ಬಡಗಲಪುರ ನಾಗೇಂದ್ರರ ಮೇಲೆ ಹಲ್ಲೆಗೆ ಯತ್ನಿಸಿದ ವ್ಯಕ್ತಿಯ ಗಡಿಪಾರಿಗೆ ರೈತಸಂಘ ಆಗ್ರಹ

Date:

ರಾಜ್ಯ ರೈತ ಸಂಘದ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ ಅವರ ಹಲ್ಲೆಗೆ ಯತ್ನಿಸಿರುವ ಪಾಂಡವಪುರ ತಾಲ್ಲೂಕಿನ ಇಂಗಲಗುಪ್ಪೆ ಕೃಷ್ಣೇಗೌಡ ಅವರನ್ನು ಗಡಿಪಾರು ಮಾಡಬೇಕೆಂದು ಆಗ್ರಹಿಸಿ ರೈತ ಮುಖಂಡರು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು, ಮಂಗಳವಾರ ಮಂಡ್ಯದಲ್ಲಿ ನಡೆದಿರುವ ಘಟನೆಯನ್ನು ಖಂಡಿಸಿದ್ದಾರೆ.

ಮಂಡ್ಯದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಹೋಗುವಾಗ ಬಡಗಲಪುರ ನಾಗೇಂದ್ರ ಅವರ ಮೇಲೆ ಇಂಗಲಗುಪ್ಪೆ ಕೃಷ್ಣ ಮತ್ತು ಅವರ ತಂಡ ಹಲ್ಲೆಗೆ ಯತ್ನಿಸಿರುವ ಸಂಬಂಧ ಪ್ರಕರಣ ದಾಖಲಾಗಿದೆ. ಜೊತೆಗೆ ಕೃಷ್ಣ ಅವರೂ ಪ್ರತಿ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದರೋಡೆ, ಅಪಹರಣ, ವಂಚನೆ ಇತ್ಯಾದಿ ಆರೋಪಗಳನ್ನು ಹೊತ್ತು ರೌಡಿಶೀಟರ್‌ನಲ್ಲಿ ದಾಖಲಾಗಿರುವ ಇಂಗಲಗುಪ್ಪೆ ಕೃಷ್ಣೇಗೌಡರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು” ಪ್ರತಿಭಟನಾ ರೈತರು ಆಗ್ರಹಿಸಿದ್ದಾರೆ.

