ಬೆಂಗಳೂರು | ಸತೀಶ್‌ ಜಾರಕಿಹೊಳಿಗೆ ಕೈತಪ್ಪಲಿದೆ ಟಿಕೆಟ್‌: ಬಿಜೆಪಿ ಶಾಸಕ ಮುನಿರತ್ನ

Date:

ಸಚಿವ ಸತೀಶ್ ಜಾರಕಿಹೊಳಿ ತಮ್ಮ ಭದ್ರಕೋಟೆ ಎಂದುಕೊಂಡಿರುವ ಬೆಳಗಾವಿ ಅವರ ಕೈತಪ್ಪಿಹೋಗುತ್ತಿದೆ. ಈ ಬಾರಿ ಅವರ ಕುಟುಂಬಕ್ಕೆ ಲೋಕಸಭಾ ಟಿಕೆಟ್‌ ಸಿಗುವುದು ಅನುಮಾನ ಎಂದು ಮಾಜಿ ಸಚಿವ ಮುನಿರತ್ನ ಭವಿಷ್ಯ ನುಡಿದಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಬೆಳಗಾವಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ವಾದ ಮತ್ತೆ ಮುನ್ನಲೆಗೆ ಬಂದಿದೆ. ಮೊದಲು ರಮೇಶ್ ಜಾರಕಿಹೊಳಿನಾ, ಹೆಬ್ಬಾಳ್ಕರ್​ನಾ ಅನ್ನುವಂತಿತ್ತು. ಈಗ ನಾನಾ, ನೀನಾ (ಸತೀಶ್-ಲಕ್ಷ್ಮಿ ಹೆಬ್ಬಾಳ್ಕರ್) ಅಂತ ಆಗಿದೆ. ಅವರುಗಳ ಹಕ್ಕು ಚಲಾಯಿಸುವ ಹೋರಾಟ ಎಲ್ಲಿಗೆ ಹೋಗಿ ನಿಲ್ಲಲಿದೆ ನೋಡೋಣ. ನಾವು ಮೌನವಾಗಿದ್ದೇವೆ. 135 ಜನ ಗೆದ್ದಿದ್ದಾರೆ, ರಾಜ್ಯದ ಜನ ಅವರಿಗೆ ಆಶೀರ್ವಾದ ಮಾಡಿದ್ದಾರೆ. ಒಳ್ಳೆಯ ಆಡಳಿತ ಕೊಡಲಿ ಅಂತ ಬಯಸುತ್ತೇವೆ. ಅದನ್ನ ಬಿಟ್ಟು ಬೇರೇನು ಆಲೋಚನೆ ಇಲ್ಲ” ಎಂದರು.

