ವಕ್ಫ್ ಹೆಸರಿನ ದಬ್ಬಾಳಿಕೆ ನಿಲ್ಲಿಸದಿದ್ದರೆ ಮಹಾರಾಷ್ಟ್ರ, ಹರಿಯಾಣದಂತೆ ಕರ್ನಾಟಕವೂ ಧೂಳೀಪಟ: ಆರ್‌ ಅಶೋಕ್

Date:

ವಕ್ಫ್ ಹೆಸರಿನಲ್ಲಿ ನಡೆಯುತ್ತಿರುವ ದಬ್ಬಾಳಿಕೆ ನಿಲ್ಲಿಸಿ. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷ ಹಿಂದೂಗಳ ಕೆಂಗಣ್ಣಿಗೆ ಗುರಿಯಾಗಿ ಮಹಾರಾಷ್ಟ್ರ, ಹರಿಯಾಣ ರಾಜ್ಯಗಳಲ್ಲಿ ಆದಂತೆ ಕರ್ನಾಟಕದಲ್ಲೂ ಧೂಳೀಪಟ ಆಗುವುದು ನಿಶ್ಚಿತ ಎಂದು ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಎಚ್ಚರಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ವಕ್ಫ್ ವಿಚಾರದಲ್ಲಿ ದಿನಕ್ಕೊಂದು ನಾಟಕ, ಕ್ಷಣಕ್ಕೊಂದು ಸುಳ್ಳು ಹೇಳುತ್ತಲೇ ಬರುತ್ತಿರುವ ಕಾಂಗ್ರೆಸ್‌ ಸರ್ಕಾರ ಈಗ ಮತ್ತೊಮ್ಮೆ ಜನರ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದ್ದಾರೆ.

“ಸಿಎಂ ಸಿದ್ದರಾಮಯ್ಯನವರೇ, ವಕ್ಫ್ ವಿಚಾರ ಮೊದಲ ಪ್ರಸ್ತಾಪವಾದಾಗ ಸರ್ಕಾರ ಯಾರಿಗೂ ನೋಟಿಸು ಕಳಿಸುತ್ತಲೇ ಇಲ್ಲ ಎಂದು ಸುಳ್ಳು ಹೇಳಿದಿರಿ. ನಂತರ ವಿಜಯಪುರ ಜಿಲ್ಲೆಯಲ್ಲಿ ರೈತರು ಸಿಡಿದೆದ್ದಾಗ, ನೋಟಿಸು ವಾಪಸ್ಸು ಪಡೆದು, ಈ ಪ್ರಕ್ರಿಯೆ ನಿಲ್ಲಿಸುತ್ತೇವೆ ಎಂದು ಮತ್ತೊಂದು ಸುಳ್ಳು ಹೇಳಿದಿರಿ. ಆದರೆ ರೈತರಿಗೆ, ಮಠ-ಮಂದಿರಗಳಿಗೆ ಕಳಿಸುವುದು, ರಾತ್ರೋರಾತ್ರಿ ತರಾತುರಿಯಲ್ಲಿ ಭೂದಾಖಲೆಗಳನ್ನು ತಿದ್ದುವುದು ಮಾತ್ರ ನಿಲ್ಲಲೇ ಇಲ್ಲ. ಮೇಲಾಗಿ ಸಚಿವ ಜಮರ್ ಅಹ್ಮದ್ ಖಾನ್ ಅವರು ಇದೆಲ್ಲ ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ನಡೆಯುತ್ತಿದೆ ಎಂದು ಹೇಳುವ ವಿಡಿಯೋ ಬಹಿರಂಗ ಆದ ಮೇಲೆ ತಮ್ಮ ಸುಳ್ಳು ಸಂಪೂರ್ಣ ಬಯಲಾಯಿತು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?: ಈ ದಿನ ಸಂಪಾದಕೀಯ | ಅಮೆರಿಕ ಲಂಚ-ವಂಚನೆ ಪ್ರಕರಣದಲ್ಲಿ ‘ಮೋದಾನಿ’ ಆರೋಪಿಯಲ್ಲವೇ?

“ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಸ್ತಾವನೆಯೇ ಸರ್ಕಾರದ ಮುಂದಿಲ್ಲ ಎಂದು ಸತ್ಯದ ತಲೆಯ ಮೇಲೆ ಹೊಡೆದ ಹಾಗೆ ಮತ್ತೊಂದು ಸುಳ್ಳು ಹೇಳಿದಿರಿ. ಆದರೆ ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇ. 4 ರಷ್ಟು ಮೀಸಲಾತಿ ಕೊಡಬೇಕು ಎಂದು ತಮ್ಮ ರಾಜಕೀಯ ಕಾರ್ಯದರ್ಶಿ ನಾಸೀರ್ ಅಹ್ಮದ್, ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಮುಸ್ಲಿಂ ಶಾಸಕರು ಆಗಸ್ಟ್ 24, 2024 ರಂದು ತಮಗೆ ಪತ್ರ ಬರೆಯುತ್ತಾರೆ. ತಾವು ಅದೇ ದಿನವೇ ಈ ಪತ್ರವನ್ನು ಪರಿಶೀಲಿಸಿ ಮಂಡಿಸಿ ಎಂದು ಆರ್ಥಿಕ ಇಲಾಖೆಗೆ ನಿರ್ದೇಶನ ನೀಡಿದ್ದೀರಿ. ಈ ಸಂಬಂಧ ಕೆಟಿಪಿಪಿ ಕಾಯ್ದೆಗೆ ತಿದ್ದುಪಡಿ ತರಲು ಸಹ ತಾವು ಅನುಮೋದನೆ ನೀಡಿದ್ದೀರಿ” ಎಂದು ತಿಳಿಸಿದರು.

