ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲು; ಸಿಎಂಗೆ ಅಭಿನಂದನೆ ಸಲ್ಲಿಸಿದ ಉಡಚಪ್ಪ ಮಾಳಗಿ

Date:

ರಾಜ್ಯದಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನೀಡುವ ಸಂಬಂಧ ಅಧಿಕೃತ ಆದೇಶ ಹೊರಡಿಸಲು ಸಹಕಾರ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಲ್ಲ ಮಂತ್ರಿಗಳಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮತ್ತು ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ರಾಜ್ಯಾಧ್ಯಕ್ಷ ಉಡಚಪ್ಪ ಮಾಳಗಿ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ಬಿಡುಗಡರ ಮಾಡಿರುವ ಅವರು, “ಡಿಸೆಂಬರ್ 21ರಂದು ಸಚಿವ ಸಂಪುಟ ಸಭೆ ಕೈಗೊಂಡಿದ್ದ ನಿರ್ಣಯ ಆಧರಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಸಂಬಂಧ ಸುತ್ತೋಲೆ ಹೊರಡಿಸಿದೆ. ಈ ಮೀಸಲು ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲು ಕಡ್ಡಾಯವಾಗಿದ್ದು, ಎಲ್ಲ ಇಲಾಖೆಗಳು, ಸ್ವಾಯತ್ತ ಸಂಸ್ಥೆ, ನಿಗಮ, ಮಂಡಳಿ, ವಿಶ್ವವಿದ್ಯಾಲಯಗಳಿಗೂ ಇದು ಅನ್ವಯವಾಗಲಿದೆ. ಡಾಟಾ ಎಂಟ್ರಿ ಅಪರೇಟರ್, ವಾಹನ ಚಾಲಕರು, ಗ್ರೂಪ್-ಡಿ ಹಾಗೂ ಸ್ವಚ್ಛತಾ ಸಿಬ್ಬಂದಿ ಒಳಗೊಂಡು ಎಲ್ಲ ಇಲಾಖೆಗಳ ಹೊರಗುತ್ತಿಗೆ ನೇಮಕಾತಿಯಲ್ಲಿ ಇನ್ನು ಮುಂದೆ ಮೀಸಲು ನಿಯಮ ಪಾಲನೆ ಕಡ್ಡಾಯವಾಗಿದೆ. ಸಾಮಾಜಿಕ ನ್ಯಾಯ ಮತ್ತು ಸಮಾನ ಉದ್ಯೋಗಾವಕಾಶ ಒದಗಿಸುವ ದೃಷ್ಟಿಯಿಂದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲು ವ್ಯವಸ್ಥೆ ಜಾರಿ ಮಾಡಲಾಗಿದೆ.ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲು ನೀಡುವಂತೆ ವಿವಿಧ ಸಂಘಟನೆಗಳು ನಿರಂತರ ಹೋರಾಟ ಮಾಡುತ್ತಾ ಬರುತ್ತಿದ್ದವು. ಈಗ ಸರ್ಕಾರದ ಆದೇಶ ಬಂದಿದ್ದು,ಈ ಆದೇಶದಿಂದ ಸಾಮಾಜಿಕ ನ್ಯಾಯ ಸಿಗುವಂತಾಗಲಿ ಮತ್ತು ಸಂಬಂಧಿಸಿದ ಎಲ್ಲಾ ಇಲಖೆಗಳು ಕಡ್ಡಾಯ ಆದೇಶ ಪಾಲನೆ ಮಾಡುವಂತೆ ಸರ್ಕಾರ ಕಾಳಜಿವಹಿಸುವಂಗಬೇಕು” ಎಂಧು ಅವರು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...