ನನ್ನ ಮೌನ ದೌರ್ಬಲ್ಯವಲ್ಲ; ಟೂರ್ ಪ್ಲ್ಯಾನ್ ಮುಂದೆ ಕೂಡ ಇರುತ್ತೆ: ಸತೀಶ್ ಜಾರಕಿಹೊಳಿ

Date:

  • ಪಕ್ಷದ ಹಿತದೃಷ್ಟಿಯಿಂದ ಹೊಂದಾಣಿಕೆ ಮಾಡಿಕೊಂಡಿದ್ದೇನೆ
  • ವರ್ಗಾವಣೆ ವಿಚಾರವಾಗಿ ಸಾಕಷ್ಟು ಬಾರಿ ಹಸ್ತಕ್ಷೇಪ ಆಗಿದೆ

ವರ್ಗಾವಣೆ ವಿಚಾರದಲ್ಲಿ ಹಸ್ತಕ್ಷೇಪ ಆಗಿದೆ. ಪಕ್ಷದ ಹಿತದೃಷ್ಟಿಯಿಂದ ಹೊಂದಾಣಿಕೆ ಆಗಿದ್ದೇನೆ. ಹೀಗಂದ ಮಾತ್ರಕ್ಕೆ ನನ್ನ ಮೌನ ದೌರ್ಬಲ್ಯವಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

ಬೆಳಗಾವಿ ರಾಜಕಾರಣದ ಬಗ್ಗೆ ತಲೆಎತ್ತಿರುವ ವಿವಾದದ ಹಿನ್ನಲೆಯಲ್ಲಿ ಮೌನ ಮುರಿದ ಅವರು ಬೆಂಗಳೂರಿನಲ್ಲಿ ಮಾತನಾಡಿ, “ವರ್ಗಾವಣೆ ವಿಚಾರವಾಗಿ ಹಸ್ತಕ್ಷೇಪ ಆಗಿದೆ. ಈ ಹಿಂದೆ ಸಾಕಷ್ಟು ಭಾರಿ ಆಗಿದೆ. ನಾನು ಕೂಡ ಹೊಂದಾಣಿಕೆ ಮಾಡಿಕೊಂಡಿದ್ದೇನೆ.‌ ನಾಲ್ಕು ತಿಂಗಳಲ್ಲಿ ಸಾಕಷ್ಟು ಬಾರಿ ಹಸ್ತಕ್ಷೇಪ ಆಗಿದೆ” ಎಂದರು.

“ನಾನು ಎಲ್ಲವನ್ನು ಅನುಸರಿಸಿಕೊಂಡು ಬರುತ್ತಿರುವೆ. ಪಕ್ಷದ ದೃಷ್ಟಿಯಿಂದ ಹೊಂದಾಣಿಕೆ ಮಾಡಿಕೊಂಡಿದ್ದೇನೆ. ಕಳೆದ 30 ವರ್ಷದ ರಾಜಕೀಯದಲ್ಲಿ ನನ್ನ ಮೌನ ಸಕ್ಸಸ್ ಕೊಟ್ಟಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೆಲವು ವರ್ಗಾವಣೆಗೆ ಶಿಫಾರಸು ಮಾಡಿದ್ದೆ. ಅದನ್ನು ಮಾಡುವುದು ಬಿಡುವುದು ಅವರಿಗೆ ಬಿಟ್ಟಿದ್ದು. ನಿಗಮ, ಮಂಡಳಿ ಕಾರ್ಯಕರ್ತರಿಗೆ ಕೊಡಿ ಅಂತ ಶಿಫಾರಸು ಮಾಡಿರುವೆ. ಕೇವಲ ಶಾಸಕರಿಗೆ ಮಾತ್ರ ಬೇಡ ಅಂತನೂ ಹೇಳಿದ್ದೇನೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಸತೀಶಣ್ಣ ಮತ್ತು ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

“ಲಕ್ಷ್ಮಣ‌ ಸವದಿ ಕೂಡ ಕಾಂಗ್ರೆಸ್ಸಿಗೆ ಬರುವಾಗ ನನ್ನ ಜೊತೆ ಮಾತನಾಡಿದ್ದರು. ಕಿರಿಕಿರಿ ಮಾಡೋದಾದರೆ ನಾನು ಬರಲ್ಲ ಅಂದಿದ್ದರು. ಹಾಗಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕು. ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ನಾನೂ ಹೆಸರನ್ನು ನೀಡಿದ್ದೇನೆ. ಲಕ್ಷ್ಮಣ ಸವದಿ ಎಲ್ಲೂ ಕಾರ್ಯಾಧ್ಯಕ್ಷ ಸ್ಥಾನ ಕೇಳಿಲ್ಲ. ಮಾಡೋದಾದ್ರೆ ನಮ್ಮ ಅಭ್ಯಂತರ ಏನು ಇಲ್ಲ. ಸವದಿ, ನಿಂಬಾಳ್ಕರ್ ಯಾರೆ ಕಾರ್ಯಾಧ್ಯಕ್ಷರಾದ್ರೂ ಅಡ್ಡಿಯಿಲ್ಲ” ಎಂದು ಹೇಳಿದರು.

“ಟೂರ್ ಪ್ಲ್ಯಾನ್ ಮುಂದೆ ಕೂಡ ಇರುತ್ತೆ. ನಾವು ಟೂರು ಮಾಡಲು ಯಾವುದೇ ಅಡ್ಡಿಯಿಲ್ಲ. ಶಾಸಕರು ಕ್ಷೇತ್ರದ ಕೆಲಸ ಮಾತ್ರ ಅಲ್ಲ. ಒಟ್ಟಾಗಿ ಪ್ರವಾಸ ಕೂಡ ಮಾಡಬೇಕು. ಮುಂದೆ ಆ ಬಗ್ಗೆ ಪ್ಲಾನ್ ಮಾಡುತ್ತೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...