ಚಿಕ್ಕಮಗಳೂರು: ಪ್ರೀತಿಸಿದವನ ಜೊತೆ ಮಗಳ ಮದುವೆ ಮಾಡಿಸಿದ್ದಕ್ಕೆ ತಂದೆ-ತಾಯಿಯನ್ನು ಬಹಿಷ್ಕರಿಸಿದ ಸಂಬಂಧಿಕರು?

Date:

ಭೋವಿ ಜನಾಂಗಕ್ಕೆ ಸೇರಿದ ಯುವತಿ ಆದಿ ಕರ್ನಾಟಕ ಸಮುದಾಯಕ್ಕೆ ಸೇರಿದ ಯುವಕನನ್ನು ಪ್ರೀತಿಸಿದ್ದು, ಪ್ರೀತಿಸಿದವನ ಜೊತೆಯೇ ಮದುವೆ ಮಾಡಿದ್ದಕ್ಕೆ ಅಪ್ಪ-ಅಮ್ಮನಿಗೆ ಬಹಿಷ್ಕಾರ ಹಾಕಿದ್ದಾರೆ ಎನ್ನಲಾದ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಿಂಗದಹಳ್ಳಿಯ ಭೋವಿ ಕಾಲೋನಿಯಲ್ಲಿ ನಡೆದಿದೆ.

ತರೀಕೆರೆ ತಾಲೂಕಿನ ಲಿಂಗದಹಳ್ಳಿ ಸಮೀಪದ ಭೋವಿ ಕಾಲೋನಿಯ ಜಯಮ್ಮ ಎಂಬುವರಿಗೆ ನಾಲ್ಕು ಜನ ಹೆಣ್ಣು ಮಕ್ಕಳು. ಓರ್ವ ಗಂಡು ಮಗ. ನಾಲ್ಕರಲ್ಲಿ ಮೂರು ಜನ ಹೆಣ್ಣು ಮಕ್ಕಳಿಗೆ ಭೋವಿ ಜನಾಂಗಕ್ಕೆ ಸೇರಿದ ಯುವಕರಿಗೆ ಕೊಟ್ಟು ಮದುವೆ ಮಾಡಿದ್ದರು. ಆದರೆ, ಕೊನೆಯ ಮಗಳನ್ನು ಆದಿ ಕರ್ನಾಟಕ ಸಮುದಾಯಕ್ಕೆ ಸೇರಿದ ಯುವಕನಿಗೆ, ಮನೆಯವರು ಎಲ್ಲರೂ ಒಪ್ಪಿ ಮದುವೆ ಮಾಡಿದ್ದರು.

ಆದರೆ, ಭೋವಿ ಜನಾಂಗದ ಹುಡುಗಿಯನ್ನು ಆದಿ ಕರ್ನಾಟಕದ ಯುವಕನಿಗೆ ಏಕೆ ಕೊಟ್ಟಿರಿ ಎಂದು ಕಳೆದೊಂದು ವರ್ಷದಿಂದ ಜಯಮ್ಮ ಕುಟುಂಬಕ್ಕೆ ಅದೇ ಭೋವಿ ಜನಾಂಗದವರು ಬಹಿಷ್ಕಾರ ಹಾಕಿದ್ದಾರೆ ಎನ್ನಲಾಗಿದೆ. ಮಗಳನ್ನು ಆದಿ ಕರ್ನಾಟಕದ ಜನಾಂಗದ ಯುವಕನಿಗೆ ಕೊಟ್ಟಿದ್ದಕ್ಕೆ ತಮ್ಮ ಜನಾಂಗದ ಜನ ನಮಗೇ ಬಹಿಷ್ಕಾರ ಹಾಕಿದ್ದಾರೆ ಎಂದು ನೊಂದ ಮಹಿಳೆ ಜಯಮ್ಮ ಜಿಲ್ಲಾಧಿಕಾರಿಗೆ ದೂರು ನೀಡಲು ಅರ್ಜಿ ಹಿಡಿದು ಅಲೆದಾಡುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಂತು ಬೇಸಿಗೆ, ತತ್ವಾರ ತಂತು ನೀರಿಗೆ, ಅನುಕೂಲ ಅವಕಾಶವಾದಿಗಳಿಗೆ!

ಇನ್ನು ಬಹಿಷ್ಕಾರ ಹಾಕಿರೋದು ಓರ್ವ ಶಿಕ್ಷಕನಂತೆ. ಅಲ್ಲದೆ, ಜಯಮ್ಮ ಅವರನ್ನು ಊರಿನ ಭೋವಿ ಜನಾಂಗದ ಜನ ಮಾತನಾಡಿಸುವುದನ್ನೇ ಬಿಟ್ಟಿದ್ದಾರೆ ಎನ್ನಲಾಗಿದೆ. ಜಯಮ್ಮ ಅವರನ್ನು ಯಾರು ಯಾವ ಕಾರ್ಯಕ್ರಮಕ್ಕೂ ಕರೆಯುವುದಿಲ್ಲ. ದೇವಸ್ಥಾನಕ್ಕೂ ಹೋಗುವಂತಿಲ್ಲ ಎಂಬ ಆರೋಪ ಕೂಡ ಕೇಳಿಬಂದಿದೆ.

ಇದೀಗ, ಭೀಮ್ ಆರ್ಮಿ ಸಂಘಟನೆ ಮಹಿಳೆಯ ನೆರವಿಗೆ ಬಂದಿದ್ದು, ಪ್ರೀತಿಸಿ ಮದುವೆಯಾಗುವುದು ತಪ್ಪೇನಲ್ಲ. ಯಾರು-ಯಾರನ್ನು ಬೇಕಾದರೂ ವಿವಾಹ ಆಗಬಹುದು. ಅದು ಅವರ ಸ್ವಾತಂತ್ರ್ಯ. ಆದರೆ, ಜಾತಿ ಬಣ್ಣ ಕಟ್ಟಿ ಈ ರೀತಿ ಬಹಿಷ್ಕಾರ ಹಾಕುವುದು ಸರಿಯಲ್ಲ. ಈ ಬಗ್ಗೆ ಎಸ್‌ಸಿ-ಎಸ್‌ಟಿ ದೌರ್ಜನ್ಯ ಸಭೆಯಲ್ಲಿ ಚರ್ಚಿಸಿ ಅವರಿಗೆ ಸೂಕ್ತ ನ್ಯಾಯ ಕೊಡಿಸುತ್ತೇವೆ. ಈ ಬಗ್ಗೆ ಊರಿನ ಜನರಿಗೂ ಮನವರಿಕೆ ಮಾಡೋದಾಗಿ ಭೀಮ್ ಆರ್ಮಿ ಸಂಘಟನೆ ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...