ದಲಿತ ವಿದ್ಯಾರ್ಥಿಗಳಿಗೆ ಮಂಜೂರಾಗದ ವಿದ್ಯಾರ್ಥಿ ವೇತನ: ಸದನದಲ್ಲಿ ಒಪ್ಪಿಕೊಂಡ ಸಚಿವರು

Date:

2024ನೇ ಸಾಲಿನ ಶೈಕ್ಷಣಿಕ ವರ್ಷ ಕೊನೆಗೊಳ್ಳುತ್ತಿದ್ದರೂ ಪರಿಶಿಷ್ಟ ಜಾತಿಯ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವೇ ಮಂಜೂರಾಗಿಲ್ಲ. ಈ ವಿಚಾರವು ಸರ್ಕಾರದ ಗಮನಕ್ಕೆ ಬಂದಿದೆ. ಶೈಕ್ಷಣಿಕ ವರ್ಷ ಅಂತ್ಯಗೊಳ್ಳುತ್ತಿದ್ದರೂ ಇಲ್ಲಿಯವರೆಗೆ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮಂಜೂರಾಗಿಲ್ಲ ಎಂಬುದು ಸರ್ಕಾರದ ಗಮನಕ್ಕೆ ಬಂದಿದೆ ಎಂದು ಸ್ವತಃ ಸಾಮಾಜಿಕ ಕಲ್ಯಾಣ ಸಚಿವ ಡಾ ಹೆಚ್ ಸಿ ಮಹದೇವಪ್ಪ ಅವರೇ ಸದನದಲ್ಲಿ ಒಪ್ಪಿಕೊಂಡಿದ್ದಾರೆ.

ಈ ಕುರಿತು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕೆಲ ಶಾಸಕರು ಚುಕ್ಕೆ ಗುರುತಿಲ್ಲದ ಪ್ರಶ್ನೆ ಕೇಳಿದ್ದರು . ಇದಕ್ಕೆ 2024ರ ಡಿಸೆಂಬರ್‌ 18ರಂದು ಉತ್ತರ ನೀಡಿರುವ ಸಮಾಜ ಕಲ್ಯಾಣ ಸಚಿವ ಡಾ ಹೆಚ್ ಸಿ ಮಹದೇವಪ್ಪ ಅವರು ಗಮನಕ್ಕೆ ಬಂದಿದೆ ಎಂಬ ಉತ್ತರವನ್ನೂ ನೀಡಿದ್ದಾರೆ.

2024-25ನೇ ಸಾಲಿನಲ್ಲಿ ಮೆಟ್ರಿ ಕ್ ಪೂರ್ವ ವಿದ್ಯಾರ್ಥಿ ವೇತನ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಕಾರ್ಯಕ್ರಮದಡಿಯಲ್ಲಿ ಅರ್ಜಿ ಸಲ್ಲಿಸಿದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮಂಜೂರಾತಿ ಹಾಗೂ ಪಾವತಿಯು ಪ್ರಗತಿಯಲ್ಲಿದೆ. ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ ಮತ್ತು ಕೇಂದ್ರ ಪುರಸ್ಕೃತ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಒಟ್ಟಾರೆ 9,12,801 ಅರ್ಜಿಗಳನ್ನು ಸ್ವೀಕರಿಸಿರುವುದು ಉತ್ತರದಿಂದ ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಅಂಬೇಡ್ಕರ್‌’- ಅಮಿತ್‌ ಶಾ ಆಡಿದ ಮಾತಲ್ಲ, ಹೊಟ್ಟೆಯೊಳಗಿನ ಹೊಲಸು

ಸ್ವೀಕರಿಸಲಾದ ಅರ್ಜಿಗಳಲ್ಲಿ ಇಲ್ಲಿಯವರೆಗೆ 8,07,515 ಅರ್ಜಿಗಳಿಗೆ ಅನುಮೋದನೆ ನೀಡಿದೆ. ಈ ಪೈಕಿ 7,55,125 ವಿದ್ಯಾರ್ಥಿಗಳಿಗೆ ಒಟ್ಟಾರೆ 107.34 ಕೋಟಿ ರೂ. ವಿದ್ಯಾರ್ಥಿ ವೇತನ ಪಾವತಿಯಾಗಿದೆ. ಸ್ವೀಕರಿಸಿರುವ ಅರ್ಜಿಗಳ ಅಂಕಿ ಅಂಶಗಳ ಪ್ರಕಾರ ಇನ್ನೂ 1,05,286 ವಿದ್ಯಾರ್ಥಿಗಳ ಅರ್ಜಿಗಳನ್ನು ಅನುಮೋದಿಸಲು ಬಾಕಿ ಇದೆ. ಈ ಅರ್ಜಿಗಳಿಗೆ ಅನುಮೋದನೆ ಸಿಕ್ಕ ನಂತರವಷ್ಟೇ ವಿದ್ಯಾರ್ಥಿ ವೇತನವು ಮಂಜೂರಾಗಲಿದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ (1ರಿಂದ 8ನೇ ತರಗತಿ) ಒಟ್ಟು 4,63,347 ಅರ್ಜಿಗಳನ್ನು ಸ್ವೀಕರಿಸಿದೆ. ಈ ಪೈಕಿ 4,58,899 ಅರ್ಜಿಗಳಿಗೆ ಅನುಮೋದನೆ ನೀಡಿದೆ.

ಅನುಮೋದಿಸಲು 4,448 ಅರ್ಜಿಗಳು ಬಾಕಿ ಇವೆ. ಅನುಮೋದನೆ ಪಡೆದು ಕೊಂಡಿರುವ ವಿದ್ಯಾರ್ಥಿಗಳಿಗೆ 51.73 ಕೋಟಿ ರು. ಪಾವತಿಸಿದೆ. ಅದೇ ರೀತಿ ಕೇಂದ್ರ ಪುರಸ್ಕೃತ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ 2,18,161 ಅರ್ಜಿಗಳನ್ನು ಸ್ವೀಕರಿಸಿರುವ ಸರ್ಕಾರವು 2,14,732 ಅರ್ಜಿಗಳಿಗೆ ಅನುಮೋದನೆ ನೀಡಿದೆ. 29.82 ಕೋಟಿ ರು. ಪಾವತಿಸಿದೆ. 3,429 ಅರ್ಜಿಗಳಿಗೆ ಇನ್ನಷ್ಟೇ ಅನುಮೋದನೆ ಸಿಗಬೇಕಿದೆ. ಹಾಗೆಯೇ ಕೇಂದ್ರ ಸರ್ಕಾರದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ 2,31,293 ವಿದ್ಯಾರ್ಥಿಗಳು ಅರ್ಜಿಗಳನ್ನು ಸಲ್ಲಿಸಿದ್ದಾರೆ. ಈ ಪೈಕಿ 1,33,884 ಸಂಖ್ಯೆಯ ಅರ್ಜಿಗಳನ್ನಷ್ಟೇ ಅನುಮೋದಿಸಿರುವ ಸರ್ಕಾರವು 25.79 ಕೋಟಿ ರು. ಪಾವತಿಸಿದೆ. 97,409 ಅರ್ಜಿಗಳಿಗೆ ಅನುಮೋದನೆ ನೀಡಲು ಬಾಕಿ ಇರಿಸಿಕೊಂಡಿರುವುದು ತಿಳಿದುಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...