ಲಿಂಗಾಯತ ಅಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿ ಶಾಮನೂರ್‌ಗೆ ತಿರುಗೇಟು ನೀಡಿದ ರಾಯರೆಡ್ಡಿ

Date:

  • ಲಿಂಗಾಯತ ಅಧಿಕಾರಿಗಳಿಗೆ ಸೂಕ್ತ ಸ್ಥಾನಮಾನ ನೀಡಿಲ್ಲ ಎಂಬುದು ತಪ್ಪು
  • ಬೇಕಾದರೆ ತಮಗೆ ಬೇಕಾದ ಅಧಿಕಾರಿಗಳನ್ನು ಶಾಮನೂರು ಹಾಕಿಕೊಳ್ಳಲಿ

ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಸೂಕ್ತ ಸ್ಥಾನಮಾನ ನೀಡಿಲ್ಲ ಎಂಬ ಶಾಮನೂರು ಶಿವಶಂಕರಪ್ಪ ಹೇಳಿಕೆ ತಪ್ಪಿನಿಂದ ಕೂಡಿದೆ ಎಂದು ಸಿದ್ದರಾಮಯ್ಯ ಬಣದ ಶಾಸಕ ಬಸವರಾಜ ರಾಯರೆಡ್ಡಿ ತಿರುಗೇಟು ನೀಡಿದ್ದಾರೆ.

ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಜಾತಿ ಆಧಾರದಲ್ಲಿ ಅಧಿಕಾರಿಗಳ ನೇಮಕಾತಿ ನಡೆದರೆ ಅನರ್ಹರು ಮೇಲೆ ಬಂದು ಕೂರುತ್ತಾರೆ. ಜಾತಿ ಆಧಾರದಲ್ಲಿ ಪೋಸ್ಟಿಂಗ್ ಕೊಡಲು ಆಗಲ್ಲ. ಆದರೆ ಮಂತ್ರಿ ಮಾಡುವ ಸಂದರ್ಭದಲ್ಲಿ ಸಾಮಾಜಿಕ ನ್ಯಾಯ ಕೊಡಲಾಗುತ್ತದೆ” ಎಂದರು.

ಲಿಂಗಾಯತ ಅಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ ರಾಯರೆಡ್ಡಿ, ಸಿದ್ದರಾಮಯ್ಯ ಅವರು ಲಿಂಗಾಯತ ವಿರೋಧಿ ಅಲ್ಲ. ಮೂವರು ಡಿಸಿಗಳು, ಏಳು ಎಸ್ಪಿಗಳು, ನಾಲ್ಕು ಸಿಇಒ, 13 ಉಪಕುಲಪತಿಗಳು, ಏಳು ಮಂತ್ರಿಗಳು ಲಿಂಗಾಯತರಿದ್ದಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಿದ್ದರಾಮಯ್ಯ ಲಿಂಗಾಯತ ವಿರೋಧಿ ಅಲ್ಲ, ಸಿದ್ದರಾಮಯ್ಯ ಬಡವರ ಪರ, ಶೋಷಣೆಗೆ ಒಳಪಟ್ಟ ಸಮುದಾಯಗಳ ಪರ ಇದ್ದಾರೆ. ಲಿಂಗಾಯತರು ಶೋಷಿತರ ಮನೆಗೆ ಹೋಗಲ್ಲ ನಮ್ಮ ಕಡೆ ಈ ವ್ಯವಸ್ಥೆ ಇದೆ” ಎಂದರು.

ಬೇಕಾದ ಅಧಿಕಾರಿಗಳನ್ನು ಹಾಕಿಕೊಳ್ಳಿ

“ಶಾಮನೂರು ಅವರು ತಪ್ಪು ಮಾಹಿತಿ ಇಟ್ಟುಕೊಂಡು ಮಾತನಾಡಬಾರದು. ಬೇಕಾದರೆ ತಮಗೆ ಬೇಕಾದ ಅಧಿಕಾರಿಗಳನ್ನು ಶಾಮನೂರು ಅವರು ಹಾಕಿಕೊಳ್ಳಲಿ. ಮಾಹಿತಿ ಕೊರತೆಯಿಂದ ಮಾತನಾಡುವುದು ತಪ್ಪು” ಎಂದು ಹೇಳಿದರು.

