ಮೂರು ತಿಂಗಳಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಭರ್ತಿ ಪ್ರಕ್ರಿಯೆ ಪೂರ್ಣ: ಪರಮೇಶ್ವರ್

Date:

ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿ, ಈಗಾಗಲೆ ಅಭ್ಯರ್ಥಿಗಳ ತರಬೇತಿ ನಡೆಯುತ್ತಿದೆ. ಮೂರು ತಿಂಗಳ ಒಳಗಾಗಿ ಖಾಲಿ ಇರುವ ಸ್ಥಳಗಳಲ್ಲಿ ಪಿಎಸ್‍ಐ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಂಗಳವಾರ ವಿಧಾನಸಭೆಯಲ್ಲಿನ ಪ್ರಶ್ನೋತ್ತರ ಕಲಾಪದಲ್ಲಿ ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಅವರು ಮೂಡಬಿದ್ರೆ, ಮುಲ್ಕಿ ಕ್ಷೇತ್ರ ವ್ಯಾಪ್ತಿಯಲ್ಲಿನ ಪೊಲೀಸ್ ಠಾಣೆಗಳಿಗೆ ಮೂಲಭೂತ ಸೌಲಭ್ಯಗಳ ಕೊರತೆ ಒದಗಿಸಿಕೊಡುವ ಹಾಗೂ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರಶ್ನೆ ಸಲ್ಲಿಸಿದ್ದರು.

ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಉತ್ತರ ನೀಡಿ, “ಕಳೆದ ಐದು ವರ್ಷಗಳಿಂದಲೂ ಪಿಎಸ್‍ಐಗಳ ನೇಮಕಾತಿ ಆಗಿಲ್ಲ. ಈ ಹಿಂದೆ 545 ಪಿ.ಎಸ್.ಐ. ಹುದ್ದೆಗಳ ನೇಮಕಾತಿಗಾಗಿ ನಡೆದಂತಹ ಪ್ರಕರಣವನ್ನು ಬಗೆಹರಿಸಿ, ನೇಮಕಾತಿ ಮಾಡಿದ್ದು, ಆಯ್ಕೆಯಾದ ಅಭ್ಯರ್ಥಿಗಳನ್ನು ತರಬೇತಿಗಾಗಿ ನಿಯೋಜಿಸಲಾಗಿದೆ. ಮೂರು ತಿಂಗಳಲ್ಲಿ ತರಬೇತಿ ಪೂರ್ಣಗೊಳ್ಳಲಿದ್ದು, ಬಳಿಕ ಖಾಲಿ ಇರುವೆಡೆ, ಅಗತ್ಯ ಇರುವ ಕಡೆಗಳಲ್ಲಿ ಪಿಎಸ್‍ಐಗಳ ಹುದ್ದೆಯನ್ನು ಭರ್ತಿ ಮಾಡಲಾಗುವುದು. ಪೊಲೀಸ್ ಕಾನ್ಸ್‍ಟೇಬಲ್‍ಗಳ ನೇಮಕಾತಿಗಾಗಿಯೂ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅನುಮೋದನೆಯಾಗಿ ಬಂದ ಬಳಿಕ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕರಾವಳಿ ಮುಂತಾದೆಡೆ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂಬ ವರದಿ ಬಂದ ಹಿನ್ನೆಲೆಯಲ್ಲಿ ವಿಶೇಷ ಕಾರ್ಯ ಪಡೆಯನ್ನು ನೇಮಿಸಿದ್ದೇವೆ. ಮನೆ ಮನೆಗೆ ಪೊಲೀಸ್ ಕಾರ್ಯಕ್ರಮವನ್ನು ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ನಮ್ಮ ರಾಜ್ಯದಲ್ಲಿ ನಾವು ಜಾರಿ ಮಾಡಲಾಗಿದೆ. 50 ಮನೆಗೆ ಒಂದು ಕ್ಲಸ್ಟರ್‌ನಂತೆ ಮಾಡಿ, ಪೊಲೀಸ್ ಪೇದೆ ಅವರು ಮನೆ ಮನೆಗೆ ಭೇಟಿ ನೀಡಿ, ಆಯಾ ಮನೆಗಳಲ್ಲಿನ ಕುಟುಂಬಗಳಿಂದ ಸಮಸ್ಯೆಗಳ ಬಗ್ಗೆ ನಿಗದಿತ ಪ್ರಶ್ನೆಗಳನ್ನು ಕೇಳಿ ವಿವರ ಪಡೆಯುತ್ತಾರೆ. ಇದು ಜನರಿಂದಲೂ ಪ್ರಶಂಸೆಗೆ ಒಳಗಾಗಿದೆ” ಎಂದು ಹೇಳಿದರು.

“ಮಹಿಳೆಯರ ಸುರಕ್ಷತೆಗಾಗಿಯೇ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಅಕ್ಕ-ಪಡೆ ರಚಿಸಲಾಗುತ್ತಿದ್ದು, ಇದೂ ಕೂಡ ಮೆಚ್ಚುಗೆ ಪಡೆದುಕೊಂಡಿದೆ. ರಾಜ್ಯದಲ್ಲಿ ಇದರಿಂದ ಅಪರಾಧಗಳ ಸಂಖ್ಯೆ ಇಳಿಮುಖವಾಗುತ್ತಿದೆ. ವಿಶೇಷವಾಗಿ ಕರಾವಳಿ ಪ್ರದೇಶವನ್ನು ಸುರಕ್ಷಿತ ಪ್ರದೇಶವಾಗಿಸಲು ನಮ್ಮ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಹಲವು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...