ಆದಿವಾಸಿಗಳಿಗೆ ಭೂಮಿ ಮರಳಿಸುವುದೇ ನಿಜವಾದ ಪರಿಹಾರ: ಕೆ.ಪಿ.ಅಶ್ವಿನಿ

Date:

“ಆದಿವಾಸಿಗಳಿಗೆ ಭೂಮಿಯನ್ನು ಮರಳಿಸುವುದೇ ನಿಜವಾದ ಪರಿಹಾರ. ಆ ನಿಟ್ಟಿನಲ್ಲಿ ವಿವಿಧ ದೇಶಗಳಲ್ಲಿ ಚರ್ಚೆಗಳಾಗುತ್ತಿವೆ” ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಆಯೋಗದ ಸ್ವತಂತ್ರ ವಿಶೇಷ ತಜ್ಞರಾದ ಕೆ.ಪಿ.ಅಶ್ವಿನಿ ಹೇಳಿದರು.

ಫ್ರೆಂಡ್ಸ್‌ ಚಾರಿಟೆಬಲ್ ಟ್ರಸ್ಟ್‌ ವತಿಯಿಂದ ಬೆಂಗಳೂರಿನ ಇಂಡಿಯನ್ ಸೋಶಿಯಲ್ ಇನ್‌ಸ್ಟಿಟ್ಯೂಟ್‌ನಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ’ಆದಿವಾಸಿ ಸಮುದಾಯಗಳು, ಸಂವಿಧಾನದ ಹಕ್ಕುಗಳು ಸರ್ಕಾರದ ಅಭಿವೃದ್ಧಿ ಯೋಜನೆಗಳು ಮತ್ತು ನೀತಿಗಳ ಕುರಿತ ವಿಶೇಷ ಕಾರ್ಯಾಗಾರ’ದಲ್ಲಿ ಅವರು ಮಾತನಾಡಿದರು.

ವರ್ಷದಲ್ಲಿ ಎರಡು ದೇಶಗಳಿಗೆ ಭೇಟಿ ನೀಡಿ ಅಧ್ಯಯನ ಮಾಡುವುದು ನಮ್ಮ ಕೆಲಸವಾಗಿರುತ್ತದೆ. ಅಧಿಕೃತ ಪ್ರವಾಸದ ಭಾಗವಾಗಿ ಅಮೆರಿಕಕ್ಕೆ ಇತ್ತೀಚೆಗೆ ಹೋಗಿದ್ದೆ. ವರ್ಣಬೇಧ, ಜನಾಂಗೀಯ ಬೇಧದ ಬಗ್ಗೆ ಮಾಪನ ಮಾಡಿ, ಸರ್ಕಾರಗಳಿಗೆ ಶಿಫಾರಸ್ಸುಗಳನ್ನು ಕೊಡುತ್ತೇವೆ. ನಾಗರಿಕ ಗುಂಪುಗಳು, ಹೋರಾಟಗಾರರು ಮತ್ತು ಆದಿವಾಸಿಗಳ ಜೊತೆ ಚರ್ಚಿಸಿದೆ. ಆದಿವಾಸಿಗಳಿಗೆ ಪರಿಹಾರ ನೀಡುವ ಕುರಿತು ಅಮೆರಿಕ ಮತ್ತಿತ್ತರ ದೇಶಗಳಲ್ಲಿ ಗಂಭೀರ ಚರ್ಚೆಗಳು ನಡೆಯುತ್ತಿವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತ ಅಥವಾ ದಕ್ಷಿಣ ಏಷಿಯಾಗಳಲ್ಲಿ ಇಂತಹ ಪರಿಹಾರಗಳ ಬಗ್ಗೆ ಸರಿಯಾದ ಚರ್ಚೆಯೇ ಆಗುತ್ತಿಲ್ಲ. ಪರಿಹಾರವೆಂದರೆ ಹತ್ತು ಸಾವಿರ ರೂಪಾಯಿ ಕೊಟ್ಟು ಸುಮ್ಮನಿರುವುದಲ್ಲ. ಮುಟ್ಟುಗೋಲು ಹಾಕಿಕೊಂಡಿರುವ ಭೂಮಿಯನ್ನು ವಾಪಸ್ ಕೊಡಬೇಕು. ನಿಮಗೆ ಪಿಂಚಣಿ ಕೊಟ್ಟುಬಿಡುತ್ತೇವೆ ಎಂಬುದು ನಿಜವಾದ ಪರಿಹಾರವಲ್ಲ. ಮೈನಿಂಗ್‌ಗಾಗಿ ಕಬಳಿಸಿರುವ ಭೂಮಿಯನ್ನು ವಾಪಸ್ ಕೊಡುವುದೇ ಸರಿಯಾದ ಪರಿಹಾರವಾಗಿರುತ್ತದೆ ಎಂದು ಅಭಿಪ್ರಾಯಪಟ್ಟರು.

