ಪರಿಶಿಷ್ಟ ಜಾತಿ ಒಳ‌ಮೀಸಲಾತಿ ಸಮೀಕ್ಷೆ ಅವಧಿ ವಿಸ್ತರಣೆ: ಜಸ್ಟೀಸ್ ನಾಗಮೋಹನ್ ದಾಸ್

Date:

ಪರಿಶಿಷ್ಟ ಜಾತಿ ಒಳ‌ಮೀಸಲಾತಿ ಸಮೀಕ್ಷೆ ಅವಧಿಯನ್ನು ಮತ್ತೆ ವಿಸ್ತರಿಸಲು ತೀರ್ಮಾನಿಸಲಾಗಿದೆ ಎಂದು ಏಕಸದಸ್ಯ ಆಯೋಗ ಅಧ್ಯಕ್ಷ ನ್ಯಾಯಮೂರ್ತಿ ಹೆಚ್ ಎನ್ ನಾಗಮೋಹನ್ ದಾಸ್ ಅವರು ತಿಳಿಸಿದರು. ಮಳೆ/ ಹವಾಮಾನ ವೈಪರೀತ್ಯದ ಕಾರಣದಿಂದಾಗಿ ಸಮೀಕ್ಷೆ ಪೂರ್ಣಗೊಂಡಿಲ್ಲ ಎಂದು ಹೇಳಿದ್ದಾರೆ.

ಪರಿಶಿಷ್ಟ ಜಾತಿಯಲ್ಲಿನ 101 ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ದತ್ತಾಂಶವನ್ನು(Emperical Data) ಸಂಗ್ರಹಿಸುವ ಕಾರ್ಯವನ್ನು ಮೇ 5ರಿಂದ ರಾಜ್ಯಾದ್ಯಂತ ಈಗಾಗಲೇ ಪ್ರಾರಂಭಿಸಲಾಗಿದೆ. ಆದರೆ ಬಿಬಿಎಂಪಿ ವ್ಯಾಪ್ತಿಯ ವಲಯಗಳಲ್ಲಿ ಮಳೆ/ಹವಾಮಾನ ವೈಪರೀತ್ಯ ಕಾರಣಗಳಿಂದಾಗಿ, ಪರಿಶಿಷ್ಟ ಜಾತಿ ಜನಾಂಗದ ಸಮೀಕ್ಷೆ ಕಾರ್ಯವು ನಿರೀಕ್ಷಿತ ಮಟ್ಟದಲ್ಲಿ ಪೂರ್ಣಗೊಂಡಿರುವುದಿಲ್ಲವೆಂದು ತಿಳಿಸಿ ಸಮೀಕ್ಷಾ ಅವಧಿಯನ್ನು ವಿಸ್ತರಿಸುವಂತೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರುಗಳು ಸಭೆಯಲ್ಲಿ ವಿನಂತಿಸಿದ್ದಾರೆ ಎಂದು ಜಸ್ಟೀಸ್ ನಾಗಮೋಹನ್ ದಾಸ್ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಪರಿಶಿಷ್ಟ ಜಾತಿ ಒಳ‌ಮೀಸಲಾತಿ ಸಮೀಕ್ಷೆ ಅವಧಿ ವಿಸ್ತರಣೆ: ಹೆಚ್.ಎನ್.ನಾಗಮೋಹನ್ ದಾಸ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದ್ದರಿಂದ ಬಿಬಿಎಂಪಿ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿಯೂ ಕೂಡ ಸಮೀಕ್ಷಾ ಅವಧಿಯನ್ನು ವಿಸ್ತರಿಸಬೇಕು ಎಂದು ವಿವಿಧ ಸಂಘ-ಸಂಸ್ಥೆಗಳ ಮುಖಂಡರುಗಳು ಕೋರಿದ್ದಾರೆ. ಈ ಕಾರಣ ಪರಿಶಿಷ್ಟ ಜಾತಿಯ ಜನರೆಲ್ಲರೂ ಸಮೀಕ್ಷಾ ಕಾರ್ಯದಲ್ಲಿ ಭಾಗವಹಿಸಲು ಅನುವಾಗಲು ದಿನಾಂಕವನ್ನು ವಿಸ್ತರಿಸಲು ನಿರ್ಣಯಿಸಲಾಗಿದೆ ಎಂದು ತಿಳಿಸಿದ್ದಾರೆ.

ವಿಶೇಷ ಶಿಬಿರ(ಸಮೀಕ್ಷಾ ಬ್ಲಾಕ್ ವ್ಯಾಪ್ತಿಯಲ್ಲಿ) ಜೂನ್ 2ರಿಂದ 8ರವರೆಗೆ ವಿಸ್ತರಿಸಲಾಗಿದೆ. ಆನ್‌ಲೈನ್‌ ಮೂಲಕ ಸ್ವಯಂ ಘೋಷಣೆ ದಿನಾಂಕವನ್ನು ಜೂನ್ 8ರವರೆಗೆ ವಿಸ್ತರಿಸಲಾಗಿದೆ. ಗಣತಿದಾರರು ರಜಾ ದಿನಗಳಲ್ಲಿಯೂ ಸಹ ಸಮೀಕ್ಷಾ ಬ್ಲಾಕ್‌ನ ವಿಶೇಷ ಶಿಬಿರಗಳಲ್ಲಿ ಕಾರ್ಯನಿರ್ವಹಿಸಿ ಸಮೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ನಿರ್ದೇಶಿಸಲಾಗಿದೆ.

ಈ ಹಿಂದೆ ವಿಶೇಷ ಶಿಬಿರದ ದಿನಾಂಕ ಮರು ನಿಗದಿ ಮಾಡಲಾಗಿತ್ತು. ಮೇ 26ರಿಂದ ಮೇ 28ರ ತನಕ ನಡೆಸಲು ನಿರ್ಧರಿಸಲಾಗಿತ್ತು. ಅನ್‌ಲೈನ್ ಮೂಲಕ ಸ್ವಯಂ ಘೋಷಣೆಗೆ ಮೇ 19ರಿಂದ ಮೇ 28ರ ತನಕ ನಿಗದಿ ಮಾಡಲಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...