದಾಗ, “ಯಾರಾದರೂ ಗಿಣಿ ಶಾಸ್ತ್ರ ಹೇಳುವವರ ಬಳಿ ಕೇಳಿ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಸಿಟ್ಟಿನಿಂದಲೇ ಉತ್ತರಿಸಿದರು.

ದೆಹಲಿಯಿಂದ ಸೋಮವಾರ ಸಂಜೆ ಮೇಲೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯೆ ನೀಡಿ, “ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಬಳಿ ರಾಜಕೀಯ ಚರ್ಚೆ ಮಾಡಿಲ್ಲ. ಪಕ್ಷದ ನೂತನ ಕಚೇರಿ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ದಿನಾಂಕ ನಿಗದಿಗೆ ಮನವಿ ಮಾಡಿರುವೆ ಅಷ್ಟೇ ಎಂದು ತಿಳಿಸಿದರು.

ಸಚಿವ ಸಂಪುಟ ಪುನಾರಚನೆ ಕುರಿತು ಸಿಎಂ ಅವರು ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ, ಭಾನುವಾರ ನೀವು ಭೇಟಿ ಮಾಡಿದ್ದೀರಿ, ಈ ಬಗ್ಗೆ ಚರ್ಚೆ ಮಾಡಿದ್ದೀರಾ ಎಂದು ಕೇಳಿದಾಗ, “ನಾನು ದೆಹಲಿಗೆ ಹೋದಾಗೆಲ್ಲಾ ನಮ್ಮ ನಾಯಕರನ್ನು ಭೇಟಿ ಮಾಡುತ್ತೇನೆ. ಆದರೆ ನಾನು ರಾಜಕೀಯ ವಿಚಾರವಾಗಿ ಅವರನ್ನು ಭೇಟಿ ಮಾಡಿಲ್ಲ. ಈ ವಿಚಾರ ಚರ್ಚಿಸಿಲ್ಲ. ನಾನು ಡಿಸಿಎಂ ಮಾತ್ರವಲ್ಲ, ಪಕ್ಷದ ಅಧ್ಯಕ್ಷನೂ ಆಗಿದ್ದೇನೆ. ಇಷ್ಟು ದಿನ ಅವರು ಬಿಹಾರ ಚುನಾವಣೆಯಲ್ಲಿ ನಿರತರಾಗಿದ್ದರು. ಹೀಗಾಗಿ ನಾನು ಅವರಿಗೆ ತೊಂದರೆ ನೀಡಿರಲಿಲ್ಲ. ಡಿ. 1ರಿಂದ ಸಂಸತ್ ಅಧಿವೇಶನ ನಡೆಯಲಿದೆ. ಹೀಗಾಗಿ ಈ ಬಗ್ಗೆ ಚರ್ಚೆ ಮಾಡಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೇಕೆದಾಟು ಯೋಜನೆ ಜಾರಿಗೆ ತಡ ಮಾಡುವುದಿಲ್ಲ

ನಿಮ್ಮ ದೆಹಲಿ ಭೇಟಿ ವೇಳೆ ಪಕ್ಷದ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದು, ಫಲಪ್ರದವಾಯಿತೇ ಎಂದು ಕೇಳಿದ್ದಕ್ಕೆ, “ನಾನು ಯಾವುದೇ ವರಿಷ್ಠ ನಾಯಕರನ್ನು ಭೇಟಿ ಮಾಡಿಲ್ಲ. ಮೇಕೆದಾಟು ಯೋಜನೆ ಪರ ನ್ಯಾಯಾಲಯದಲ್ಲಿ ನಮ್ಮ ಪರವಾಗಿ ವಾದ ಮಂಡಿಸಿದ ವಕೀಲರಿಗೆ ಅಭಿನಂದನೆ ಸಲ್ಲಿಸಿದ್ದೇನೆ. ನ್ಯಾಯಾಲಯ ನಮಗೆ ನಮ್ಮ ಯೋಜನೆ ಮುಂದುವರಿಸಲು, ತಮಿಳುನಾಡಿಗೆ ಅದರ ಪಾಲಿನ ನೀರನ್ನು ಪಡೆಯಲು ಹಾಗೂ ಕೇಂದ್ರ ಜಲ ಆಯೋಗಕ್ಕೆ ಯೋಜನೆಗೆ ಅನುಮತಿ ನೀಡುವ ಅಧಿಕಾರವನ್ನು ನೀಡಿ ಆದೇಶ ನೀಡಿದೆ. ಇದಕ್ಕೆ ಕಾಲಮಿತಿ ಇದ್ದು, ಈ ಕಾರಣಕ್ಕೆ ಸೋಮವಾರ ಬೆಳಗ್ಗೆ ವಕೀಲರಾದ ಶ್ಯಾಮ್ ದಿವಾನ್ ಅವರನ್ನು ಭೇಟಿ ಮಾಡಿದೆ. ಅವರ ಜತೆ ಕೃಷ್ಣಾ ಹಾಗೂ ಮಹದಾಯಿ ಯೋಜನೆ ವಿಚಾರವಾಗಿ ಚರ್ಚೆ ಮಾಡಿದೆ. ನಾಳೆ ಕಾವೇರಿ ನೀರವರಿ ನಿಗಮದ (ಸಿಎನ್ಎನ್ಎಲ್) ಸಭೆ ಇದೆ. ಈ ಸಭೆಯಲ್ಲಿ ಯಾವ ರೀತಿ ಈ ಯೋಜನೆ ಪ್ರಸ್ತಾವನೆ ಮಾಡಬೇಕು ಎಂದು ಚರ್ಚೆ ಮಾಡಲಾಗುವುದು. ಈ ವಿಚಾರದಲ್ಲಿ ಇನ್ನು ಸಮಯ ವ್ಯರ್ಥ ಮಾಡಲು ಸಾಧ್ಯವಿಲ್ಲ. ಈ ಬಗ್ಗೆ ಸಿಎಂ ಕೂಡ ಪ್ರಧಾನಿ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ” ಎಂದು ತಿಳಿಸಿದರು.

