ಒಳಮೀಸಲಾತಿ ಅನ್ಯಾಯ ಸರಿಪಡಿಸಲು ರಾಹುಲ್‌ ಗಾಂಧಿಗೆ ಪರಿಶಿಷ್ಟ ಜಾತಿಗಳ ಮಹಾ ಒಕ್ಕೂಟ ಪತ್ರ

Date:

ಒಳಮೀಸಲಾತಿ ಹಂಚಿಕೆ ವಿಚಾರದಲ್ಲಿ ಕರ್ನಾಟಕದ 49 ಅಸ್ಪೃಶ್ಯ ಅಲೆಮಾರಿ ಸಮುದಾಯಗಳು ಮತ್ತು 10 ಸೂಕ್ಷ್ಮ ಪರಿಶಿಷ್ಟ ಜಾತಿಗಳಿಗೆ ಆಗಿರುವ ಘೋರ ಅನ್ಯಾಯವನ್ನು ಸರಿಪಡಿಸುವ ನಿಟ್ಟಿನಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ತುರ್ತು ಮಧ್ಯಪ್ರವೇಶಬೇಕು ಎಂದು ಕೋರಿ 49 ಅಸ್ಪೃಶ್ಯ ಅಲೆಮಾರಿ ಸಮುದಾಯ ಮತ್ತು ಸೂಕ್ಷ್ಮ ಪರಿಶಿಷ್ಟ ಜಾತಿಗಳ ಮಹಾ ಒಕ್ಕೂಟ ಮನವಿ ಮಾಡಿದೆ.

ಮೀಸಲಾತಿ ತಾರತಮ್ಯ ಸರಿಪಡಿಸುತ್ತಾರೆ ಎನ್ನುವ ನಿರೀಕ್ಷೆ ಹೊತ್ತು ರಾಹುಲ್‌ ಗಾಂಧಿ ಅವರಿಗೆ 49 ಅಸ್ಪೃಶ್ಯ ಅಲೆಮಾರಿ ಸಮುದಾಯ ಮತ್ತು ಸೂಕ್ಷ್ಮ ಪರಿಶಿಷ್ಟ ಜಾತಿಗಳ ಮಹಾ ಒಕ್ಕೂಟ ‘ಅಂತಿಮ ಭರವಸೆ ಪತ್ರ’ವನ್ನು ಬರೆದಿದ್ದು, ಇದೇ ವೇಳೆ ಅಕ್ಟೋಬರ್‌ 2 ರಂದು ನಡೆಯುವ ಗಾಂಧಿ ಜಯಂತಿಯಂದು ಅಲೆಮಾರಿಗಳ ಸಮುದಾಯ ‘ದೆಹಲಿ ಚಲೋ’ ನಡೆಸಲಿದೆ” ಎಂದು ಹೇಳಿದೆ.

