ಎಸ್ಸಿ ಜನಗಣತಿ | ಶೇ.50ಕ್ಕಿಂತ ಹೆಚ್ಚು ಜನರು ಭಾಗವಹಿಸುವುದು ಅಸಾಧ್ಯ: ಛಲವಾದಿ

Date:

ಪರಿಶಿಷ್ಟ ಜಾತಿಗಳ (ಎಸ್ಸಿ) ಜನಗಣತಿಯಲ್ಲಿ ಶೇ.50ಕ್ಕಿಂತ ಹೆಚ್ಚು ಜನರು ಭಾಗವಹಿಸಲು ಸಾಧ್ಯವೇ ಇಲ್ಲ ಎಂದು ರಾಜ್ಯ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಕ್ಷೇಪಿಸಿದ್ದಾರೆ.

ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳ ಜನಗಣತಿ ನಡೆಯುತ್ತಿದೆ. ಆಗುತ್ತಿರುವ ಅನಾಹುತಗಳ ಬಗ್ಗೆ ಮಾಧ್ಯಮಗಳು ತಿಳಿಸುತ್ತಿವೆ. ನಮ್ಮ ಮನೆಗೂ ಯಾರೂ ಬಂದಿಲ್ಲ. ಆದರೆ, ಸ್ಟಿಕರ್ ಅಂಟಿಸಿ ಹೋಗಿದ್ದಾರೆ” ಎಂದು ಟೀಕಿಸಿದರು.

“ಪರಿಶಿಷ್ಟ ಜಾತಿಯವರ ಮನೆಗೆ ಬಂದು ಸ್ಟಿಕರ್ ಅಂಟಿಸಿ ಹೋಗಿದ್ದರೆ ಅದನ್ನು ನಾವು ಒಪ್ಪಬಹುದಿತ್ತು; ಎಲ್ಲ ಮನೆಗಳಿಗೂ ಸ್ಟಿಕರ್ ಅಂಟಿಸಿಕೊಂಡು ಹೋಗುತ್ತಿದ್ದಾರೆ. ಆನ್‍ಲೈನ್‍ನಲ್ಲೂ ಅವಕಾಶ ಇದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಆದರೆ, ಅಲ್ಲಿ ಪರಿಶಿಷ್ಟ ಜಾತಿ ಸರ್ಟಿಫಿಕೇಟ್ ನಂಬರ್ ಹೇಳಬೇಕು; ಬೇರೆ ಬೇರೆ ಮಾಹಿತಿ ಕೇಳುತ್ತದೆ. ಅದನ್ನು ಒದಗಿಸಲು ಸಾಧ್ಯವೇ ಇಲ್ಲ; ಎಲ್ಲರೂ ವಿದ್ಯಾವಂತರಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೆಲವರಿಗೆ ಸರ್ಟಿಫಿಕೇಟ್ ಇದೆ. ಇನ್ನೂ ಕೆಲವರಿಗೆ ಇಲ್ಲ ಎಂದು ತಿಳಿಸಿದರು. ಇದು ಸರಕಾರದ ಕಣ್ಣೊರೆಸುವ ತಂತ್ರವೇ ಹೊರತು ಇದರಲ್ಲಿ ಸರಿಯಾದ ಅಂಕಿಅಂಶ ಸಿಗಲು ಸಾಧ್ಯವಿಲ್ಲ. ಪರಿಶಿಷ್ಟ ಜಾತಿಗಳಿಗೆ ಅನ್ಯಾಯ ಮಾಡುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡುತ್ತಿದೆ” ಎಂದು ಆರೋಸಿದರು.

ಕಾಂಗ್ರೆಸ್ ಪಕ್ಷದಲ್ಲಿ ಹಗ್ಗಜಗ್ಗಾಟ..

“ಈ ಸರಕಾರ ನಾನು ಮುಖ್ಯಮಂತ್ರಿ, ನೀನು ಮುಖ್ಯಮಂತ್ರಿ ಎನ್ನುವುದರಲ್ಲೇ ಇದೆ. ಜನರ ಕೆಲಸಗಳನ್ನು ಮಾಡುವುದರಲ್ಲಿ ಸಂಪೂರ್ಣ ವಿಫಲವಾಗಿದೆ. ಅನೇಕ ಜನರಿಗೆ ಮೂರ್ನಾಲ್ಕು ತಿಂಗಳಿನಿಂದ ಗ್ಯಾರಂಟಿ ಹಣ ಸಿಗುತ್ತಿಲ್ಲ. ಜೊತೆಗೆ ನಾನೇ 5 ವರ್ಷಕ್ಕೆ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯನವರು ಹೇಳುತ್ತಿದ್ದಾರೆ. ಇದು ಅವರ ಸ್ಥಾನಕ್ಕೆ ಕುತ್ತು ಬಂದುದರ ಸಂಕೇತ” ಎಂದು ವಿಶ್ಲೇಷಿಸಿದರು.

