ಸೀಲಿಂಗ್ ಫ್ಯಾನ್‌ಗಳಲ್ಲಿ ಆತ್ಮಹತ್ಯೆ ತಡೆ ಸಾಧನ ಅಳವಡಿಕೆಗೆ ಮುಂದಾದ ರಾಜೀವ್ ಗಾಂಧಿ ಆರೋಗ್ಯ ವಿವಿ

Date:

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯವು ತನ್ನ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ ಎಲ್ಲ ವೈದ್ಯಕೀಯ ಸಂಸ್ಥೆಗಳ ಹಾಸ್ಟೆಲ್‌ಗಳ ಸೀಲಿಂಗ್ ಫ್ಯಾನ್‌ಗಳಲ್ಲಿ ಆತ್ಮಹತ್ಯೆ ತಡೆ ಸಾಧನ ಅಥವಾ ಆ್ಯಂಟಿ ಸೂಯಿಸೈಡ್ ಡಿವೈಸ್ ಸಾಧನಗಳನ್ನು ಅಳವಡಿಸಲು ಯೋಚಿಸಿದೆ.

ಕರ್ನಾಟಕದ ಕಾಲೇಜು ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ರಾಜೀವ್ ಗಾಂಧಿ ಆರೋಗ್ಯ ವಿವಿ ಮಹತ್ವದ ಕ್ರಮ ಕೈಗೊಳ್ಳಲು ಮುಂದಾಗಿದೆ.

ಎರಡು ವಾರಗಳ ಅವಧಿಯಲ್ಲಿ ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಮಿಮ್ಸ್) ಇಬ್ಬರು ವಿದ್ಯಾರ್ಥಿಗಳು ಹಾಸ್ಟೆಲ್ ಕೊಠಡಿಗಳಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬೆಳವಣಿಗೆ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

300ಕ್ಕೂ ಹೆಚ್ಚು ಆತ್ಮಹತ್ಯೆಗಳಿಗೆ ತಡೆ

ಪ್ರಸ್ತಾವಿತ ಆ್ಯಂಟಿ ಸೂಯಿಸೈಡ್ ಡಿವೈಸ್ ಸೀಲಿಂಗ್ ಫ್ಯಾನ್‌ ಮೇಲಿನ ತೂಕ ಮಿತಿಗಿಂತ ಹೆಚ್ಚಾದರೆ ಸ್ವಯಂಚಾಲಿತ ವ್ಯವಸ್ಥೆ ಅಲರ್ಟ್ ಆಗುತ್ತದೆ. ಕೂಡಲೇ ಫ್ಯಾನ್ ಸೀಲಿಂಗ್ ಹುಕ್‌ನಿಂದ ಬೇರ್ಪಡುತ್ತದೆ. ವಿದ್ಯಾರ್ಥಿಗಳು ಆತ್ಮಹತ್ಯೆಗೆ ಯತ್ನಿಸಿದರೆ ಫ್ಯಾನ್ ತಾನಾಗಿಯೇ ಕಳಚಿ ಬೀಳಲಿದೆ.

ಪರಿಸ್ಥಿತಿ ಬಗ್ಗೆ ಅವಲೋಕಿಸಲು ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಗಟ್ಟುವ ಕ್ರಮಗಳ ಕುರಿತು ಚರ್ಚಿಸಲು ವಿವಿಯ ಪಠ್ಯಕ್ರಮ ಅಭಿವೃದ್ಧಿ ಕೋಶದ ಡಾ. ಸಂಜೀವ್ ನೇತೃತ್ವದ ತಂಡವು ಜುಲೈ ಕೊನೆಯ ವಾರದಲ್ಲಿ ಮಿಮ್ಸ್​​ಗೆ ಭೇಟಿ ನೀಡಿ ಸಮಾಲೋಚನೆ ನಡೆಸಿತ್ತು. ಆ ಸಂದರ್ಭದಲ್ಲಿ, ಮುಂದೆ ಇಂಥ ಘಟನೆಗಳನ್ನು ತಡೆಗಟ್ಟಲು ಸೀಲಿಂಗ್ ಫ್ಯಾನ್‌ಗಳಲ್ಲಿ ಸುರಕ್ಷತಾ ಸಾಧನಗಳನ್ನು ಅಳವಡಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಡಾ. ಸಂಜೀವ್ ಬಹಿರಂಗಪಡಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...