ಕೆಎಸ್‌ಒಯು ಹಗರಣ | ಎಫ್‌ಐಆರ್ ದಾಖಲು; ಸಿಬಿಐ ತನಿಖೆ ಆರಂಭ

Date:

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್‌ಒಯು)ನಲ್ಲಿ ನಡೆದ 300 ಕೋಟಿ ರೂಪಾಯಿಗೂ ಅಧಿಕ ಹಣ ದುರುಪಯೋಗಕ್ಕೆ ಸಂಬಂಧಿಸಿ ಸಿಬಿಐ ತನಿಖೆ ಆರಂಭಿಸಿದೆ. ಪ್ರಕರಣ ಸಂಬಂಧ ಅಪರಿಚಿತ ಅಧಿಕಾರಿಗಳ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿದೆ.

ಕೆಎಸ್‌ಒಯುನ ಸಹಯೋಗದ ಸಂಸ್ಥೆಗಳ ಕಾರ್ಯಕ್ರಮದಲ್ಲಿ ಅಪರಿಚಿತ ಅಧಿಕಾರಿಗಳು 300 ಕೋಟಿ ರೂಪಾಯಿಗೂ ಅಧಿಕ ಹಣ ದುರುಪಯೋಗ ಮಾಡಿದ್ದಾರೆಂಬ ಆರೋಪ ಕೇಳಿಬಂದಿತ್ತು.

ಮೈಸೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ವಿಶ್ವವಿದ್ಯಾನಿಲಯವು ದೇಶಾದ್ಯಂತ ಮತ್ತು ವಿದೇಶಗಳಲ್ಲಿ ತನ್ನ ಸಹಯೋಗದ ಸಂಸ್ಥೆಗಳನ್ನು ತೆರೆದಿದೆ. ಸಹಯೋಗ ಸಂಸ್ಥೆಗಳು ಪ್ರವೇಶ ಶುಲ್ಕ, ಪರೀಕ್ಷಾ ಶುಲ್ಕ ಮತ್ತು ವಿಶ್ವವಿದ್ಯಾನಿಲಯಕ್ಕೆ ಜಮಾ ಮಾಡಬೇಕಾದ ಇತರ ಶುಲ್ಕಗಳಿಗೆ ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ಶುಲ್ಕವನ್ನು ಜಮಾ ಮಾಡುತ್ತಿವೆಯೆಂದು ಎಫ್ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಎಸ್‌ಒಯುಗೆ ಸಂಬಂಧಿಸಿದ 2013-14 ಮತ್ತು 2014-15ರ ಆರ್ಥಿಕ ವರ್ಷಗಳ ಲೆಕ್ಕಪರಿಶೋಧನೆಯ ಸಮಯದಲ್ಲಿ ಹಲವು ಸಹಯೋಗ ಸಂಸ್ಥೆಗಳಿಂದ ಜಮೆ ಆಗಿರುವ 50 ಕೋಟಿ ರೂಪಾಯಿ ಲೆಕ್ಕಪತ್ರದಲ್ಲಷ್ಟೇ ಇದ್ದು, ಹಣದ ರೂಪದಲ್ಲಿ ಇರಲಿಲ್ಲ.

“2009-10 ರಿಂದ 2012-2013ರ ಆರ್ಥಿಕ ವರ್ಷಗಳಿಗೆ ಸಂಬಂಧಿಸಿ ಸುಮಾರು 250 ಕೋಟಿ ರೂಪಾಯಿ ವಿದ್ಯಾರ್ಥಿಗಳ ಪ್ರವೇಶ ಮತ್ತು ವಿಶ್ವವಿದ್ಯಾನಿಲಯದಿಂದ ಪಡೆದ ಮೊತ್ತ ಲೆಕ್ಕದಲ್ಲಿ ಇದ್ದರೂ, ಹಣದ ರೂಪದಲ್ಲಿ ಇಲ್ಲದ ಕಾರಣ ಅದರ ಆಧಾರದ ಮೇಲೆ ಲೆಕ್ಕಪರಿಶೋಧಕರು ಈ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದರು” ಎಂದು ಎಫ್ಐಆರ್ ಆರೋಪಿಸಿದೆ.

ಆಂತರಿಕ ಹಣಕಾಸು ಪರಿಶೋಧನೆ ವೇಳೆ ಹಣಕಾಸು ಅಕ್ರಮ ಎಸಗಿರುವುದು ಕಂಡಬಂದಿದ್ದು, ಅದಕ್ಕೆ ಹೊಣೆಗಾರರು ಯಾರೆಂಬುದು ದೃಢಪಟ್ಟಿಲ್ಲ. ಹೀಗಾಗಿ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (ಸಿಬಿಐ)ಕ್ಕೆ ಒಪ್ಪಿಸಲು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ನಿರ್ದೇಶಕರ ಮಂಡಳಿ ತೀರ್ಮಾನಿಸಿತು. ಈ ಕುರಿತು ರಾಜ್ಯ ಸರ್ಕಾರಕ್ಕೂ ಶಿಫಾರಸು ಮಾಡಿ, ಒಪ್ಪಿಗೆ ಪಡೆಯಿತು.

ಈ ಸುದ್ದಿ ಓದಿದ್ದೀರಾ? ರಾಯಚೂರು | 86 ಮಂದಿ ಸಫಾಯಿ ಕರ್ಮಚಾರಿಗಳಿಗೆ ಎಂಎಸ್‌ಐಡಿ ಗುರುತಿನ ಚೀಟಿ ವಿತರಣೆ

ತನ್ನ ಉಲ್ಲೇಖದಲ್ಲಿ, ರಾಜ್ಯ ಸರ್ಕಾರವು 2009-10 ರಿಂದ 2015-16 ರವರೆಗಿನ ಅವಧಿಯಲ್ಲಿ ಕೆಎಸ್‌ಒಯು, ಮೈಸೂರು ಮತ್ತು ಅದರ ಸಹಯೋಗದ ಸಂಸ್ಥೆಗಳಿಂದ ಭಾರತದಾದ್ಯಂತ ಹರಡಿರುವ ಶುಲ್ಕದ ದುರುಪಯೋಗದ ಕುರಿತು ತನಿಖೆ ನಡೆಸುವಂತೆ ಮತ್ತು ಅಪರಾಧಿಗಳನ್ನು ಗುರುತಿಸುವಂತೆ ಕೇಂದ್ರ ಏಜೆನ್ಸಿಯನ್ನು ಕೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...