ಐಪಿಎಸ್ ಅಧಿಕಾರಿ ಡಿ ರೂಪಾ ವಿರುದ್ಧದ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ

Date:

ಹಿರಿಯ ಐಪಿಎಸ್ ಅಧಿಕಾರಿ ಡಿ ರೂಪಾ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

ಸಿಂಧೂರಿ ಅವರು ಸಲ್ಲಿಸಿದ್ದ ಕ್ರಿಮಿನಲ್‌ ಮಾನನಷ್ಟ ದೂರನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಪಂಕಜ್ ಮಿಥಾಲ್ ಅವರ ಪೀಠವು, ರೂಪ ಅವರಿಗೆ ಸಾಮಾಜಿಕ ಪೋಸ್ಟ್‌ಗಳನ್ನು ತೆಗೆಯುವಂತೆ ಹೇಳಿ ಮುಂದಿನ ವಿಚಾರಣೆಯನ್ನು ಜನವರಿ 12, 2024 ಕ್ಕೆ ಮುಂದೂಡಿತು.

ವಿವಾದಿತ ಪೋಸ್ಟ್‌ಗಳನ್ನು ತೆಗೆದುಹಾಕುವ ಬಗ್ಗೆ ಡಿ ರೂಪಾ ಅವರ ಭರವಸೆಯನ್ನು ದಾಖಲಿಸಿದ ನ್ಯಾಯಾಲಯ, ಬಾಕಿ ಉಳಿದಿರುವ ವಿವಾದಗಳ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡದಂತೆ ಇಬ್ಬರೂ ಅಧಿಕಾರಿಗಳಿಗೆ ಖಡಕ್‌ ಸಂದೇಶ ರವಾನಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿಸೆಂಬರ್ 15 ರ ತನ್ನ ಆದೇಶದಲ್ಲಿ ಪೀಠವು, “ಕಕ್ಷಿದಾರರ ನಡುವೆ ಬಾಕಿ ಉಳಿದಿರುವ ಎಲ್ಲ ವಿವಾದಗಳನ್ನು ಪರಿಹರಿಸಲು ನಾವು ಪ್ರಯತ್ನಿಸುತ್ತಿದ್ದೇವೆ ಎಂಬ ಅಂಶವನ್ನು ಪರಿಗಣಿಸಿ ವಾದಿ, ಪ್ರತಿವಾದಿ ಇಬ್ಬರು ಮಾಧ್ಯಮ, ಸಾಮಾಜಿಕ ಮಾಧ್ಯಮ ಮತ್ತು ಮುದ್ರಣ ಮಾಧ್ಯಮಕ್ಕೆ ಸಂದರ್ಶನ ಅಥವಾ ಮಾಹಿತಿಯನ್ನು ನೀಡಬಾರದು ಎಂದು ಸೂಚಿಸಿತು.

ಈ ಸುದ್ದಿ ಓದಿದ್ದೀರಾ? ಅಗತ್ಯ ವಸ್ತುಗಳ ಬೆಲೆ ಏರಿಕೆ: ಸರ್ಕಾರಕ್ಕೆ ಖರ್ಗೆ ತರಾಟೆ

ಯಾವುದೇ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ತೆಗೆದು ಹಾಕಲಾಗಿಲ್ಲ ಎಂದು ಕಂಡುಬಂದರೆ, ಅರ್ಜಿದಾರರ ವಕೀಲರಿಗೆ ಅದರ ಬಗ್ಗೆ ತಿಳಿಸಲಾಗುವುದು ಎಂದು ಸಿಂಧೂರಿ ಅವರ ವಕೀಲರಿಗೆ ಪೀಠ ತಿಳಿಸಿತು.

ಸಿಂಧೂರಿ ಅವರು ಸಲ್ಲಿಸಿರುವ ವಿಚಾರಣೆಯ ಪ್ರತಿಗಳನ್ನು ದಾಖಲೆಯಲ್ಲಿ ಇರಿಸುವಂತೆ ಪೀಠವು ಸೂಚಿಸಿದೆ. ಬಾಕಿ ಇರುವ ಸಿವಿಲ್ ಮೊಕದ್ದಮೆಯಲ್ಲಿ ರೂಪಾ ಅವರು ಸಲ್ಲಿಸಿದ ಅಫಿಡವಿಟ್ ಅನ್ನು ಸಲ್ಲಿಸಲು ಇದು ಅವಕಾಶ ಮಾಡಿಕೊಟ್ಟಿತು.

“ಈ ಮಧ್ಯೆ , ಈ ಅರ್ಜಿಯ ಕ್ರಿಮಿನಲ್ ಪ್ರಕರಣದ ವಿಷಯವಾಗಿ ಮುಂದೆ ಮುಂದುವರಿಯುವುದಿಲ್ಲ” ಎಂದು ಪೀಠ ಆದೇಶಿಸಿದೆ.

ರೂಪಾ ಪರ ಹಿರಿಯ ವಕೀಲ ಆದಿತ್ಯ ಸೋಂಧಿ ವಾದ ಮಂಡಿಸಿದರೆ, ಸಿಂಧೂರಿ ಪರ ಹಿರಿಯ ವಕೀಲ ವಿನಯ್‌ ನವಾರೆ ವಾದ ಮಂಡಿಸಿದರು.

ಇಬ್ಬರು ಅಧಿಕಾರಿಗಳು ತಮ್ಮ ವಿವಾದಗಳನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳದಿರುವುದು ಬೇಸರ ತಂದಿದೆ ಎಂದೂ ಪೀಠ ಈ ಸಂದರ್ಭದಲ್ಲಿ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...