ಖಾಸಗಿ ವಿವಿಗಳಿಂದ ನಿಯಮಬಾಹಿರವಾಗಿ ಸರ್ಕಾರದ ಅನುದಾನ ಸ್ವೀಕಾರ, ತನಿಖೆಗೆ ರಮೇಶ್‌ ಬಾಬು ಆಗ್ರಹ

Date:

ಖಾಸಗಿ ವಿಶ್ವವಿದ್ಯಾಲಯಗಳು ಸರ್ಕಾರದ ಅನುದಾನವನ್ನು ನಿಯಮಬಾಹಿರವಾಗಿ ಪಡೆದುಕೊಳ್ಳುತ್ತಿರುವ ಕುರಿತು ತ್ವರಿತ ಪೊಲೀಸ್ ತನಿಖೆ ಕೈಗೊಳ್ಳುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್‌ ಬಾಬು ಮನವಿ ಮಾಡಿದ್ದಾರೆ.

ಈ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು, “ನಮ್ಮ ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ಬಹಳ ಗಂಭೀರ ಮತ್ತು ಆತಂಕಕಾರಿ ವಿಷಯವೊಂದನ್ನು ನಿಮ್ಮ ಗಮನಕ್ಕೆ ತರಲು ಈ ಪತ್ರವನ್ನು ಬರೆಯುತ್ತಿದ್ದೇನೆ. ಕರ್ನಾಟಕದ ಕೆಲವು ಖಾಸಗಿ ವಿಶ್ವವಿದ್ಯಾಲಯಗಳು ಸರ್ಕಾರದ ಅನುದಾನವನ್ನು ಅಕ್ರಮವಾಗಿ, ನೈತಿಕತೆಯಿಲ್ಲದ ರೀತಿಯಲ್ಲಿ ಪಡೆದುಕೊಳ್ಳುತ್ತಿರುವ ಬಗ್ಗೆ ವಿಶ್ವಾಸಾರ್ಹ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ನಮಗೆ ಗೊತ್ತಿರುವಂತೆ, ಖಾಸಗಿ ವಿಶ್ವವಿದ್ಯಾಲಯಗಳು ತಮ್ಮ ಸ್ವಂತ ಆರ್ಥಿಕ ಸಂಪನ್ಮೂಲಗಳಿಂದ ಕಾರ್ಯ ನಿರ್ವಹಿಸಬೇಕಾಗಿರುತ್ತದೆ. ಆದರೆ, ಕೆಲವು ಸಂಸ್ಥೆಗಳು ಸುಳ್ಳು ದಾಖಲೆಗಳು, ರಾಜಕೀಯ ಅಥವಾ ಅಧಿಕಾರಿಗಳ ಪ್ರಭಾವ ಬಳಸಿ, ಸರ್ಕಾರದ ಅಥವಾ ಸಾರ್ವಜನಿಕ ಸಂಸ್ಥೆಗಳಿಗಾಗಿ ಮೀಸಲಿಟ್ಟ ಅನುದಾನಗಳನ್ನು ಕಬಳಿಸುತ್ತಿರುವುದಾಗಿ ತಿಳಿದುಬಂದಿದೆ” ಎಂದಿದ್ದಾರೆ.

“ಇದು ಕೇವಲ ನಿಯಮ ಉಲ್ಲಂಘನೆ ಮಾತ್ರವಲ್ಲದೇ ಸಾರ್ವಜನಿಕ ಹಣದ ದುರುಪಯೋಗಕ್ಕೂ ಕಾರಣವಾಗುತ್ತಿದೆ. ಈ ರೀತಿ ನಡೆಯುವುದರಿಂದ ನಿಷ್ಠಾವಂತ ಮತ್ತು ಸಹಾಯಧನದ ಆಧಾರಿತ ಸಂಸ್ಥೆಗಳು ತಮ್ಮ ಹಕ್ಕಿನ ಅನುದಾನದಿಂದ ವಂಚಿತವಾಗುತ್ತಿವೆ. ಈ ಕಾರಣದಿಂದ ಶಿಕ್ಷಣ ಕ್ಷೇತ್ರದಲ್ಲಿ ಅಕ್ರಮ ಮಾರ್ಗದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಈ ಹಿನ್ನೆಲೆಯಲ್ಲಿ, ಸರ್ಕಾರದ ನೈತಿಕ ಬದ್ಧತೆ ಮತ್ತು ಜನಪರ ಆಡಳಿತದ ಕಾರಣಕ್ಕಾಗಿ ಕೆಳಗಿನ ಕ್ರಮಗಳನ್ನು ಕೈಗೊಳ್ಳಿ” ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

1 – ಇಂತಹ ಅನುದಾನ ದುರ್ಬಳಕೆ ಮಾಡಿರುವ ಖಾಸಗಿ ವಿಶ್ವವಿದ್ಯಾಲಯಗಳ ಕುರಿತು ಉನ್ನತ ಮಟ್ಟದ ಪೊಲೀಸ್ ತನಿಖೆ ನಡೆಸಬೇಕು.

