‘ಸಂವಿಧಾನ’ದ ಜಾಗದಲ್ಲಿ ‘ಮನುಸ್ಮೃತಿ’ ಎಂದು ಹೇಳದ ಹೇಡಿಗಳು ಆರ್‌ಎಸ್‌ಎಸ್‌ನವರು: ಬಿ ಕೆ ಹರಿಪ್ರಸಾದ್

Date:

ಸಂವಿಧಾನ ಬದಲಾಯಿಸುತ್ತೇವೆ ಎಂದು ಹೇಳುವ ಈ ಸಂವಿಧಾನ ವಿರೋಧಿಗಳು ಸಂವಿಧಾನಕ್ಕೆ ಪರ್ಯಾಯವಾಗಿ ಯಾವ ಸಿದ್ದಾಂತ ಅಳವಡಿಸಿಕೊಳ್ಳುತ್ತೇವೆ ಎಂದು ಹೇಳುವ ಧೈರ್ಯವಿಲ್ಲ. ಕನಿಷ್ಟ ಪಕ್ಷ ಸಂವಿಧಾನಕ್ಕೆ ಬದಲಾಗಿ ತಮ್ಮ ಮೂಲ ಸಿದ್ದಾಂತವಾದ ಮನುಸ್ಮೃತಿಯನ್ನು ಜಾರಿಗೆ ತರುತ್ತೇವೆ ಎಂದು ಹೇಳುವ ಧೈರ್ಯವೂ ಇಲ್ಲದ ಹೇಡಿಗಳು ಎಂದು ಧಾನ ಪರಿಷತ್‌ ಸದಸ್ಯ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ ಕೆ ಹರಿಪ್ರಸಾದ್‌ ಸವಾಲು ಮುಂದಿಟ್ಟಿದ್ದಾರೆ ಟೀಕಿಸಿದ್ದಾರೆ.

ಸಂವಿಧಾನದ ಪೀಠಿಕೆಯಲ್ಲಿರುವ ‘ಸಮಾಜವಾದಿ’ ಮತ್ತು ಜಾತ್ಯತೀತ ಪದಗಳನ್ನು ತೆಗೆದು ಹಾಕಲು ಆಗ್ರಹಿಸಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್)ದ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಸವಾಲು ಹಾಕಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ.

“ಸಂಘದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆಯವರ ಈ ಬದಲಾವಣೆ ಹೇಳಿಕೆಗೂ ನನ್ನ ಸವಾಲಿದೆ. ಜಾತ್ಯಾತೀತ ಹಾಗೂ ಸಮಾಜವಾದಿ ಪದಗಳನ್ನು ಬದಲಾಯಿಸಿದರೆ ಅದರ ಜಾಗದಲ್ಲಿ ಯಾವುದನ್ನು ಸೇರಿಸುತ್ತೀರಿ ಎಂದು ಬಹಿರಂಗವಾಗಿ ಹೇಳುವ ಧೈರ್ಯ ಇದೆಯಾ? ಸಮಾಜವಾದಿ ಜಾಗದಲ್ಲಿ ಬಂಡವಾಳವಾದವನ್ನು, ಜಾತ್ಯಾತೀತ ಜಾಗದಲ್ಲಿ ಜಾತಿಶ್ರೆಷ್ಠವಾದವನ್ನು ಸೇರಿಸುತ್ತೇವೆ ಎಂದು ಹೇಳುವ ಧೈರ್ಯ ಇದೆಯಾ” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂವಿಧಾನವನ್ನು ಮುಟ್ಟಿದರೆ ರಕ್ತಕ್ರಾಂತಿಗೂ ಸರಿ, ಸಂವಿಧಾನವನ್ನು ಉಳಿಸುವ ಹೋರಾಟದಿಂದ ಹಿಂದೆ ಸರಿಯುವುದಿಲ್ಲ. ಕಾಂಗ್ರೆಸ್ ಪಕ್ಷ ಅಂತಹ ಯಾವ ಬೆಲೆ ತೆತ್ತಾದರೂ ಸರಿ ಸಂವಿಧಾನದ ಪೀಠಿಕೆಯನ್ನು ಬದಲಾಯಿಸಲು ಬಿಡುವುದಿಲ್ಲ” ಎಂದು ಎಚ್ಚರಿಕೆ ನೀಡಿದ್ದಾರೆ.

