ಒಂದು ವಾರ ಕಾಲ ಅಧಿವೇಶನ ವಿಸ್ತರಿಸಲು ಸಭಾಧ್ಯಕ್ಷರಿಗೆ ಆರ್‌ ಅಶೋಕ್ ಪತ್ರ

Date:

ಬೆಳಗಾವಿ ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕಾಗಿರುವ ಬಳಷ್ಟು ವಿಷಯಗಳು ಬಾಕಿಯಿದೆ. ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಾಗಿರುವ ಹಿನ್ನೆಲೆಯಲ್ಲಿ ತಾವು ಪ್ರಸಕ್ತ ಅಧಿವೇಶನವನ್ನು ಇನ್ನೂ ಒಂದು ವಾರ ಕಾಲ ವಿಸ್ತರಿಸಬೇಕು ಎಂದು ಸಭಾಧ್ಯಕ್ಷ ಯು ಟಿ ಖಾದರ್‌ ಅವರನ್ನು ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ಕೋರಿದ್ದಾರೆ.

ಈ ಕುರಿತು ಪತ್ರ ಬರೆದಿರುವ ಅವರು, “ಡಿ.8ರಿಂದ 19ರವರೆಗೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸಲು ನಿರ್ಧರಿಸಲಾಗಿತ್ತು, ಕಾರಣಾಂತರಗಳಿಂದ 10 ದಿನಗಳ ಅಧಿವೇನದಲ್ಲಿ 2 ದಿನದ ಅಧಿವೇಶನದ ಸಮಯವು ಮೊಟುಕುಗೊಂಡಿರುತ್ತದೆ. ಹೀಗಾಗಿ ಒಂದು ವಾರ ಕಾಲ ಅಧಿವೇಶನ ವಿಸ್ತರಿಸಬೇಕು” ಎಂದು ಮನವಿ ಮಾಡಿದ್ದಾರೆ.

ಕಾಂಗ್ರೆಸ್‌ನ ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಸೋಮವಾರ ಸಂತಾಪ ಸೂಚನಾ ನಿರ್ಣಯವನ್ನು ಮಂಡಿಸಿ, ಕೆಲವು ಹೊತ್ತು ಸಿಎಂ ಸೇರಿ ಸದಸ್ಯರು ಸಂತಾಪ ಸೂಚಿಸಿ ಮಾತನಾಡಿದರು. ಬಳಿಕ ಸಭಾಧ್ಯಕ್ಷರು ಇಂದಿನ ಅಧಿವೇಶನವನ್ನು ಮೊಟಕುಗೊಳಿಸಿ ಮಂಗಳವಾರಕ್ಕೆ ಕಲಾಪವನ್ನು ಮುಂದೂಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...