“ಈಗ ವಕ್ಫ್ ವಿಚಾರದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲೇ ಅತಿ ಹೆಚ್ಚು ನೋಟಿಸುಗಳು ನೀಡಲಾಗಿದೆ ಎಂದು ಮತ್ತೊಂದು ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದೀರಿ. ಓಲೈಕೆ ರಾಜಕಾರಣಕ್ಕೆ ಇನ್ನೆಷ್ಟು ಸುಳ್ಳು ಹೇಳುತ್ತೀರಿ? ಕಾಂಗ್ರೆಸ್ ಪಕ್ಷದ ಅನೇಕ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪ್ರಭಾವಿ ಮುಖಂಡರು ಬಡವರಿಗೆ ಸೇರಿದ ಸಾವಿರಾರು ಎಕರೆ ವಕ್ಫ್ ಭೂಮಿಯನ್ನು ಕಬಳಿಸಿದ್ದಾರೆ ಎಂಬ ವರದಿ ನಮ್ಮ ಸರ್ಕಾರಕ್ಕೆ ಬಂದಿತ್ತು. ಆಗ ಆ ವರದಿಯ ಆಧಾರದ ಮೇಲೆ ತನಿಖೆ ಮಾಡಲು ಸಂಬಂಧಪಟ್ಟವರಿಗೆ ನೋಟಿಸುಗಳನ್ನು ನೀಡಲಾಗಿತ್ತೇ ಹೊರತು ಇದರ ಹಿಂದೆ ಯಾವುದೇ ಕುತಂತ್ರ, ಷಡ್ಯಂತ್ರ ಇರಲಿಲ್ಲ” ಎಂದು ಹೇಳಿದರು.

ಇದನ್ನು ಓದಿದ್ದೀರಾ?: ಡೆಲ್ಲಿ ಕ್ಯಾಪಿಟಲ್ಸ್‌ ಮುನ್ನಡೆಸುವ ಆಟಗಾರರ ಹೆಸರು ಘೋಷಣೆ

“ಇಷ್ಟಕ್ಕೂ ಬಿಜೆಪಿ ಸರ್ಕಾರ ಬಡ ರೈತರು ತಲೆತಲಾಂತರಗಳಿಂದ ಉಳುಮೆ ಮಾಡಿಕೊಂಡು ಬಂದಿರುವ ಕೃಷಿ ಜಮೀನುಗಳಿಗೆ, ಗೋಮಾಳಗಳಿಗೆ, ಸ್ಮಶಾನಗಳಿಗೆ, ನೂರಾರು ವರ್ಷ ಇತಿಹಾಸ ಇರುವ ಸರ್ಕಾರಿ ಶಾಲೆಗಳಿಗೆ, ದೇವಸ್ಥಾನಗಳಿಗೆ, ಮಠ-ಮಾನ್ಯಗಳಿಗೆ, ಪಾರಂಪರಿಕ ತಾಣಗಳಿಗೆ, ಜನಸಾಮಾನ್ಯರ ಆಸ್ತಿ-ಪಾಸ್ತಿಗಳಿಗೆ, ಮಾಜಿ ಶಾಸಕರ ಮನೆಗಳಿಗೆ ನೋಟಿಸು ಕಳಿಸಿಲ್ಲ. ಬಡವರ ಭೂಮಿ ನುಂಗಿರುವ ದೊಡ್ಡ ದೊಡ್ಡ ತಿಮಿಂಗಿಲಗಳನ್ನು ಹಿಡಿಯುವ ಉದ್ದೇಶದಿಂದ ನೋಟಿಸು ಕೊಟ್ಟಿತ್ತು. ಇಷ್ಟಕ್ಕೂ ಈಗ ತಮ್ಮದೇ ಸರ್ಕಾರ ಇದೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊಟ್ಟ ನೋಟಿಸುಗಳಲ್ಲಿ ಏನಾದರೂ ತಪ್ಪಿದ್ದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ” ಎಂದರು.

“ವಕ್ಫ್ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣ ಜನರಿಗೆ ಸ್ಪಷ್ಟವಾಗಿ ಅರ್ಥವಾಗಿದೆ. ಕೇಂದ್ರ ಸರ್ಕಾರ ವಕ್ಫ್ ಕಾಯ್ದೆಗೆ ತರಲು ಉದ್ದೇಶಿಸಿರುವ ತಿದ್ದುಪಡಿಗೆ ಮೊದಲು ಹೇಗಾದರೂ ಮಾಡಿ ಜಮೀನು ಕಬಳಿಸಬೇಕು ಎಂಬ ಕಾಂಗ್ರೆಸ್ ಪಕ್ಷದ ಷಡ್ಯಂತ್ರ, ಕುತಂತ್ರ ಬಹುಸಂಖ್ಯಾತ ಹಿಂದೂಗಳಿಗೆ ಬಹಳ ಸ್ಪಷ್ಟವಾಗಿ ಮನವರಿಕೆಯಾಗಿದೆ. ಈಗ ಮತ್ತೊಂದು ಸುಳ್ಳು ಹೇಳಿ ಜನರ ದಿಕ್ಕು ತಪ್ಪಿಸುವ ಪ್ರಯತ್ನ ಬಿಡಿ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...