ಎರಡನೇ ಬಾರಿಗೆ ರೆಪೋ ದರ ಇಳಿಸಿದ ಆರ್‌ಬಿಐ: ಯಾರಿಗೆ ಲಾಭ?

Date:

ಆರ್‌ಬಿಐ(RBI) ಈ ವರ್ಷ ಸತತ ಎರಡನೇ ಬಾರಿಗೆ ಪ್ರಮುಖ ಬಡ್ಡಿದರಗಳನ್ನು ಪರಿಷ್ಕರಿಸಿದೆ. ತನ್ನ ರೆಪೋ ದರ(Repo Rate)ವನ್ನು 25 ಬೇಸಿಸ್ ಪಾಯಿಂಟ್‌ಗಳಷ್ಟು ಕಡಿತಗೊಳಿಸಿದ್ದು, ಈ ಮೂಲಕ ರೆಪೋ ದರ ಶೇ. 6.25ರಿಂದ ಶೇ. 6ಕ್ಕೆ ಇಳಿದಿದೆ.

“ಕಳೆದ ಫೆಬ್ರವರಿಯಲ್ಲಿ ನಡೆದ ಎಂಪಿಸಿ ಸಭೆಯಲ್ಲೂ 25 ಮೂಲಾಂಕಗಳಷ್ಟು ಬಡ್ಡಿದರವನ್ನು ಇಳಿಸಲಾಗಿತ್ತು. ಈಗ ಮತ್ತೊಮ್ಮೆ ರೆಪೋ ದರ ಕಡಿಮೆ ಮಾಡಲು ಹಣಕಾಸು ನೀತಿ ಸಮಿತಿಯು ಸರ್ವಾನುಮತದಿಂದ ಒಪ್ಪಿಕೊಂಡಿದೆ” ಎಂದು ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಆರ್‌ಬಿಐ ರೆಪೋ ದರ ಇಳಿಸಿರುವುದರಿಂದ, ಬ್ಯಾಂಕ್‌ಗಳಿಗೆ ಸಾಲದ ವೆಚ್ಚ ಕಡಿಮೆ ಆಗಲಿದ್ದು, ಗ್ರಾಹಕರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲು ಅನುವು ಮಾಡಿಕೊಡುತ್ತದೆ. ಸಾಲಗಳ ಮೇಲಿನ ಇಎಂಐಗಳ ಮೊತ್ತ ಕಡಿಮೆ ಮಾಡುತ್ತದೆ ಎಂದು ವರದಿ ತಿಳಿಸಿದೆ. ಇದರಿಂದ ಮನೆ, ವಾಹನ ಮತ್ತು ವೈಯಕ್ತಿಕ ಸಾಲಗಾರರಿಗೆ ತುಸು ಲಾಭವಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಆರ್‌ಬಿಐ ಮುಖ್ಯ ಕಚೇರಿಗೆ ಬಾಂಬ್‌ ಬೆದರಿಕೆ

ಆರ್​​ಬಿಐನಿಂದ ಸಾಲ ಪಡೆಯಲು ಬ್ಯಾಂಕುಗಳು ತೆರಬೇಕಿರುವ ಬಡ್ಡಿದರವೇ ರಿಪೋ ರೇಟ್. ಹಣದುಬ್ಬರವನ್ನು ನಿಯಂತ್ರಿಸಲು ಆರ್​​ಬಿಐ ಈ ಅಸ್ತ್ರ ಪ್ರಯೋಗಿಸುತ್ತದೆ. ಬೆಲೆ ಏರಿಕೆ ಆಗುವ ಸಂದರ್ಭಗಳಲ್ಲಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹಣದ ಹರಿವು ಕಡಿಮೆ ಮಾಡಲು ಆರ್​​ಬಿಐ ರೆಪೋ ದರ ಹೆಚ್ಚಿಸುತ್ತದೆ. ಹಣದುಬ್ಬರ ನಿಯಂತ್ರಣದಲ್ಲಿದ್ದರೆ, ಮತ್ತು ಆರ್ಥಿಕತೆಗೆ ಪುಷ್ಟಿ ಸಿಗುವ ಅವಶ್ಯಕತೆ ಇದೆ ಎನಿಸಿದಲ್ಲಿ ಆಗ ಬ್ಯಾಂಕಿಂಗ್ ವಲಯಕ್ಕೆ ಹೆಚ್ಚು ಹಣದ ಹರಿವು ಬೇಕಾಗುತ್ತದೆ. ಆಗ ರೆಪೋ ದರವನ್ನು ಇಳಿಸಲಾಗುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...