ನಾನು ನೋಡುತ್ತಿರೋ ಹಾಗೆ, ಲಕ್ಷ್ಮೀ ಹೆಬಾಳ್ಕರ್ ಮಗನಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ. ಇದನ್ನು ನಾನು ಹೇಳ್ತಿಲ್ಲ, ಜನರೇ ಹೇಳುತ್ತಿದ್ದಾರೆ. ಅವರೆಲ್ಲಾ 135 ಜನ ಒಂದೇ ಪಕ್ಷದಲ್ಲಿದ್ದಾರೆ, ಒಗ್ಗಟ್ಟಾಗಿದ್ದಾರೆ. ಮೈಸೂರಿಗೆ ಶಾಸಕರು ಒಟ್ಟಿಗೆ ಹೋಗಬೇಕು ಅಂದರೆ ಎಷ್ಟು ಒಗ್ಗಟ್ಟಿದೆ. ರಸ್ತೆಯಲ್ಲಿ ಹೋಗಬೇಕಾದರೆ ಏನೂ ಆಗಲ್ಲ. ಆದರೆ, ದೋಣಿಯಲ್ಲಿ ಹೋಗುತ್ತಿದ್ದಾರೆ. ನೋಡೋಣ ದೋಣಿಯನ್ನು ಯಾರು ತೂತು ಮಾಡುತ್ತಾರೋ ಎಂದು ಕಾಂಗ್ರೆಸ್ ಒಗ್ಗಟ್ಟಿನ ಕುರಿತು ಮುನಿರತ್ನ ವ್ಯಂಗ್ಯಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿದ್ಯುತ್ ಅಭಾವಕ್ಕೆ ಕಾರಣ ಕಾಂಗ್ರೆಸ್ ಎಂದಿರುವ ಮಾಜಿ ಸಿಎಂ ಎಚ್​. ಡಿ. ಕುಮಾರಸ್ವಾಮಿಯವರ ಮಾತು ನಿಜ. ನಮ್ಮ ಸರ್ಕಾರ ಇದ್ದಾಗ ಪವರ್ ಮಿನಿಸ್ಟರ್ ಸುನಿಲ್ ಕುಮಾರ್ ಇದ್ದರು. ಎಲ್ಲಾದರೂ ಒಂದು ದಿನ ವಿದ್ಯುತ್‌ ಖರೀದಿ ಬಗ್ಗೆ ಮಾತನಾಡಿದ್ದೇವಾ? ಈಗ ಏಕಾಏಕಿ ವಿದ್ಯುತ್ ಖರೀದಿ ಬಗ್ಗೆ ಮಾತನಾಡ್ತಿದ್ದಾರೆ. ಏನು ಅವಶ್ಯಕತೆ ಇತ್ತು? ಸೋಲಾರ್ ಪ್ಲಾಂಟ್ ಹಾಕಿದ್ದಾರೆ, ಎಲ್ಲಾ ಮಾಡಿದ್ದಾರೆ. ಆದರೂ, ವಿದ್ಯುತ್ ಖರೀದಿಗೆ ಹೊರಟಿದ್ದಾರೆ ಎಂದು ಎಚ್‌ಡಿಕೆಯವರನ್ನು ಸಮರ್ಥಿಸಿಕೊಂಡರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಒಂದೇ ಒಂದು ಸಣ್ಣ ಅಭಿವೃದ್ಧಿ ಆಗಿಲ್ಲ. ಏನೂ ಇಲ್ಲ, ಗ್ಯಾರಂಟಿ ಹೆಸರಲ್ಲಿ ರಾಜ್ಯವನ್ನು ಕತ್ತಲಿಗೆ ತಳ್ಳುತ್ತಿದ್ದಾರೆ. ಇದು ಎಲ್ಲಿಗೆ ಹೋಗಿ ನಿಲ್ಲುತ್ತದೆ ಗೊತ್ತಿಲ್ಲ. ಇವರು ಎರಡು ಸಾವಿರ ಕೊಟ್ಟು, ವಾಪಸ್ ಕಿತ್ತುಕೊಳ್ತಿದ್ದಾರೆ. ಜನ ಅದನ್ನು ವಿರೋಧಿಸೋದನ್ನು ಕಾಯಬೇಕು. ಕೋಡೋದು ಎರಡು ಸಾವಿರ, ಕಿತ್ತುಕೊಳ್ಳೋದು ನಾಲ್ಕು ಸಾವಿರ. ಎರಡು ಸಾವಿರ ಒಂದು ಕುಟುಂಬ ಪಡೆಯುತ್ತಿದ್ರೆ, ನಾಲ್ಕು ಸಾವಿರ ಮತ್ತೊಂದು ಕುಟುಂಬ ಕಟ್ಟುವಂತಾಗಿದೆ. ಕರೆಂಟ್ ಬಿಲ್ ಎರಡು ಸಾವಿರ ಕಟ್ಟುತ್ತಿದ್ದಾರೆ. ಎಲ್ಲದರ ಬೆಲೆ ಹೆಚ್ಚಳವಾಗಿದೆ. ನಮ್ಮ ಕ್ಷೇತ್ರದ ಅನುದಾನ ಇವರು ಬಳಸಿಕೊಳ್ತಿದ್ದಾರೆ. ಇವರ ಬಳಿ ಹಣ ಇಲ್ಲ. ಹೇಗೆ ಆಡಳಿತ ಮಾಡ್ತಿದ್ದಾರೆ ಗೊತ್ತಾಗ್ತಿದೆ ಎಂದು ಟೀಕಿಸಿದರು.

ತಾಜ್ ವೆಸ್ಟೆಂಡ್‌ನಲ್ಲಿ ಕುಳಿತು ಆಡಳಿತ ಮಾಡ್ತಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಟ್ವೀಟ್ ವಿಚಾರವಾಗಿ ಪ್ರತಿಕ್ರಿಯಿಸಿ, ತಾಜ್ ವೆಸ್ಟೆಂಡ್‌ನಲ್ಲಿ ಕುಳಿತಿದ್ರೋ, ಇಲ್ಲವೋ ಸೆಕೆಂಡರಿ. ನೀವು ಈಗ ವಿಧಾನಸೌಧದಲ್ಲಿ ಕುಳಿತಿದ್ದೀರಿ. ಒಳ್ಳೆಯ ಆಡಳಿತ ಕೊಡಿ. ನೋಡೋಣ ಹೇಗೆ ಕೊಡ್ತೀರಿ ಎಂದು ಸಿಎಂ ಸಿದ್ದರಾಮಯ್ಯಗೆ ಮುನಿರತ್ನ ಸವಾಲು ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...