ಬಿಜೆಪಿಯ ಮತಗಳ್ಳತನವನ್ನು ಜನರ ಗಮನಕ್ಕೆ ತರಲು ರಾಹುಲ್‌ ಗಾಂಧಿ ಬರುತ್ತಿದ್ದಾರೆ: ಡಿ ಕೆ ಶಿವಕುಮಾರ್

Date:

ರಾಹುಲ್ ಗಾಂಧಿ ಅವರು ರಾಜಕೀಯ ಉದ್ದೇಶಕ್ಕೆ ರಾಜ್ಯಕ್ಕೆ ಬರುತ್ತಿಲ್ಲ. ಬದಲಾಗಿ ಜನರನ್ನು ಎಚ್ಚರಗೊಳಿಸಲು ಬರುತ್ತಿದ್ದಾರೆ. ನಮಗೆ ಪ್ರಜಾಪ್ರಭುತ್ವ ಉಳಿಯಬೇಕು. ಚುನಾವಣಾ ಆಯೋಗ ರಾಜಕೀಯ ಪಕ್ಷದ ಭಾಗವಾಗುವುದನ್ನು ತಪ್ಪಿಸಬೇಕು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕಿನಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ನಡೆದ ಕ್ವಾಂಟಮ್ ಶೃಂಗಸಭೆಯ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.

ಮತಗಳ್ಳತನದ ವಿರುದ್ದ ಪ್ರತಿಭಟನೆ ನಗರದ ಒಳಗೆ ಹಮ್ಮಿಕೊಂಡಿರುವ ಬಗ್ಗೆ ಟೀಕೆ ವ್ಯಕ್ತವಾಗುತ್ತಿರುವ ಬಗ್ಗೆ ಕೇಳಿದಾಗ, “ನಮ್ಮ ರಾಜಕೀಯ ನಿಲುವಿನ ಬಗ್ಗೆ ಬೇರೆಯವರಿಗೆ ಏಕೆ ಇರುಸು ಮುರುಸಾಗುತ್ತಿದೆ. ನಾವು ಏಕೆ ಬೇರೆಯವರಿಗೆ ಇದರ ಬಗ್ಗೆ ಉತ್ತರಿಸಬೇಕು. ನಾವು ಕರ್ನಾಟಕದ ಜನರಿಗೆ ಉತ್ತರದಾಯಿಗಳು. ಬಿಜೆಪಿಯವರು ವಿಧಾನಸಭಾ ಚುನಾವಣೆ ವೇಳೆ ಚಿಲುಮೆ ಸಂಸ್ಥೆ ಬಳಸಿಕೊಂಡು ಅಕ್ರಮ ಎಸಗಿದರು. ನಮ್ಮ ನಾಯಕರು ಇದರ ಬಗ್ಗೆ ಮಾತನಾಡುತ್ತಾರೆ. ಈ ವಿಚಾರದಲ್ಲಿ ತನಿಖೆ ನಡೆಸಿಯೇ ನಮ್ಮ ನಾಯಕರು ಮಾತನಾಡುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಹುಲ್ ಗಾಂಧಿ ಅವರ ಕಾರ್ಯಕ್ರಮದ ಬಗ್ಗೆ ಕೇಳಿದಾಗ, “ಬಿಜೆಪಿ ಮತಗಳ್ಳತನ ನಡೆಸಿದೆ ಎಂಬುದನ್ನು ಜನರ ಗಮನಕ್ಕೆ ತರಬೇಕು ಎಂಬುದು ನಮ್ಮ ಉದ್ದೇಶ. ಬಿಜೆಪಿ ಮತಗಳ್ಳತನದ ಬಗ್ಗೆ ಪ್ರತಿಭಟನಾ ಸಭೆ ಅಥವಾ ರ್ಯಾಲಿ ಮಾಡಬೇಕೆ ಎನ್ನುವುದನ್ನು ಪಕ್ಷದ ಪ್ರಧಾನ ಕಾರ್ಯದರ್ಶಿಗಳ ಸಭೆಯಲ್ಲಿ ತೀರ್ಮಾನಿಸಲಾಗುವುದು” ಎಂದು ಹೇಳಿದರು.

