ಕರ್ನಾಟಕದ ಹಲವೆಡೆ ಮಳೆ ಸೂಚನೆ; ಕರಾವಳಿ ಭಾಗದಲ್ಲಿ ಭಾರೀ ಮಳೆ

Date:

ಕರ್ನಾಟಕದ ಹಲವು ಭಾಗಗಳಲ್ಲಿ ಭಾನುವಾರ ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ. ಈಗಾಗಲೇ ಸುರಲ್ಕತ್‌ ಸೇರಿದಂತೆ ಹಲವು ಕಡೆ ಬೆಳಿಗ್ಗೆಯಿಂದಲೇ ಮಳೆ ಸುರಿಯುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಬೆಂಗಳೂರು ಹವಾಮಾನ ಕೇಂದ್ರ ಮಾಹಿತಿ ನೀಡಿದೆ.

ಕೊಡಗು, ಚಿಕ್ಕಮಗಳೂರು, ಬೆಳಗಾವಿ, ಬೀದರ್‌, ಕಲಬುರಗಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸೂಚನೆಯನ್ನೂ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಶನಿವಾರವೂ ಕರ್ನಾಟಕದ ಹಲವು ಕಡೆ ಉತ್ತಮ ಮಳೆಯಾದ ವರದಿಗಳು ಬಂದಿದ್ದು, ಕೊಡಗಿನ ಹಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ಕಾವೇರಿ ನದಿ ನೀರಿನ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಕ್ಟೋಬರ್‌ 2ರ ಸೋಮವಾರ ಬೆಳಿಗ್ಗೆವರೆಗೂ ಕರಾವಳಿಯ ಬಹುತೇಕ ಕಡೆಗಳಲ್ಲಿ ಮಳೆಯಾಗಲಿದೆ. ಅದರಲ್ಲೂ ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆ ಭಾರೀ ಮಳೆಯಾಗಲಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಮುನ್ಸೂಚನೆ ಕಂಡುಬಂದಿದೆ.

ಉತ್ತರ ಒಳನಾಡಿನ ಬೆಳಗಾವಿ, ಬೀದರ್‌, ಕಲಬುರಗಿ ಜಿಲ್ಲೆಯಲ್ಲೂ ಮಳೆ ಸುರಿಸುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಈಗಾಗಲೇ ಮುನ್ನೆಚ್ಚರಿಕೆ ನೀಡಿದೆ.

“ಮುಂದಿನ ನಲವತ್ತೆಂಟು ಗಂಟೆಗಳಲ್ಲೂ ಕರಾವಳಿ ಕರ್ನಾಟಕದ ಎಲ್ಲ ಜಿಲ್ಲೆಗಳ ಒಂದೆರಡು ಕಡೆ ಭಾರೀ ಮಳೆಯಾಗಬಹುದು. ಕರ್ನಾಟಕದ ಕೆಲವು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ವಾತಾವರಣವೂ ಇರಲಿದೆ. ಬಿರುಗಾಳಿಯೂ ಗಂಟೆಗೆ 30-40 ರಿಂದ ಕಿ.ಮಿ ವೇಗದಲ್ಲಿ ಸಂಚರಿಸಲಿದೆ” ಎಂದು ಹಮಾಮಾನ ಇಲಾಖೆ ತನ್ನ ದೈನಂದಿನ ವರದಿಯಲ್ಲಿ ತಿಳಿಸಿದೆ.

“ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಭಾಗದಲ್ಲಿ ಚಂಡಮಾರುತದ ವಾತಾವರಣ ಇರಲಿದೆ. ಗಾಳಿಯು ಗಂಟೆಗೆ 45-55 ರಿಂದ 65 ಕಿಮೀ ವೇಗದಲ್ಲಿ ಸಂಚರಿಸುವ ಸಾಧ್ಯತೆ ಹೆಚ್ಚಾಗಿದೆ. ಇದರಿಂದ ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯುವುದು ಸೂಕ್ತವಲ್ಲ” ಎಂದು ಸೂಚನೆ ನೀಡಿದೆ.

ಬೆಂಗಳೂರಿನಲ್ಲೂ ಭಾನುವಾರ ಹಾಗೂ ಸೋಮವಾರ ಸಾಧಾರಣ ಮಳೆ ಇರಲಿದೆ. ಬೆಂಗಳೂರು ಮಹಾನಗರ ಸೇರಿದಂತೆ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶದಲ್ಲಿಯೂ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಕಂಡುಬರಲಿದೆ. ಒಂದೆರಡು ಕಡೆ ಹಗುರದಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯೂ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿಯೂ ಬೆಂಗಳೂರು ನಗರದಲ್ಲಿ ಬೀಸಲಿದೆ. ದಿನದ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್‌ನಷ್ಟು ದಾಖಲಾಗಲಿದೆ.