ಆದಿವಾಸಿಗಳ ವಿರುದ್ಧ ತಾರತಮ್ಯಗಳು ನಡೆಯುತ್ತಿವೆ ಎಂಬುದನ್ನು ಸಾಬೀತು ಮಾಡುವುದರಲ್ಲೇ ಸಮಯ ಹೊರಟು ಹೋಗುತ್ತಿದೆ. ಸವರ್ಣೀಯರು ಅಸಮಾನತೆ ಇದೆ ಎಂದು ಒಪ್ಪಲ್ಲ. ಮೂಲಭೂತ ಹಕ್ಕುಗಳಿವೆ ಎಂದು ವಾದ ಮಾಡುತ್ತಾರೆ ಎಂದರು.

ಸಾಮಾಜಿಕ ನ್ಯಾಯ ಪರಿಶಿಷ್ಟ ಜಾತಿಗಳ ಒಕ್ಕೂಟದ ರಾಜ್ಯ ಪ್ರಧಾನ ಸಂಚಾಲಕರಾದ ಬಸವರಾಜ ಕೌತಾಳ್‌ ಮಾತನಾಡಿ, “ಸಂವಿಧಾನ ಪೂರ್ವ ಕಾಲಘಟ್ಟ ಹೇಗಿತ್ತು ಮತ್ತು ಸಂವಿಧಾನ ನಂತರ ನಮ್ಮ ಪರಿಸ್ಥಿತಿ ಏನಾಗಿದೆ ಎಂಬುದರ ಬಗ್ಗೆ ಪುನರಾವಲೋಕನ ಮಾಡಬೇಕಿದೆ. ನಮಗೆ ಶಿಕ್ಷಣ, ಉದ್ಯೋಗ ಸಿಕ್ಕಿದೆ. ಗೌರವವಾಗಿ ಬದುಕಲು ಏನಾದರೂ ದೊರೆತಿದೆ ಎಂದರೆ ಅದಕ್ಕೆ ಸಂವಿಧಾನ ಕಾರಣ. ಸಂವಿಧಾನದಿಂದಾಗಿ ಹೊಸ ಹೊಸ ರೀತಿಯ ಕಾನೂನುಗಳು ಬಂದಿವೆ. ನಮ್ಮ ಇತಿಹಾಸ ಆರಂಭವಾಗಿರುವುದೇ ಸಂವಿಧಾನ ಬಂದ ನಂತರ” ಎಂದು ಅಭಿಪ್ರಾಯಪಟ್ಟರು.

ಹೊಸ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದೇವೆ. ಈ ಹಿಂದಿನ ಸರ್ಕಾರ ನಮ್ಮ ವಿರುದ್ಧವಿತ್ತು. ಆದರೆ ಈ ಸರ್ಕಾರ ನಮ್ಮ ಪರವಾಗಿ ಕೆಲಸ ಮಾಡುತ್ತಾ, ನಮ್ಮ ಹಕ್ಕುಗಳನ್ನು ಕಾಪಾಡುತ್ತಾ ಎಂಬದನ್ನು ನೋಡಬೇಕಿದೆ ಎಂದು ಹೇಳಿದರು.

ದಿಡ್ಡಳ್ಳಿ ಚಳವಳಿಯ ಹೋರಾಟಗಾರ್ತಿ ಮುತ್ತಮ್ಮ ತಮ್ಮ ಹೋರಾಟದ ಕ್ಷಣಗಳನ್ನು ಹಂಚಿಕೊಂಡರು. ಈಗಲೂ ಆದಿವಾಸಿಗಳು ಎದುರಿಸುತ್ತಿರುವ ನೋವುಗಳನ್ನು ಬಿಚ್ಚಿಟ್ಟರು.

ಜೇಬುಕುರುಬ ಸಮುದಾಯದ ಶಿವು ಹಾಡು ಹಾಡಿದರು. ರಾಜ್ಯ ಮೂಲ ಆದಿವಾಸಿ ವೇದಿಕೆಯ ಅಧ್ಯಕ್ಷ ಕೆ.ಎನ್.ವಿಠಲ್, ಫ್ರೆಂಡ್ಸ್ ಚಾರಿಟೆಬಲ್ ಟ್ರಸ್ಟ್ನ ಅಧ್ಯಕ್ಷ ಬಿ.ಎಂ.ಯಶವಂತ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...