“ಈ ಯೋಜನೆಗಾಗಿ ‘ನಮ್ಮ ನೀರು ನಮ್ಮ ಹಕ್ಕು’ ಎಂದು ನೂರಾರು ಕಿ.ಮೀ. ಹೆಜ್ಜೆ ಹಾಕಿದ್ದು, ಅನೇಕ ಪ್ರಕರಣಗಳು ನಮ್ಮ ವಿರುದ್ಧ ದಾಖಲಾಗಿವೆ. ಮಂಡ್ಯ, ಮೈಸೂರು, ತುಮಕೂರು, ಚಾಮರಾಜನಗರ, ಬೆಂಗಳೂರಿನ ಜನರಿಗೆ ಕುಡಿಯುವ ನೀರು ಒದಗಿಸಲಾಗುವುದು. ಕೈಗಾರಿಕೆಗಳಿಗೂ ನೀರು ಒದಗಿಸಲಾಗುವುದು. ಇದಕ್ಕಾಗಿ ಶ್ರಮಿಸುತ್ತಿದ್ದೇನೆ. ನನ್ನ ಶ್ರಮಕ್ಕೆ ಈಗ ಫಲ ಸಿಗುತ್ತಿದೆ. ಈ ಯೋಜನೆ ಜಾರಿಗೆ ಏನೆಲ್ಲಾ ಮಾಡಬೇಕು ಎಂದು ವಕೀಲರು, ಕಾನೂನು ತಜ್ಞರ ಜತೆ ಚರ್ಚೆ ಮಾಡಿರುವೆ. ಕಪಿಲ್ ಸಿಬಲ್ ಅವರ ಕಾರ್ಯಕ್ರಮದ ವೇಳೆ ಅನೇಕ ನಿವೃತ್ತ ನ್ಯಾಯಾಧೀಶರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವೆ” ಎಂದು ಹೇಳಿದರು.

ಕೆಲವು ಶಾಸಕರು ಸಚಿವರಾಗಲು ಪ್ರಯತ್ನಿಸುತ್ತಿದ್ದಾರೆ ಎಂದು ಕೇಳಿದಾಗ, “ಅದರಲ್ಲಿ ತಪ್ಪೇನಿದೆ? ಶಾಸಕರು, ವಿಧಾನ ಪರಿಷತ್ ಸದಸ್ಯರಾದವರಿಗೆ ಸಚಿವರಾಗುವ ಹಕ್ಕಿದೆ. ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಅಧಿಕಾರ ಸಿಎಂ ಅವರಿಗೆ ಇದೆ. ಅವರು ತಮ್ಮದೇ ಆದ ರೀತಿ ಪಕ್ಷಕ್ಕೆ ತ್ಯಾಗ ಮಾಡಿ, ದುಡಿದಿರುತ್ತಾರೆ. ಹೀಗಾಗಿ ಅವರು ಅಧಿಕಾರಕ್ಕೆ ಆಸೆ ಪಡುತ್ತಾರೆ. ಅದನ್ನು ನಾವು ತಪ್ಪು ಎಂದು ಹೇಳಲು ಸಾಧ್ಯವೇ?

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...