49 ಅಲೆಮಾರಿ ಸಮುದಾಯಗಳನ್ನು ಮತ್ತು 10 ಸೂಕ್ಷ್ಮ ಪರಿಶಿಷ್ಟ ಜಾತಿ ಸಮುದಾಯಗಳನ್ನು ಒಳಗೊಂಡಂತೆ 59 ಸಮುದಾಯಗಳನ್ನು ಸಿ ಗುಂಪಿನ ಬಲಾಡ್ಯ ಸ್ಪೃಶ್ಯ ಸಮುದಾಯಗಳ ಜೊತೆಗೆ ಸೇರಿಸಿದೆ. ಈ ಬಲಾಡ್ಯ ಜಾತಿಗಳ ಜೊತೆಗೆ ಈ ಚಿಕ್ಕಚಿಕ್ಕ ಸಮುದಾಯಗಳನ್ನು ಸೇರಿಸಿರುವುದು ಭಾರತದ ಸರ್ವೋಚ್ಚ ನ್ಯಾಯಾಲಯವು ಒಳಮೀಸಲಾತಿಗೆ ಸಂಬಂಧಿಸಿದಂತೆ ನೀಡಿದ ತೀರ್ಪಿಗೆ ವಿರುದ್ಧವಾಗಿದೆ ಎಂದು ಸೂಕ್ಷ್ಮ ಪರಿಶಿಷ್ಟ ಜಾತಿಗಳ ಮಹಾ ಒಕ್ಕೂಟ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೀಸಲಾತಿ ಅನ್ಯಾಯದ ಕುರಿತು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಲು ಅಲೆಮಾರಿ ಸಮುದಾಯದ ಮುಖಂಡರು ನಿಯೋಗದಲ್ಲಿ ತೆರಳಿದ್ದೆವು. ಆದರೆ ಮುಖ್ಯಮಂತ್ರಿಯವರು ಒಳಮೀಸಲಾತಿಯ ತಮ್ಮ ಸರಕಾರದ ಆದೇಶವನ್ನು ಪರಿಪರಿಶೀಲನೆ ಮಾಡಲು ಒಪ್ಪಲಿಲ್ಲ. ಆದರೆ ಪರಿಶಿಷ್ಟಜಾತಿಯೊಳಗಿನ ಇತರೆಲ್ಲಾ ಸಮುದಾಯಗಳ ಸಚಿವರುಗಳಿಗಳಿಗೆಲ್ಲಾ ತಮ್ಮ ಸಮುದಾಯದ ಹಿತಾಸಕ್ತಿ ಕಾಪಾಡಿಕೊಳ್ಳಲು ಅಲೆಮಾರಿ ಸಮುದಾಯಗಳ ಹಿತವನ್ನು ಬಲಿಕೊಟ್ಟಿದ್ದಾರೆ. ಇದೊಂದು ರಾಜಕೀಯ ಅಪರಾಧವಾಗಿದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ನಮ್ಮ ಪರವಾಗಿ ಯಾವ ರಾಜಕೀಯ ಲಾಬಿಯೂ ಇಲ್ಲ. ಕರ್ನಾಟಕದ ಮಾನವಂತ ಜನರ ಪ್ರೀತಿ ಮಾತ್ರ ನಮ್ಮೊಡನಿದೆ. ತಮ್ಮನ್ನು ಕಾಣುವುದೂ ನಮ್ಮಂಥ ನಿರ್ಲಕ್ಷಿತ ಸಮುದಾಯಕ್ಕೆ ಸುಲಭವಲ್ಲ ಎಂಬ ಅರಿವೂ ನಮಗಿದೆ. ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ನೀವು, ನಿಮ್ಮ ತಾಯಿಯವರಾದ ಸೋನಿಯಾಗಾಂಧಿಯವರು, ಎಲ್ಲಾ ಕಾಂಗ್ರೆಸ್ ಹೈಕಮಾಂಡಿನ ಮುಖ್ಯರು ಮಹಾತ್ಮ ಗಾಂಧೀಜಿಯವರ ಸಮಾಧಿಗೆ ಪುಷ್ಪಾರ್ಚನೆ ಮಾಡಲು ಬರುವುದನ್ನು ನಾವು ಗಮನಿಸಿದ್ದೇವೆ. ಈ ಬಾರಿಯೂ ನೀವು ಬರುತ್ತೀರಿ. ಈ ಅವಕಾಶವನ್ನು ನಾವು ಕಳೆದುಕೊಳ್ಳಬಾರದು ಎಂದು ತೀರ್ಮಾನಿಸಿದ್ದೇವೆ ಎಂದು ಒಕ್ಕೂಟ ಹೇಳಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೋಮು ರಾಜಕಾರಣ: ಒಡೆದ ಮನೆಯಲ್ಲಿ ಹಿಂದುತ್ವಕ್ಕೆ ಒಡೆಯನಾರು?

ಅಕ್ಟೋಬರ್ 2 ರಂದು ತಮ್ಮನ್ನು ಕಾಣಲು 1000 ಅಲೆಮಾರಿ ಬಂಧುಗಳು ದೆಹಲಿಗೆ ಬರುತ್ತಿದ್ದೇವೆ. ಅಲ್ಲಿಯ ತನಕ ಬರುವ ನಮ್ಮನ್ನು ನೀವೂ ನಿರ್ಲಕ್ಷ್ಯ ಮಾಡುವುದಿಲ್ಲ ಎಂಬ ಆಶಾಭಾವನೆ ಇಟ್ಟುಕೊಂಡಿದ್ದೇವೆ. ನಮ್ಮ ನೋವನ್ನು ಆಲಿಸಿ, ನ್ಯಾಯವನ್ನು ಕೊಡಿಸಿ ಕೊಡಬೇಕೆಂದು ಮತ್ತೊಮ್ಮೆ ಮನವಿ ಮಾಡಿಕೊಳ್ಳುತ್ತಿದ್ದೇವೆ. ಬೀದಿಯಲ್ಲಿ ಮತ್ತು ಬೆಂಗಳೂರಿನಲ್ಲಿ ಸಿಗದ ನ್ಯಾಯವನ್ನು ಅರಸುತ್ತಾ ದೆಹಲಿಗೆ ಬರುತ್ತಿದ್ದೇವೆ. ನಿರಾಶೆಗೊಳಿಸುವುದಿಲ್ಲ ಎಂಬ ಭರವಸೆಯೂ ಇದೆ. ನಿರಾಶೆಗೊಳಿಸಬೇಡಿ ಎಂದು ಕೋರಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...