ರೂಪಾ ಮೌದ್ಗಿಲ್ – ರೋಹಿಣಿ ಸಿಂಧೂರಿ ಪ್ರಕರಣ: ರಾಜಿ ಮಾಡಿಕೊಳ್ಳಲು ನ್ಯಾಯಾಲಯದ ಸಲಹೆ

Date:

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಪರಸ್ಪರ ನ್ಯಾಯಾಂಗ ಹೋರಾಟ ನಡೆಸುವ ಬದಲಿಗೆ ರಾಜಿಯಾಗುವ ಬಗ್ಗೆ ಪರಿಶೀಲಿಸುವುದು ಸೂಕ್ತ ಎಂದು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.

ರೋಹಿಣಿ ಸಿಂಧೂರಿ ಅವರು ರೂಪಾ ವಿರುದ್ಧ ದಾಖಲಿಸಿರುವ ಮಾನನಷ್ಟ ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ 5ನೇ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್‌ ವಿಜಯ್‌ಕುಮಾರ್‌ ಎಸ್‌. ಜಾಟ್ಲಾ ವಿಚಾರಣೆ ನಡೆಸಿದರು.

ದೂರುದಾರೆ ರೋಹಿಣಿ ಸಿಂಧೂರಿ ಮತ್ತು ಆರೋಪಿ ರೂಪಾ‌ ಮೌದ್ಗಿಲ್ ಇಬ್ಬರೂ ನ್ಯಾಯಾಲಯಕ್ಕೆ ಹಾಜರಾಗಿದ್ದರು. ರೂಪಾ ಮೌದ್ಗಿಲ್ ಪರ ಹಾಜರಿದ್ದ ವಕೀಲ ಪಿ ಪ್ರಸನ್ನ ಕುಮಾರ್ ಅವರು ಸಾಕ್ಷಿಯ ಪಾಟೀ ಸವಾಲು ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಚಾರಣೆ ಆಲಿಸಿದ ಮ್ಯಾಜಿಸ್ಟ್ರೇಟ್‌ “ಇಬ್ಬರೂ ಉತ್ತಮ ಹೆಸರು ಗಳಿಸಿದ ಹಿರಿಯ ಅಧಿಕಾರಿಗಳು. ನಿಮ್ಮ ಸಮಯವನ್ನು ಸಮಾಜಕ್ಕಾಗಿ ಮೀಸಲಿಡಬೇಕು. ಹೀಗೆ ನ್ಯಾಯಾಲಯದ ಕಲಾಪದಲ್ಲಿ ವ್ಯಯಿಸುವ ಬದಲು ರಾಜಿಯಾಗಲು ಸಾಧ್ಯವೇ ಯೋಚಿಸಿ” ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಅತ್ಯಾಚಾರ ಅಪರಾಧದ ವ್ಯಾಪ್ತಿಗೆ ‘ಶವ ಸಂಭೋಗ’: ಕರ್ನಾಟಕದ ಮನವಿ ತಿರಸ್ಕರಿಸಿದ ಸುಪ್ರೀಂ

ಅಲ್ಲದೇ, “ಒನ್ ಮಿನಿಟ್ ಅಪಾಲಜಿ ಪುಸ್ತಕವನ್ನು ಇಬ್ಬರೂ ಓದಿ” ಎಂದು ಸಲಹೆ ನೀಡಿ, ವಿಚಾರಣೆಯನ್ನು ಫೆಬ್ರವರಿ 12ಕ್ಕೆ ಮುಂದೂಡಿದರು.

ಇದಕ್ಕೂ ಮುನ್ನ, ರೋಹಿಣಿ ಪರ ವಕೀಲರು ಗೌಪ್ಯ ವಿಚಾರಣೆಗೆ ಕೋರಿದರು. ಆ ಮನವಿಯನ್ನು ರೂಪಾ ಪರ ವಕೀಲರು ಆಕ್ಷೇಪಿಸಿದರು. ನಂತರ ಇಬ್ಬರ ಒಪ್ಪಿಗೆ ಮೇರೆಗೆ ಗೌಪ್ಯ ವಿಚಾರಣೆ ನಡೆಸಲಾಯಿತು. ಅದಕ್ಕಾಗಿ ಕೋರ್ಟ್‌ ಹಾಲ್‌ ಒಳಗಿದ್ದ ವಕೀಲರು, ಕೋರ್ಟ್‌ ಸಿಬ್ಬಂದಿ, ಪೊಲೀಸರು, ಇತರೆ ಅಧಿಕಾರಿಗಳು ಮತ್ತು ಮಾಧ್ಯಮ ಪ್ರತಿನಿಧಿಗಳನ್ನು ಹೊರಗೆ ಕಳುಹಿಸಲಾಯಿತು. ವಿಚಾರಣೆಗೆ ಹಾಜರಾಗಿದ್ದ ಸಿಂಧೂರಿ ಪತಿ ಸುಧೀರ್‌ ರೆಡ್ಡಿ ಮತ್ತು ರೂಪಾ ಪತಿ ಮನೀಷ್‌ ಮೌದ್ದಿಲ್‌ ಅವರನ್ನು ಸಹ ಹೊರ ಕಳುಹಿಸಿ ಬಾಗಿಲು ಮುಚ್ಚಲಾಯಿತು. ರೂಪಾ, ರೋಹಿಣಿ ಮತ್ತು ಅವರಿಬ್ಬರ ಪರ ಓರ್ವ ವಕೀಲರಿಗೆ ಮಾತ್ರ ಕೋರ್ಟ್‌ ಒಳಗೆ ಇರಲು ನ್ಯಾಯಾಧೀಶರು ಅನುಮತಿಸಿ, ಪಾಟಿ ಸವಾಲು ಪ್ರಕ್ರಿಯೆ ನಡೆಸಲಾಯಿತು.

ರೂಪಾ ಮೌದ್ಗಿಲ್ 2023ರ ಫೆಬ್ರವರಿ 18 ಮತ್ತು 19ರಂದು ಫೇಸ್‌ಬುಕ್ ಖಾತೆಯಲ್ಲಿ ನನ್ನ ವಿರುದ್ಧ ಕೀಳು ಅಭಿರುಚಿಯ ಪೋಸ್ಟ್‌ ಪ್ರಕಟಿಸಿ ತೇಜೋವಧೆ ಮಾಡಿದ್ದಾರೆ. ಅದು ನನ್ನ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿದೆ. ನನಗೆ ಮಾನಸಿಕ ಯಾತನೆ ಉಂಟು ಮಾಡಿವೆ. ಆದ್ದರಿಂದ ರೂಪಾ ಅವರಿಂದ ರೂ. ಒಂದು ಕೋಟಿ ಹಣವನ್ನು ಪರಿಹಾರವಾಗಿ ಪಾವತಿಸಲು ನಿರ್ದೇಶಿಸಬೇಕು ಹಾಗೂ ಅವರ ವಿರುದ್ಧ ಸೂಕ್ತ ದಂಡನೀಯ ಕ್ರಮ ಕೈಗೊಳ್ಳಬೇಕು ಎಂದು ಕೋರಿ ರೋಹಿಣಿ 2023ರ ಮಾರ್ಚ್‌ 3ರಂದು, ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...