“ಸಂವಿಧಾನದ ಪ್ರಸ್ತಾವನೆಯ “ಜೀವಾಳ” ಹಾಗೂ “ಹೃದಯವೇ” ಆಗಿರುವ ಜಾತ್ಯಾತೀತ ಹಾಗೂ ಸಮಾಜವಾದಿ ಪದಗಳನ್ನು ತೆಗೆದು ಹಾಕಬೇಕೆಂದು ಆರ್ ಎಸ್ ಎಸ್ ಮತ್ತೆ ಒತ್ತಾಯಿಸಿದೆ. ಸಂಘಪರಿವಾರದ ಗುರುಗಳಾದ ಗೋಲ್ವಾಲ್ಕರ್, ಹೆಡ್ಗೆವಾರ್, ಸಾವರ್ಕರ್, ಇಂದ ಹಿಡಿದು ಈಗಿನ ಹೊಸಬಾಳೆ,ರಸಬಾಳೆವರೆಗೂ ಸಂವಿಧಾನವನ್ನು ವಿರೋಧಿಸುತ್ತಲೇ ಬಂದಿದ್ದಾರೆ” ಎಂದಿದ್ದಾರೆ.

“ಸಂವಿಧಾನವನ್ನೆ ಬದಲಾಯಿಸುತ್ತೇವೆ”, “ನಮ್ಮನ್ನ ಗೌರವಿಸುವ ಸಂವಿಧಾನ ಬೇಕು”, “ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು”, “ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನಗಳನ್ನ ಬಿಜೆಪಿ ಪಡೆದರೆ ಸಂವಿಧಾನ ಬದಲಾಯಿಸುವುದೇ ನಮ್ಮ ಗುರಿ” ಎಂದು ಸಂವಿಧಾನ ವಿರೋಧಿ ನಿಲುವುಗಳನ್ನು ವ್ಯಕ್ತಪಡಿಸಿದ್ದ ಬಿಜೆಪಿಯ ಮನಸ್ಥಿತಿಗಳ ಹಿಂದೆ ಸಂಘ ಪರಿವಾರ ಇರುವುದು ಸ್ಪಷ್ಟ ಎಂದು ಕಿಡಿಕಾರಿದ್ದಾರೆ.

“ನೆಹರೂ ಅವರು ಸಂವಿಧಾನವನ್ನು ರಚಿಸಲು ಬಾಬಾ ಸಾಹೇಬರಿಗೆ ಅವಕಾಶ ನೀಡಿದ ಕ್ಷಣದಿಂದ ಹಿಡಿದು ಈ ಕ್ಷಣದವರೆಗೂ ಸಂವಿಧಾನವನ್ನು ಸಂಘಪರಿವಾರ ಎಂದೂ ಒಪ್ಪಿಕೊಳ್ಳಲೇ ಇಲ್ಲ. ಅದಕ್ಕೆ ಇತಿಹಾಸವೇ ಸಾಕ್ಷಿ. ಸ್ವಾತಂತ್ರ್ಯ ಚಳುವಳಿಯಲ್ಲಿ ಎಂದೂ ಭಾಗವಹಿಸದೆ, ಸ್ವಾತಂತ್ರ್ಯ ಸಂಗ್ರಾಮದ ವಿರುದ್ಧ ಪಿತೂರಿ ನಡೆಸುತ್ತಿದ್ದ ಸಂಘ ಪರಿವಾರ ದೇಶದ ಜನರೆದುರು ಕ್ಷಮೆ ಕೇಳುವ ನೈತಿಕತೆಯನ್ನು ಕಳೆದುಕೊಂಡಿದೆ. ನಮ್ಮ ಪೂರ್ವಜರ ತ್ಯಾಗ ಬಲಿದಾನದಿಂದ ಈ ದೇಶಕ್ಕೆ ನೀಡಿದ ಸ್ವಾತಂತ್ರ್ಯ ಹಾಗೂ ಸಂವಿಧಾನದ ಬಗ್ಗೆ ಮಾತುಡುವ ಯಾವ ಹಕ್ಕು ಸಂಘಪರಿವಾರಕ್ಕಿಲ್ಲ” ಎಂದು ಹರಿಹಾಯ್ದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...