2 – ಉನ್ನತ ಶಿಕ್ಷಣ ಇಲಾಖೆ ಮತ್ತು ಹಣಕಾಸು ಇಲಾಖೆಯಲ್ಲಿ ಕಳೆದ 5 ರಿಂದ 10 ವರ್ಷಗಳ ಅವಧಿಯಲ್ಲಿ ಖಾಸಗಿ ವಿಶ್ವವಿದ್ಯಾಲಯಗಳಿಗೆ ನೀಡಲಾದ ಎಲ್ಲಾ ಅನುದಾನಗಳನ್ನು ಪುನರ್ ಪರಿಶೀಲನೆ ಮಾಡಬೇಕು.

3 – ತಪ್ಪಿತಸ್ಥ ಸಂಸ್ಥೆಗಳಿಗೆ ಆರ್ಥಿಕ ದಂಡ ವಿಧಿಸಿ, ಅನುದಾನ ಮರುಪಾವತಿಗೆ ಆದೇಶ ಮಾಡಬೇಕು ಹಾಗೂ ನ್ಯಾಯಬಾಹಿರ ಚಟುವಟಿಕೆಗೆ ಸಂಬಂಧಪಟ್ಟಂತೆ ಕ್ರಿಮಿನಲ್ ಕೇಸು ದಾಖಲಿಸಬೇಕು.

4 – ಇಂತಹ ಕೃತ್ಯಗಳು ಮರುಕಳಿಸದಂತೆ, ಅನುದಾನಗಳ ವಿತರಣೆಯಲ್ಲಿ ಪಾರದರ್ಶಕ ವ್ಯವಸ್ಥೆ ರೂಪಿಸಬೇಕು.

5 – ಈ ವಿಷಯದಲ್ಲಿ ಸಾರ್ವಜನಿಕರು, ಆಸಕ್ತಿ ಇರುವವರು ಮತ್ತು ಶಿಕ್ಷಣ ಕ್ಷೇತ್ರದ ತಜ್ಞರು ಭಯವಿಲ್ಲದೆ ದೂರು ನೀಡಲು ಅನುಕೂಲವಾಗುವಂತೆ ಒಂದು ದೂರು ಸಮಿತಿ ಸ್ಥಾಪಿಸಬೇಕು.

    “ಜನಸಾಮಾನ್ಯರ ಮತ್ತು ಪ್ರಗತಿಪರರ ಚಿಂತನೆಗಳಿಗೆ ಅನುಗುಣವಾಗಿ ಕರ್ನಾಟಕದ ಶಿಕ್ಷಣ ಕ್ಷೇತ್ರವು ನೈತಿಕತೆ, ಸಮಾನತೆ ಮತ್ತು ನಿಷ್ಠೆಯ ಮೇರೆಗೆ ಮೌಲ್ಯಗಳ ಮೂಲಕ ನಡೆಯಬೇಕಾದ ಅಗತ್ಯವಿದೆ. ನಿಮ್ಮ ನಾಯಕತ್ವದಲ್ಲಿ ಇಂತಹ ಅಕ್ರಮಗಳನ್ನು ತಡೆಯುವ ಮತ್ತು ನಿಯಮ ಉಲ್ಲಂಘನೆಗಳಿಗೆ ತೀವ್ರವಾದ ಶಿಕ್ಷೆ ನೀಡುವ ವಿಶ್ವಾಸ ನಮ್ಮಲ್ಲಿದೆ. ಈ ಬಗ್ಗೆ ತಾವು ತಕ್ಷಣ ಸೂಕ್ತ ಕ್ರಮ ಕೈಗೊಂಡು ಸಾರ್ವಜನಿಕ ಹಿತವನ್ನು ಕಾಪಾಡುವಂತೆ ಕೋರುತ್ತೇನೆ ಮತ್ತು ಸೂಕ್ತಕ್ರಮವನ್ನು ಸರ್ಕಾರದಿಂದ ನಿರೀಕ್ಷಿಸುತ್ತಿದ್ದೇನೆ” ಎಂದು ಮಾಧ್ಯಮ ಪ್ರಕಟಣೆಯಲ್ಲಿ ರಮೇಶ್‌ ಬಾಬು ತಿಳಿಸಿದ್ದಾರೆ

    eedina
    ಈ ದಿನ ಡೆಸ್ಕ್‌
    Website |  + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

    ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

    ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

    ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...