“ಕೃಷ್ಣೇಗೌಡ ಎಂಬವವರು ಹಸಿರು ಟವಲ್ ಧರಿಸಿದ ನಕಲಿ ರೈತ ಹೋರಾಟಗಾರರಾಗಿದ್ದಾರೆ. ಇವರು ಕ್ರಿಮಿನಲ್ ಹಿನ್ನಲೆಯುಳ್ಳ ವ್ಯಕ್ತಿಯಾಗಿದ್ದು, ಮಂಡ್ಯ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಅಪಹರಣ, ದರೋಡೆ, ವಂಚನೆ ಇತ್ಯಾದಿಗೆ ಸಂಬಂಧಿಸಿದಂತೆ ದೋಷಾರೋಪ ಪಟ್ಟಿಯನ್ನೂ ಸಲ್ಲಿಸಲಾಗಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ಠಾಣೆಯಲ್ಲಿ ಇವರ ವಿರುದ್ಧ ರೌಡಿಶೀಟರ್‌ ತೆರೆಯಲಾಗಿದೆ. ಇಷ್ಟೆಲ್ಲ ಪ್ರಕರಣಗಳಿದ್ದರೂ ತನ್ನ ದಂಧೆಯನ್ನು ಲಂಗುಲಗಾಮಿಲ್ಲದೆ ಮುಂದುವರಿಸುತ್ತಿದ್ದಾರೆ. ಇವರ ಸಹಪಾಠಿಗಳ ಬೆದರಿಕೆಯಿಂದ ಹಲವು ಬಡ ಕುಟುಂಬಗಳು ತೊಂದರೆಗೆ ಸಿಲುಕಿವೆ. ರೌಡಿ ಎಂಬ ಕಾರಣಕ್ಕೆ ಇವರ ವಿರುದ್ಧ ಜನರು ಮಾತನಾಡಲು ಹೆದರುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಮತ್ತು ಮಂಡ್ಯ ಘಟಕದ ಅಧ್ಯಕ್ಷರಾದ ಕೆಂಪೂಗೌಡ ಅವರು ಗೃಹ ಇಲಾಖೆಗೆ, ಮುಖ್ಯಕಾರ್ಯದರ್ಶಿಯವರಿಗೆ ಮತ್ತು ಡಿಜಿಪಿಯವರಿಗೆ ಪತ್ರ ಬರೆದಿದ್ದರು. ರೈತ ಮುಖಂಡರ ಒತ್ತಾಯದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಕೆಲವು ಕ್ರಮಗಳನ್ನು ಕೃಷ್ಣ ವಿರುದ್ಧ ಜರುಗಿಸಿದೆ. ಆದರೂ ಯಾವುದೇ ಲಂಗುಲಗಾಮು ಇಲ್ಲದೆ ಹಗರಣ, ಅಕ್ರಮಗಳನ್ನು ಕೃಷ್ಣ ಮುಂದುವರಿಸಿದ್ದಾರೆ ಎಂದು ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಗರಣಗಳಿಂದ ತಪ್ಪಿಸಿಕೊಳ್ಳಲು ತನ್ನನ್ನು ರೈತ ಸಂಘದ ಅಧ್ಯಕ್ಷನೆಂದು ಹೇಳಿಕೊಂಡು ಸ್ಕಾರ್ಪಿಯೊ ಕಾರನ್ನು ಉಪಯೋಗಿಸಿ ವಿಧಾನಸೌಧ ಮತ್ತು ಇತರೆ ಕಚೇರಿಗಳಿಗೆ ಕೃಷ್ಣ ಓಡಾಡುತ್ತಿದ್ದಾರೆ. ರಕ್ಷಣೆ ಪಡೆಯಲು ಹಸಿರು ಟವಲ್ ದುರುಪಯೋಗ ಮಾಡಿಕೊಂಡಿದ್ದಾರೆ. ಆ ಮೂಲಕ ಪವಿತ್ರ ಹೋರಾಟಕ್ಕೆ ಕಳಂಕ ತರುತ್ತಿದ್ದಾರೆ. ಇವರ ವಿರುದ್ಧ ರೈತ ಮುಖಂಡರು ದೂರು ನೀಡಿರುವುದನ್ನು ಸಹಿಸದೆ ನಾಗೇಂದ್ರ ಅವರ ಮೇಲೆ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಲಾಗಿದೆ. ಈ ಸಂಬಂಧ ದೂರು ದಾಖಲಾಗಿದೆ. ಕೃಷ್ಣ ತಮ್ಮ ದ್ವೇಷವನ್ನು ಮುಂದುವರಿಸುತ್ತಿರುವುದು ಕಂಡುಬಂದಿದೆ. ಇವರ ವಿರುದ್ಧ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೂಕ್ತ ಕ್ರಮ ಜರುಗಿಸಿ ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ರೈತ ಸಂಘದ ಮೈಸೂರು ಜಿಲ್ಲಾಧ್ಯಕ್ಷ ಹೊಸೂರು ಕುಮಾರ್‌, ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ಮಂಡ್ಯ ಜಿಲ್ಲಾಧ್ಯಕ್ಷ ಕೆಂಪೂಗೌಡ, ಯುವ ರೈತ ಮುಖಂಡ ಪ್ರಸನ್ನ ಎನ್.ಗೌಡ, ಕೊಡಗು ಜಿಲ್ಲಾಧ್ಯಕ್ಷ ಮನುಸೋಮಯ್ಯ, ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿ ನೇತ್ರಾವತಿ, ಮುಖಂಡರಾದ ಬನ್ನೂರು ಕೃಷ್ಣಪ್ಪ ಮೊದಲಾದವರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ಇದನ್ನೂ ಓದಿರಿ: ರೈತ ಮುಖಂಡ ಬಡಗಲಪುರ ನಾಗೇಂದ್ರರ ಮೇಲೆ ಹಲ್ಲೆಗೆ ಯತ್ನ; ಪ್ರಕರಣ ದಾಖಲು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...