“ಅಧಿಕಾರಿಗಳ ಬಗ್ಗೆ ಜಾತಿ ಆಧಾರದಲ್ಲಿ ಮಾತನಾಡುವುದೇ ತಪ್ಪು. ಸಾಕಷ್ಟು ಮುಖ್ಯ ಇಂಜಿನಿಯರ್ ಪೋಸ್ಟ್‌ನಲ್ಲಿ ಲಿಂಗಾಯತರಿದ್ದಾರೆ. ಹೀಗೆ ಆದರೆ ನಾಳೆ ಒಕ್ಕಲಿಗರು, ಕುರುಬರು ಮಾತನಾಡುತ್ತಾರೆ. ಹೀಗಾದರೆ ಆಡಳಿತ ನಡೆಸುವುದು ಹೇಗೆ? ಶಾಮನೂರು ಹೇಳಿಕೆ ಪರಿಣಾಮ ಆಡಳಿತದ ಮೇಲೆ ಬೀರುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ಜಾತಿಗಣತಿ ವರದಿ ಸಲ್ಲಿಸಲು ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚನೆ: ಸಿಎಂ ಸಿದ್ದರಾಮಯ್ಯ

“ದಾವಣಗೆರೆಯಲ್ಲಿ ಜಿಪಂ ಸಿಇಒ ಲಿಂಗಾಯತ ಸಮುದಾಯದವರೇ ಆಗಿದ್ದಾರೆ. ಶಾಮನೂರು ಜಾತಿ ವಿಚಾರ ಮಾತನಾಡಿದ್ದು ತಪ್ಪು. ಅವರದ್ದು ಡ್ಯುಯೆಲ್ ರೋಲ್, ನಾನಂತೂ ಎಂದೂ ಜಾತಿ ಆಧಾರದ ಮೇಲೆ ಮಂತ್ರಿ ಮಾಡಿ ಅಂತ ಕೇಳಲ್ಲ. ಅನರ್ಹರೆಲ್ಲ ನಾಳೆ ಜಾತಿ ಆಧರಿಸಿ ಬಂದು ಕೂರುತ್ತಾರೆ. ಯಾವುದೇ ಸಮುದಾಯದವರೂ ಹೀಗೆ ಮಾತನಾಡಬಾರದು ಅಂತ ಬಯಸುತ್ತೇನೆ” ಎಂದು ಹೇಳಿದರು.

“ನಾನು ಸಿದ್ದರಾಮಯ್ಯ ಪರ ವಕಾಲತ್ತು ವಹಿಸುತ್ತಿಲ್ಲ. ನನ್ನನ್ನ ಸಚಿವರನ್ನಾಗಿ ಮಾಡಿ, ಏನಾದರೂ ಮಾಡಿ ಅಂತಾ ಭಿಕ್ಷೆ ಬೇಡಲ್ಲ. ನಾನು ಭಿಕ್ಷೆ ಬೇಡಲ್ಲ ಜಾತಿ ಆಧಾರದ ಮೇಲೆ ಅಧಿಕಾರಿಗಳ ವರ್ಗಾವಣೆ ಬೇಡ, ಆಡಳಿತ ಕುಸಿಯುತ್ತದೆ” ಎಂದರು.

ಮಹತ್ವ ಕಳೆದುಕೊಂಡ ಡಿಸಿಎಂ ಪೋಸ್ಟ್

ಡಿಸಿಎಂ ಸ್ಥಾನ ಬಗ್ಗೆ ಪ್ರತಿಕ್ರಿಯಿಸಿದ ರಾಯರೆಡ್ಡಿ, “ಡಿಸಿಎಂ ಸ್ಥಾನ ಅದರ ಮಹತ್ವವನ್ನು ಕಳೆದುಕೊಂಡಿದೆ. ಐದು, ಆರು ಜನ ಡಿಸಿಎಂ ಮಾಡಿದರೆ ಹೇಗೆ? ಆಡಳಿತ ದೃಷ್ಟಿಯಿಂದ ಪ್ರಯೋಜನ ಇಲ್ಲ, ರಾಜಕೀಯ ದೃಷ್ಟಿಯಿಂದ ಬೇಕಾದರೆ ಮಾಡಿ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...