ಠೇವಣಿ ಹಣ ಸಹಕಾರಿ ಬ್ಯಾಂಕುಗಳಲ್ಲಿಯೇ ತೊಡಗಿಸುವ ಬಗ್ಗೆ ಪರಿಶೀಲನೆ: ಸಿದ್ದರಾಮಯ್ಯ

Date:

  • ರೈತರಿಗೆ ವ್ಯವಸಾಯ ಮಾಡಲು ಸಕಾಲದಲ್ಲಿ ಸಾಲ ಸಿಗಬೇಕು
  • ಜೀರೋ ಪರ್ಸೆಂಟ್ ಸಾಲ 5 ಲಕ್ಷದವರೆಗೂ ಏರಿಕೆ: ಸಿಎಂ

ಸರ್ಕಾರ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಇಡುವ ಠೇವಣಿ ಹಣವನ್ನು ಸಹಕಾರಿ ಬ್ಯಾಂಕುಗಳಲ್ಲಿಯೇ ತೊಡಗಿಸುವ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಜಯಪುರದಲ್ಲಿ ಸೋಮವಾರ ಅಖಿಲ ಬಾರತ ಸಹಕಾರಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿ, “ಸಹಕಾರಿ ಬ್ಯಾಂಕುಗಳು ಸುಸ್ಥಿರವಾಗಿರಬೇಕು. ಸುಸ್ಥಿರವಾಗಿದ್ದರೇ ಮಾತ್ರ ಅವು ರೈತರಿಗೆ ಸಾಲ ನೀಡಲು ಸಾಧ್ಯ. ರೈತರಿಗೆ ವ್ಯವಸಾಯ ಮಾಡಲು ಸಕಾಲದಲ್ಲಿ ಸಾಲ ಸಿಕ್ಕರೆ ವ್ಯವಸಾಯ ಮಾಡಲು ಅನುಕೂಲವಾಗಿ ಉತ್ಪಾದನೆಯೂ ಹೆಚ್ಚಾಗಲಿದೆ” ಎಂದರು.

“ಸರ್ಕಾರ ಒಂದು ವರ್ಷಕ್ಕೆ 1,200 ಕೋಟಿ ರೂ.ಗಳನ್ನು ಹಾಲು ನೀಡುವ ಕ್ಷೀರ ಭಾಗ್ಯ ಕಾರ್ಯಕ್ರಮಕ್ಕೆ ಖರ್ಚು ಮಾಡುತ್ತಿದೆ. ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಸಹಕಾರ ಸಂಘಗಳಲ್ಲಿ ರೈತರು ಪಡೆದ ಸಾಲವನ್ನು ಮನ್ನಾ ಮಾಡಲು 50 ಸಾವಿರದವರೆಗೆ ಸಂಪೂರ್ಣ ಮನ್ನಾ ಮಾಡಲಾಯಿತು. ಹೀಗೆ ಮನ್ನಾ ಮಾಡದ್ದರಿಂದ ಸಹಕಾರಿ ಸಂಘಗಳು ಹಾಗೂ ಸಹಕಾರ ಬ್ಯಾಂಕುಗಳಿಗೆ ಶಕ್ತಿ ಬರಲು ಸಾಧ್ಯವಾಯಿತು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಸರ್ಕಾರ ಬಜೆಟ್ ಮಂಡಿಸಿದಾಗ ಜೀರೋ ಪರ್ಸೆಂಟ್ ಸಾಲವನ್ನು 3 ರಿಂದ 5 ಲಕ್ಷದವರೆಗೆ ಏರಿಸುವ ಕೆಲಸ ಮಾಡಿದ್ದೇವೆ. ರೈತರಿಗೆ ಸಾಲ ನೀಡಬೇಕೆಂದು ನಬಾರ್ಡ್ ಹಾಗೂ ಪ್ರಧಾನಮಂತ್ರಿಗಳಿಗೆ ಕೂಡಲೇ ಪತ್ರ ಬರೆಯುವ ಕೆಲಸ ಮಾಡುವೆ” ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರದ ಆರು ತಿಂಗಳ ‘ಅನನ್ಯ ಸಾಧನೆ’ ಮತ್ತು ವಿರೋಧ ಪಕ್ಷಗಳ ‘ಜವಾಬ್ದಾರಿ’

ಬರಗಾಲ ಸಮರ್ಥವಾಗಿ ನಿಭಾಯಿಸುತ್ತೇವೆ

“12 ರಾಜ್ಯಗಳಲ್ಲಿ ಬರಗಾಲವಿದ್ದು, ಕರ್ನಾಟಕದಲ್ಲಿಯೂ ಕೂಡ 236 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳಲ್ಲಿ ಬರ ಘೋಷಣೆ ಮಾಡಲಾಗಿದೆ. ಬರ ಪರಿಹಾರವನ್ನು ಕೇಂದ್ರ ಸರ್ಕಾರದಿಂದ ಬಿಡುಗಡೆ ಮಾಡಿಸುವ ಕೆಲಸವನ್ನು ನಮ್ಮ ಸಂಸದರು ಮಾಡಬೇಕು. ಕುಡಿಯುವ ನೀರಿಗೆ ಸಮಸ್ಯೆಯಾಗಬಾರದೆಂದು ಡಿಸಿ, ