ದಾಖಲಾತಿಗೆ ವಯೋಮಿತಿ ಸಡಿಲಿಕೆ ಮಾಡಿರುವುದು ಮಕ್ಕಳ ಹಕ್ಕುಗಳ ಉಲ್ಲಂಘನೆ: ಮೊಯ್ದಿನ್ ಕುಟ್ಟಿ

Date:

ಕರ್ನಾಟಕದಲ್ಲಿ ರಾಜ್ಯ ಶಿಕ್ಷಣ ನೀತಿ ಆಯೋಗವು 1ನೇ ತರಗತಿಗೆ ದಾಖಲಾತಿಯ ವಯಸ್ಸನ್ನು ಸಡಿಲಗೊಳಿಸಿರುವುದು ಸರಿಯಲ್ಲ. ಹಲವು ನ್ಯಾಯಾಲಯಗಳ ತೀರ್ಪನ್ನು ಉಲ್ಲಂಘಿಸಿರುವುದು ಮಕ್ಕಳ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಎಸ್‌ಡಿಎಂಸಿ ಸಮನ್ವಯ ಕೇಂದ್ರ ವೇದಿಕೆಯ ರಾಜ್ಯ ಸಂಚಾಲಕ ಮೊಯ್ದಿನ್ ಕುಟ್ಟಿ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ರಾಜ್ಯ ಸರ್ಕಾರ ಸಂವಿಧಾನ ಬದ್ದ ಕಾಯ್ದೆಯ ಉಲ್ಲಂಘನೆ ಮಾಡಿರುವುದಕ್ಕೆ ಪೋಷಕರ ಮನವಿಯನ್ನು ಉಲ್ಲೇಖಿಸಿದೆ. ಇದು ಮಕ್ಕಳ ಹಕ್ಕುಗಳ ಬಗ್ಗೆ ಈ ನೀತಿ ನಿರೂಪಕರಲ್ಲಿ ಯಾವುದೇ ರೀತಿಯ ಸ್ಪಷ್ಟ ನಿಲುವು ಇಲ್ಲ ಎನ್ನುವುದನ್ನು ತೋರಿಸುತ್ತದೆ. ಕೇಂದ್ರ ಮತ್ತು ವಿವಿಧ ರಾಜ್ಯ ಸರ್ಕಾರಗಳು 1ನೇ ತರಗತಿಯ ದಾಖಲಾತಿಗೆ 6 ವರ್ಷಗಳ ಕನಿಷ್ಠ ವಯೋಮಿತಿ ನಿಗದಿಪಡಿಸಿರುವುದು, ಮಗುವಿನ ಒತ್ತಡರಹಿತ ಕಲಿಕೆಗೆ ಪೂರಕವಾಗಿದೆ. ಇದೆಲ್ಲವನ್ನು ಒಪ್ಪಿಕೊಳ್ಳುವ ಶಿಕ್ಷಣ ನೀತಿ ನಿರೂಪಕರು ಅದೇ ವಿಷಯಗಳನ್ನು ಉಲ್ಲಂಘಿಸಿರುತ್ತಾರೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು | ಏ.19ರಂದು ಮಹಾನಟಿ-2 ಆಡಿಷನ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವರ್ಷಂಪ್ರತಿ ಸರ್ಕಾರ ಮತ್ತು ಶಿಕ್ಷಣ ಇಲಾಖೆಯು ಪೋಷಕರ ಮನವಿಯ ನೆಪ ಹೇಳಿಕೊಂಡು ದಾಖಲಾತಿ ವಯಸ್ಸಿನಲ್ಲಿ ಬದಲಾವಣೆ ಮಾಡುತ್ತಾ ಬರುತ್ತಿರುವುದು ಸಂವಿಧಾನದ ಅನುಚ್ಛೇದ 21(ಎ), ಶಿಕ್ಷಣ ಹಕ್ಕು ಕಾಯ್ದೆ-2009, ಕಡ್ಡಾಯ ಶಿಕ್ಷಣ ನಿಯಮಗಳು-2012 ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ-2020ರ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಆದರಿಂದ ಶಿಕ್ಷಣ ನೀತಿ ನಿರೂಪಣೆಯಂತಹ ಉನ್ನತ ಸ್ಥಾನದಲ್ಲಿದ್ದು ಮಕ್ಕಳ ಮಾನಸಿಕ ಬೆಳವಣಿಗೆಯ ಬಗ್ಗೆ ಚಿಂತಿಸದೆ ಮಕ್ಕಳ ಪೋಷಕರಿಗಾಗಿ ನಿಯಮ ಕಾಯ್ದೆಗಳನ್ನು ಬೇಕಾಬಿಟ್ಟಿ ಬದಲಾಯಿಸುತ್ತಾ ಇರುವುದನ್ನು ಕರ್ನಾಟಕ ರಾಜ್ಯ ಎಸ್‌ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ ವಿರೋಧಿಸುತ್ತದೆ. ಶಿಕ್ಷಣ ಯಾವಾಗಲೂ ಮಕ್ಕಳ ಕೇಂದ್ರೀಕೃತ ಆಗಿರಬೇಕೇ ವಿನಃ ಪೋಷಕರ ಬೇಡಿಕೆಗಾಗಿ ಬದಲಾಯಿಸುವಂತಿರವಾರದು” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...