ರೇಣುಕಾಸ್ವಾಮಿ ಕೊಲೆ | ಹಾಸ್ಯನಟ ಚಿಕ್ಕಣ್ಣಗೆ ಮತ್ತೆ ಫಜೀತಿ?

Date:

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹಾಸ್ಯನಟ ಚಿಕ್ಕಣ್ಣಗೆ ಮತ್ತೆ ಫಜೀತಿ ಎದುರಾಗಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ನಟ ದರ್ಶನ್‌ ಮತ್ತವನ ಗ್ಯಾಂಗ್‌ ವಿರುದ್ಧ ಪ್ರಮುಖ ಸಾಕ್ಷಿಯಾಗಿರುವ ಚಿಕ್ಕಣ್ಣ ಸೆಕ್ಷನ್ ಸಿಆರ್‌ಪಿಸಿ 164ರ ಅಡಿಯಲ್ಲಿ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ ಬೆನ್ನಲ್ಲೇ ಜೈಲಿನಲ್ಲಿರುವ ನಟ ದರ್ಶನ್‌ ಅವರನ್ನು ಭೇಟಿ ಮಾಡಿದ್ದಾರೆ.

ಸಾಧಾರಣವಾಗಿ ಪ್ರಕರಣವು ತನಿಖಾ ಹಂತದಲ್ಲಿರುವಾಗ ಸಾಕ್ಷಿಯಾದ ವ್ಯಕ್ತಿ ಜೈಲಿನಲ್ಲಿ ಆರೋಪಿಯನ್ನು ಭೇಟಿ ಮಾಡುವುದಿಲ್ಲ. ಆದರೆ, ತನಿಖಾ ಹಂತದಲ್ಲಿರುವಾಗಲೇ ಚಿಕ್ಕಣ್ಣ ಅವರು ದರ್ಶನ್‌ ಅವರನ್ನು ಭೇಟಿ ಮಾಡಿದ್ದಕ್ಕೆ ಪಶ್ಚಿಮ ವಿಭಾಗದ ಪೊಲೀಸರು ಶೀಘ್ರವೇ ನೋಟಿಸ್‌ ನೀಡುವ ಸಾಧ್ಯತೆಯಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಾವ ಉದ್ದೇಶಕ್ಕೆ ಆರೋಪಿಯನ್ನು ಭೇಟಿಯಾಗಿದ್ದೀರಿ? ಆರೋಪಿ ಬಳಿ ಏನು ಮಾತನಾಡಿದ್ದೀರಿ ಎಂದು‌ ಚಿಕ್ಕಣ್ಣ ಅವರನ್ನು ಪೊಲೀಸರು ಪ್ರಶ್ನಿಸಬಹುದು. ಇದರ ಜೊತೆಯಲ್ಲಿ ಸಾಕ್ಷಿ-ಆರೋಪಿ ಭೇಟಿ ಬಗ್ಗೆ ಜೈಲಾಧಿಕಾರಿಗಳ ಬಳಿಯೂ ಮಾಹಿತಿ ಪಡೆಯಬಹುದು. ಅಷ್ಟೇ ಅಲ್ಲದೇ ಸಾಕ್ಷಿಗಳ ಭೇಟಿಯನ್ನ ತಡೆಯಲು ನ್ಯಾಯಾಲಯದಲ್ಲಿ ಎಸ್‌ಐಟಿ ಮನವಿ ಮಾಡುವ ಸಾಧ್ಯತೆಯಿದೆ.

ಕಳೆದ ಜೂನ್ 8 ರಂದು ಸ್ಟೋನಿ ಬ್ರೂಕ್‌ ಪಬ್‌ನಲ್ಲಿ ನಡೆದಿದ್ದ ಪಾರ್ಟಿಯಲ್ಲಿ ದರ್ಶನ್ ಜೊತೆ ಚಿಕ್ಕಣ್ಣ ಭಾಗಿಯಾಗಿದ್ದರು. ಪಾರ್ಟಿ ಬಳಿಕ ದರ್ಶನ್ ಪಟ್ಟಣಗೆರೆ ಶೆಡ್‌ಗೆ ಹೋಗಿದ್ದರೆ ಚಿಕ್ಕಣ್ಣ ಮನೆಗೆ ತೆರಳಿದ್ದರು.

ಚಿಕ್ಕಣ್ಣ ಪ್ರಮುಖ ಸಾಕ್ಷಿ

ಯಾವುದೇ ಪ್ರಕರಣದಲ್ಲಿ ಪೊಲೀಸರು ಠಾಣೆಗೆ ಕರೆಸಿ ಸಾಕ್ಷಿಗಳನ್ನು ವಿಚಾರಣೆ ನಡೆಸುತ್ತಾರೆ. ಆದರೆ ಪ್ರಕರಣ ಒಂದರಲ್ಲಿ ಆ ವ್ಯಕ್ತಿಯ ಹೇಳಿಕೆ ಪ್ರಮುಖ ಸಾಕ್ಷಿ ಆಗಲಿದೆ ಎಂದಾದರೆ ಮಾತ್ರ ಆ ವ್ಯಕ್ತಿಯನ್ನು ಜಡ್ಜ್‌ ಮುಂದೆ ಹಾಜರು ಪಡಿಸಿ ಹೇಳಿಕೆ ನೀಡಲಾಗುತ್ತದೆ.

ನಟ ಚಿಕ್ಕಣ್ಣ ಅವರ ಹೇಳಿಕೆಯನ್ನು ಸಿಆರ್‌ಪಿಸಿ 164ರ ಅಡಿಯಲ್ಲಿ ನ್ಯಾಯಾಧೀಶರ ಎದುರು ಪೊಲೀಸರು ದಾಖಲಿಸಿದ್ದಾರೆ. ಚಿಕ್ಕಣ್ಣ ಅವರ ಹೇಳಿಕೆಯನ್ನು ಪ್ರಮುಖ ಸಾಕ್ಷಿಯನ್ನಾಗಿ ಪರಿಗಣಿಸಲೆಂದೇ ಪೊಲೀಸರು ಜಡ್ಜ್‌ ಮುಂದೆ ಹೇಳಿಕೆ ದಾಖಲು ಮಾಡಿದ್ದಾರೆ ಎನ್ನಲಾಗಿದೆ.

ರೇಣುಕಾಸ್ವಾಮಿ ಕೊಲೆ ನಡೆದ ದಿನ ದರ್ಶನ್ ಅವರ ಜೊತೆ ಚಿಕ್ಕಣ್ಣ ಪಾರ್ಟಿಯಲ್ಲಿ ಭಾಗಿಯಾಗಿದ್ದರು. ಚಿಕ್ಕಣ್ಣ ಠಾಣೆಗೆ ಬಂದು ಪೊಲೀಸರು ಕೇಳಿದ ವಿವರಗಳನ್ನು ನೀಡಿದ್ದರೂ ಮುಂದೆ ಚಿಕ್ಕಣ್ಣ ಏನಾದರೂ ತಮ್ಮ ಹೇಳಿಕೆಯನ್ನು ಬದಲಿಸಿದರೆ ವಿಚಾರಣೆಗೆ ಹಿನ್ನಡೆಯಾಗಬಹುದು ಎಂಬ ಕಾರಣಕ್ಕೆ ಅವರ ಹೇಳಿಕೆಯನ್ನು ನ್ಯಾಯಾಧೀಶರ ಮುಂದೆಯೇ ಪಡೆದುಕೊಳ್ಳಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...