ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಗಾಗಿ ಶಾಲಾ ಸಮಯ ಬದಲಾವಣೆ; ಎಐಡಿಎಸ್ಒ ಆಕ್ಷೇಪ

Date:

ರಾಜ್ಯ ಸರ್ಕಾರವು ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಗಾಗಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಸಮಯವನ್ನು ದಿಢೀರ್‌ ಬದಲಾವಣೆ ಮಾಡಿರುವ ಸರ್ಕಾರದ ಕ್ರಮಕ್ಕೆ ಎಐಡಿಎಸ್‌ಒ ಆಕ್ಷೇಪ ವ್ಯಕ್ತಪಡಿಸಿದೆ.

“ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಸಮಯವನ್ನು ಬೆಳಗ್ಗೆ 8 ಗಂಟೆಯಿಂದ 1 ಗಂಟೆಯವರೆಗೆ ಮಾತ್ರ ಎಂದು ಬದಲಾಯಿಸಲಾಗಿದೆ. ಈ ಕ್ರಮವು ಅತ್ಯಂತ ಅಪ್ರಜಾತಾಂತ್ರಿಕವಾಗಿದ್ದು, ಇದರಿಂದ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಅಡ್ಡಿ ಎದುರಾಗುವುದರಲ್ಲಿ ಸಂಶಯವಿಲ್ಲ. ಇದರಿಂದಾಗಿ ಖಾಸಗಿ ಶಾಲಾ ಮತ್ತು ಸರ್ಕಾರಿ ಶಾಲಾ ಮಕ್ಕಳ ನಡುವೆ ಭೀಕರ ತಾರತಮ್ಯ ಉಂಟಾಗುವ ಆತಂಕ ಇದೆ”

“ಈಗಾಗಲೇ ಶಾಲಾ ಶಿಕ್ಷಕರು ಬೋಧನೆ ಮಾಡುವ ಜೊತೆಗೆ ಬೋಧಕೇತರ ಚಟುವಟಿಕೆಗಳ ಜವಾಬ್ದಾರಿಗಳನ್ನು ನಿರ್ವಹಿಸುವ ದುಸ್ಥಿತಿ ಇದ್ದು, ಈ ಸಮೀಕ್ಷೆಯ ಜವಾಬ್ದಾರಿಯು ಮತ್ತಷ್ಟು ಹೊರೆಯಾಗಲಿದೆ ಎಂದು ಶಿಕ್ಷಕರಿಂದಲೂ ಆರೋಪ ಕೇಳಿಬರುತ್ತಿದೆ. ಅಲ್ಲದೇ ಈ ಕ್ರಮವು ಸರ್ಕಾರಿ ಶಾಲಾ ಮಕ್ಕಳ ಶೈಕ್ಷಣಿಕ ಸ್ಥಿರತೆ ಮತ್ತು ದೈನಂದಿನ ದಿನಚರಿಯನ್ನು ಹಾಳು ಮಾಡುತ್ತದೆ. ಬೋಧನೆ ಮತ್ತು ಕಲಿಕೆಯ ಕಾರ್ಯಕ್ಕೆ ತೊಂದರೆಯಾಗದಂತೆ ಪೂರಕ ಯೋಜನೆಯಿಲ್ಲದೆ, ಈ ಬಗ್ಗೆ ಚರ್ಚೆಯುನ್ನೂ ಮಾಡದೇ ಶಾಲಾ ಸಮಯವನ್ನು ಏಕಾಏಕಿ ಬದಲಾಯಿಸಿರುವುದು ಶೋಚನೀಯ ಸಂಗತಿ. ಜೊತೆಗೆ ಸರ್ಕಾರಿ ಶಾಲಾ ಮಕ್ಕಳ ಫಲಿತಾಂಶ ಕುಸಿಯುವ ಭೀತಿ ಉಂಟಾಗಿದೆ. ಈ ಬಾರಿ, ದಸರಾ ರಜೆ ಸೌಲಭ್ಯವನ್ನು ಪಡೆಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಇದೀಗ ಒಂದೇ ದಿನ, ಬೋಧನೆ ಮತ್ತು ಸಮೀಕ್ಷೆ ಎರಡನ್ನೂ ನಡೆಸುವ ಹೊರೆ ಹೇರಿರುವುದು ಸಮಂಜಸವಲ್ಲ”

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಸಾಮಾಜಿಕ – ಶೈಕ್ಷಣಿಕ ಸಮೀಕ್ಷೆ | 1.09 ಕೋಟಿ ಮನೆಗಳ ಸಮೀಕ್ಷೆ ಪೂರ್ಣ: ಕೊಪ್ಪಳ ಪ್ರಥಮ

“ಸಮೀಕ್ಷೆಯ ಕೆಲಸಕ್ಕೆ ಸರ್ಕಾರಿ ಶಾಲಾ ಸಮಯವನ್ನು ಬಲಿಕೊಡದೆ, ಮಕ್ಕಳ ಶೈಕ್ಷಣಿಕ ಭವಿಷ್ಯ ಹಿತದೃಷ್ಟಿಯಿಂದ ತನ್ನ ಆದೇಶವನ್ನು ಹಿಂಪಡೆದು, ಸಮೀಕ್ಷೆಯ ಕೆಲಸಕ್ಕೆ ಪರ್ಯಾಯ ವ್ಯವಸ್ಥೆಗೆ ಸರ್ಕಾರವು ಕ್ರಮ ಕೈಗೊಳ್ಳಬೇಕು” ಎಂದು ಎಐಡಿಎಸ್‌ಒ ಕರ್ನಾಟಕದ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...