“ಇತ್ತೀಚೆಗೆ ಕಾಂಗ್ರೆಸ್ ಪಕ್ಷದಲ್ಲಿ ಹಗ್ಗಜಗ್ಗಾಟ ಆರಂಭವಾಗಿದೆ. ಅವರ ಪಕ್ಷದ ಪ್ರತಿಯೊಬ್ಬ ಶಾಸಕರೂ ಮುಖ್ಯಮಂತ್ರಿಗಳ ವಿರುದ್ಧ ತಿರುಗಿ ಬಿದ್ದಿದ್ದಾರೆ. ರಾಜು ಕಾಗೆಯವರು ಅವರ ಮಾನಸಿಕ ಸ್ಥಿತಿ ಸರಿಯಿಲ್ಲ; ಅವರು ಮನೆಯಲ್ಲಿ ಇರುವುದೇ ಲೇಸು ಎಂದಿದ್ದಾರೆ. ನಿಮ್ಮ ಶಾಸಕರು ನಿಮ್ಮನ್ನು ಯಾವ ಮಟ್ಟಕ್ಕೆ ಗೌರವಿಸುತ್ತಿದ್ದಾರೆ” ಎಂದು ಮುಖ್ಯಮಂತ್ರಿಗಳು ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ರಾಜ್ಯದ ಸಚಿವರ ಪ್ರಚಾರದ ಗೀಳು

“ಕೆಲವು ಸಚಿವರು ಅವರ ಸಚಿವ ಸ್ಥಾನದ ವಿಚಾರದಲ್ಲಿ ಕೆಲಸ ಮಾಡುವುದನ್ನು ಬಿಟ್ಟು ಬಿಟ್ಟಿದ್ದಾರೆ. ಅವರು ಆರೆಸ್ಸೆಸ್, ಬಿಜೆಪಿಯನ್ನು ನಿಂದಿಸಬೇಕು; ಸುಳ್ಳು ಸುದ್ದಿ ಹಬ್ಬಿಸಬೇಕು. ದಿನವೂ ಟಿ.ವಿ. ಮಾಧ್ಯಮಗಳಲ್ಲಿ ನಮ್ಮ ಮುಖ ಬರುತ್ತಿರಬೇಕೆಂಬ ಗೀಳಿಗೆ ಬಿದ್ದಿದ್ದಾರೆ. ಪ್ರಿಯಾಂಕ್ ಖರ್ಗೆಯವರು ಆರೆಸ್ಸೆಸ್ ನಿಷೇಧದ ಮಾತನಾಡಿದ್ದಾರೆ. ನೀವು ಹುಟ್ಟಿದ ಮೇಲೆ ಆರೆಸ್ಸೆಸ್ ಹುಟ್ಟಿಲ್ಲ ಎಂಬುದನ್ನು ತಿಳಿದುಕೊಳ್ಳಿ. ಬಿಜೆಪಿ ಎಂಬ ಹೆಸರು ಮಾತ್ರ ನೀವು ಹುಟ್ಟಿದ ನಂತರ ಹುಟ್ಟಿರಬಹುದು” ಎಂದು ಹೇಳಿದರು.

“ಆರೆಸ್ಸೆಸ್‍ಗೆ 100 ವರ್ಷ ಆಗುತ್ತಿದೆ. ನೆಹರೂ, ಇಂದಿರಾ ಗಾಂಧಿ, ನಿಮ್ಮ ತಂದೆಯಿಂದ ಏನೂ ಮಾಡಲು ಆಗಿಲ್ಲ. ಬಡವರು ನರೇಗದಡಿ ಕೆಲಸ ಮಾಡಿ ಹಣ ಬಂದಿಲ್ಲವೆಂದು ಆರು ತಿಂಗಳಿಂದ ಕಾಯುತ್ತಿದ್ದಾರಲ್ಲವೇ? ಅದನ್ನು ಕೊಡಿಸುವ ಯೋಗ್ಯತೆ ನಿಮಗಿದೆಯೇ” ಎಂದು ಪ್ರಿಯಾಂಕ್ ಖರ್ಗೆಯವರನ್ನು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...