ಕರ್ನಾಟಕದ ಹಲವು ಕಡೆ ಶನಿವಾರವೂ ಭಾರೀ ಮಳೆ ಸುರಿದ ವರದಿಯಾಗಿದ್ದು, ಚಿಕ್ಕಮಗಳೂರು ಜಿಲ್ಲೆ ಕೊಟ್ಟಿಗೆಹಾರದಲ್ಲಿ ಅತ್ಯಧಿಕ 11 ಸೆ.ಮೀನಷ್ಟು ಮಳೆ ದಾಖಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಬೇಲಿಕೇರಿ, ಕ್ಯಾಸಲ್‌ ರಾಕ್‌ನಲ್ಲಿ ತಲಾ 10 ಸೆ.ಮೀ, ದಕ್ಷಿಣ ಕನ್ನಡದ ಉಪ್ಪಿನಂಗಡಿಯಲ್ಲಿ 8 ಸೆ.ಮೀ, ಕಾರವಾರ ಹಾಗೂ ಗೋಕರ್ಣದಲ್ಲಿ ತಲಾ ಏಳು ಸೆ.ಮೀ ಮಳೆಯಾದ ವರದಿಗಳು ಬಂದಿವೆ.

ಬೀದರ್‌ ಜಿಲ್ಲೆಯ ಔರಾದ್‌, ಹುಮನಾಬಾದ್‌, ನಿರ್ಣಾ, ಭಾಲ್ಕಿ, ಮಂಠಾಳ, ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ, ಪುತ್ತೂರು, ಬೆಳ್ತಂಗಡಿ, ಧರ್ಮಸ್ಥಳ, ಮಂಗಳೂರು ವಿಮಾನ ನಿಲ್ದಾಣ, ಪಣಂಬೂರು, ಮುಲ್ಕಿ, ಉಡುಪಿ ಜಿಲ್ಲೆಯ ಕೊಲ್ಲೂರು, ಸಿದ್ದಾಪುರ, ಕೋಟಾ, ಕುಂದಾಪುರ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ, ಜಗಲಬೆಟ್‌, ಮಂಕಿ. ಮಂಚಿಕೇರಿ, ಕುಮಟಾ, ಜೋಯಿಡಾ, ಶಿರಾಲಿ, ಹೊನ್ನಾವರ, ಯಲ್ಲಾಪುರ, ಗೇರುಸೊಪ್ಪ, ಚಿಕ್ಕಮಗಳೂರು ಜಿಲ್ಲೆಯ ಕಮ್ಮರಡಿ, ಕಳಸ, ಶೃಂಗೇರಿ, ಚಿಕ್ಕಮಗಳೂರು, ಕೊಪ್ಪ, ಶಿವಮೊಗ್ಗ ಜಿಲ್ಲೆಯ ಕೋಣಂದೂರು, ಹುಂಚದಕಟ್ಟೆ, ಲಿಂಗನಮಕ್ಕಿ, ತಾಳಗುಪ್ಪದಲ್ಲಿ ಮಳೆಯಾಗಿದೆ. ಬೆಳಗಾವಿ ಜಿಲ್ಲೆಯ ಲೋಂಡಾ, ಗುಂಜ್‌, ಬೆಳಗಾವಿ ವಿಮಾನ ನಿಲ್ದಾಣ, ಬೆಳಗಾವಿ ನಗರ, ಕಲಬುರಗಿ ಜಿಲ್ಲೆಯ ಅಳಂದ, ಅಡಕಿ, ಯಡ್ರಾಮಿ, ಕಮಲಾಪುರ, ಅಫಜಲಪುರದಲ್ಲಿ ಮಳೆ ಸುರಿದಿದೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಅಜ್ಜಿ ತಿಥಿ ಕಾರ್ಯಕ್ಕೆ ಬಂದಿದ್ದ ಕುಟುಂಬ ನೀರುಪಾಲು

ಕೆಲವು ದಿನಗಳಿಂದ ಬಿಡುವು ಕೊಟ್ಟಿದ್ದ ಕೊಡಗಿನಲ್ಲಿ ಮಳೆ ವಾತಾವರಣ ಮತ್ತೆ ಶುರುವಾಗಿದೆ. ಈಗಾಗಲೇ ಭಾನುವಾರ ಹಾಗೂ ಸೋಮವಾರವೂ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಅದರಲ್ಲೂ ಭಾಗಮಂಡಲ ಭಾಗದಲ್ಲಿ ಮಳೆಯಾಗುತ್ತಿರುವುದು ಸಂತಸ ತಂದಿದೆ. ಶನಿವಾರವೂ ಕೊಡಗಿನ ಭಾಗಮಂಡಲ, ವೀರಾಜಪೇಟೆ, ಸೋಮವಾರಪೇಟೆ, ಪೊನ್ನಂಪೇಟೆ, ನಾಪೊಕ್ಲು, ಮೂರ್ನಾಡು, ಮಡಿಕೇರಿಗಳಲ್ಲಿ ಮಳೆಯಾದ ವರದಿಯಾಗಿದ್ದು, ಕಾವೇರಿ ನದಿ ನೀರಿನ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...