“ಚುನಾವಣಾ ಆಯೋಗವನ್ನು ದುರುಪಯೋಗ ಪಡಿಸಿಕೊಂಡು ನಮ್ಮ ರಾಜ್ಯ ಹಾಗೂ ದೇಶದಲ್ಲಿ ಬಿಜೆಪಿಯವರು ಚುನಾವಣಾ ಅಕ್ರಮ ಎಗಸಿರುವುದನ್ನು ಬೆಳಕಿಗೆ ತರಬೇಕು. ಈ ಬಗ್ಗೆ ಪಕ್ಷದಿಂದಲೂ ಸಂಶೋಧನೆ ನಡೆದಿದೆ. ಆದರೆ ಜನ ಸೇರುವುದರ ಕುರಿತು ನ್ಯಾಯಲಯದ ನಿರ್ದೇಶನ ಹಾಗೂ ಸರ್ಕಾರದ ಮಾರ್ಗಸೂಚಿಗಳು ಇರುವ ಕಾರಣಕ್ಕೆ ಪ್ರತಿಭಟನೆಯ ಸ್ವರೂಪವನ್ನು ಚರ್ಚೆ ಮಾಡಲಾಗುವುದು” ಎಂದರು.

ಮಹಾರಾಷ್ಟ್ರದಿಂದ ರಾಜ್ಯಕ್ಕೆ ವಲಸೆ ಬರುವ ಐಟಿ ಕಂಪನಿಗಳನ್ನು ನಾವು ಸ್ವಾಗತಿಸುತ್ತೇವೆ. ನಾವು ಈ ಕಂಪನಿಗಳಿಗೆ ತಂತ್ರಜ್ಞಾನ, ವಿದ್ಯುತ್ ಸೇರಿದಂತೆ ಮೂಲ ಸೌಲಭ್ಯ ಒದಗಿಸಲು ತಯಾರಿದ್ದೇವೆ ಎಂದು ಹೇಳಿದರು.

“ನಾಲ್ಕು ದಿನಗಳ ಹಿಂದೆ ಮಹರಾಷ್ಟ್ರದ ಉಪಮುಖ್ಯಮಂತ್ರಿಯವರು ಪುಣೆಯಿಂದ ಬೆಂಗಳೂರಿಗೆ ಐಟಿ ಕಂಪೆನಿಗಳು ಹೋಗುತ್ತಿವೆ ಎಂದು ಹೇಳಿಕೆ ನೀಡಿದ್ದರು. ಅವರಿಗೆ ನಾನು ಧನ್ಯವಾದಗಳನ್ನು ತಿಳಿಸುತ್ತಿದ್ದೇನೆ. ನಾವು ದೇಶದ ಇತರೆ ರಾಜ್ಯಗಳ ಜೊತೆ ಸ್ಪರ್ಧಿಸುತ್ತಿಲ್ಲ ಬದಲಾಗಿ ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸುತ್ತಿದ್ದೇವೆ. ಮಹಾರಾಷ್ಟ್ರವೂ ಸಹ ಐಟಿ ಕ್ಷೇತ್ರದಲ್ಲಿ ಸಾಕಷ್ಟು ಮುಂದುವರೆದಿರುವ ರಾಜ್ಯ. ಅಲ್ಲಿನ ಐಟಿ ಹಬ್ ಪುಣೆಯ ಹಿಂಜವಾಡಿಯು ಅತ್ಯಂತ ಪ್ರಮುಖ ಐಟಿ ಪ್ರದೇಶ. ಆದರೆ ನಮ್ಮ ರಾಜ್ಯಕ್ಕೆ ಬರುವ ಕಂಪನಿಗಳನ್ನು ನಾವು ಮುಕ್ತವಾಗಿ ಸ್ವಾಗತಿಸಿ ಬೆಂಬಲಿಸುತ್ತೇವೆ” ಎಂದರು.

ಹನಿಟ್ರ್ಯಾಪ್ ತನಿಖೆ ನನಗೆ ಏನೂ ಗೊತ್ತಿಲ್ಲ

ರಾಜಣ್ಣ ಅವರ ಹನಿಟ್ಯ್ರಾಪ್ ವಿಚಾರದಲ್ಲಿ ಸಾಕ್ಷ್ಯಗಳಿಲ್ಲ ಎನ್ನುವ ಸಿಐಡಿ ವರದಿಯ ಬಗ್ಗೆ ಕೇಳಿದಾಗ, “ನನಗೂ ಇದಕ್ಕೂ ಏನು ಸಂಬಂಧ. ಯಾರು ದೂರು ನೀಡಿದ್ದು ಗೊತ್ತಿಲ್ಲ, ತನಿಖೆ ನಡೆದಿದ್ದು ಗೊತ್ತಿಲ್ಲ. ಇದನ್ನು ನಿಮ್ಮ (ಮಾಧ್ಯಮಗಳ) ಬಾಯಲ್ಲೇ ಕೇಳುತ್ತಿದ್ದೇನೆ. ನನಗೆ ಏನೂ ಗೊತ್ತಿಲ್ಲ” ಎಂದು ಹೇಳಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...