ಮೂರು ತಿಂಗಳ ಬಳಿಕ ಭಾವನಾತ್ಮಕ ಪೋಸ್ಟ್‌ ಹಂಚಿಕೊಂಡ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು

Date:

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಮೂರು ತಿಂಗಳ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ಪೋಸ್ಟ್‌ವೊಂದನ್ನು ಹಂಚಿಕೊಂಡಿದೆ.

ಜಗತ್ತಿನಲ್ಲೇ ಅತೀ ಹೆಚ್ಚು ಫ್ಯಾನ್ಸ್ ಹೊಂದಿರುವ ಬೆಂಗಳೂರಿನ ಆರ್‌ಸಿಬಿ ತಂಡ ಬರೋಬ್ಬರಿ 18 ವರ್ಷಗಳ ನಂತರ ಐಪಿಎಲ್ ಟ್ರೋಫಿ ಗೆದ್ದಿತ್ತು. ಆರ್‌ಸಿಬಿ ಗೆಲುವು ಕಂಡು ಕ್ರೀಡಾಭಿಮಾನಿಗಳು ಹಗಲು ರಾತ್ರಿ ಸಂಭ್ರಮಿಸಿದ್ದರು. ಆದರೆ ಆ ಗೆಲುವಿನ ಖುಷಿ ಹೆಚ್ಚು ಸಮಯ ಉಳಿಯಲಿಲ್ಲ. 24 ಗಂಟೆಗಳಲ್ಲಿ ಶೋಕದ ವಾತಾವರಣ ತಿರುಗಿತ್ತು.

ಟ್ರೋಫಿ ಗೆದ್ದು ಬೆಂಗಳೂರಿಗೆ ಬಂದಿಳಿದಿದ್ದ ಆರ್‌ಸಿಬಿ ತಂಡವನ್ನು ನೋಡಲು ಚಿನ್ನಸ್ವಾಮಿ ಸ್ಟೇಡಿಯಂಗೆ ಸಾವಿರಾರು ಮಂದಿ ಅಭಿಮಾನಿಗಳು ಬಂದಿದ್ದಾಗ ಕಾಲ್ತುಳಿತ ಉಂಟಾಗಿ 11 ಮಂದಿ ಸಾವನ್ನಪ್ಪಿದ್ದರು. ಆ ನಂತರ ಸಾಕಷ್ಟು ಬೆಳವಣಿಗೆಗಳು ಸಂಭವಿಸಿದವು. ಬಳಿಕ ದುರ್ಘಟನೆಗೆ ಸಂತಾಪ ಸೂಚಿಸಿದ್ದ ಆರ್‌ಸಿಬಿ ತಂಡ ಬಳಿಕ ಸೈಲೆಂಟ್ ಆಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಲಿಂದ ಮೂರು ತಿಂಗಳ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಯಾವುದೇ ಪೋಸ್ಟ್ ಹಾಕಿರದ ಆರ್‌ಸಿಬಿ ಇದೀಗ ಪೋಸ್ಟ್ ಮಾಡುವ ಮೂಲಕ ಫ್ಯಾನ್ಸ್‌ಗೆ ಗುಡ್‌ನ್ಯೂಸ್ ನೀಡಿದೆ.

ಪೋಸ್ಟ್‌ನಲ್ಲಿ ಏನಿದೆ?

ಪ್ರಿಯ 12ನೇ ಸೇನಾಧಿಕಾರಿಗಳೇ, ಇದು ನಿಮಗೆ ನಮ್ಮ ಹೃತ್ತೂರ್ವಕ ಪತ್ರ! ನಿಮ್ಮ 12ನೇ ಸೈನ್ಯದ ಬಗ್ಗೆ ನಾವು ತುಂಬಾ ಸಂತೋಷಪಡುತ್ತೇವೆ. ನಾವು ಮೌನಕ್ಕೆ ಜಾರಿರಲಿಲ್ಲ. ದುಃಖದಲ್ಲಿ ಮುಳುಗಿದ್ದೆವು. ಈ ಸ್ಥಳವು ಒಂದು ಕಾಲದಲ್ಲಿ ನೀವು ಹೆಚ್ಚು ಆನಂದಿಸಿದ ಶಕ್ತಿ, ನೆನಪುಗಳು ಮತ್ತು ಕ್ಷಣಗಳಿಂದ ತುಂಬಿತ್ತು.. ಆದರೆ ಜೂನ್ 4 ಎಲ್ಲವನ್ನೂ ಬದಲಾಗಿ ಹೋಯಿತು.

ಆ ದಿನ ನಮ್ಮ ಹೃದಯಕ್ಕೆ ನೋವನ್ನುಂಟು ಮಾಡಿದೆ. ಅಂದಿನಿಂದ ಮೌನವು ಎಲ್ಲವನ್ನೂ ಸ್ತಬ್ಧವಾಗಿತ್ತು. ಆ ಮೌನದಲ್ಲಿ, ನಾವು ದುಃಖಿಸುತ್ತಿದ್ದೇವೆ, ಕೇಳುತ್ತಿದ್ದೇವೆ & ಕಲಿಯುತ್ತಿದ್ದೇವೆ. ನಿಧಾನವಾಗಿ, ನಾವು ಕೇವಲ ಪ್ರತಿಕ್ರಿಯೆಗಿಂತ ಹೆಚ್ಚಿನ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಪ್ರಾರಂಭಿಸಿದ್ದೇವೆ. ನಾವು ನಿಜವಾಗಿಯೂ ನಂಬುವ ವಿಷಯದಲ್ಲಿ ಸಾಗಿದ್ದೇವೆ.

ಆರ್‌ಸಿಬಿ ನಮ್ಮ ಅಭಿಮಾನಿಗಳನ್ನು ಗೌರವಿಸುವ, ನೋವನ್ನು ಗುಣಪಡಿಸುವ ಮತ್ತು ಅವರಿಗೆ ಬೆಂಬಲವಾಗಿ ನಿಲ್ಲುವ ಅಗತ್ಯವನ್ನು ತಿಳಿದುಕೊಂಡಿದೆ. ನಮ್ಮ ಸಮುದಾಯ ಮತ್ತು ಅಭಿಮಾನಿಗಳು ರೂಪಿಸಿದ ಅರ್ಥಪೂರ್ಣ ಕ್ರಿಯೆಗೆ ವೇದಿಕೆಯಾಗಿದೆ. ನಾವು ಇಂದು ಈ ಸ್ಥಳಕ್ಕೆ ಹಿಂತಿರುಗುತ್ತೇವೆ, ಆಚರಣೆಯೊಂದಿಗೆ ಅಲ್ಲ ಆದರೆ ಕಾಳಜಿಯೊಂದಿಗೆ. ಹೊಸತನ್ನು ಹಂಚಿಕೊಳ್ಳಲು. ನಿಮ್ಮೊಂದಿಗೆ ನಿಲ್ಲಲು. ಮುಂದೆ ನಡೆಯಲು, ಒಟ್ಟಿಗೆ. ಕರ್ನಾಟಕದ ಹೆಮ್ಮೆಯಾಗಿ ಮುಂದುವರಿಯಲು. ಇದು ನಮ್ಮ ಕಾಳಜಿ, ನಮ್ಮ ಪ್ರತಿಜ್ಞೆ.. ಎಂದು ಟ್ವೀಟ್‌ ಮಾಡಿದೆ.

ಹೆಚ್ಚಿನ ಮಾಹಿತಿಯನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ತಂಡ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...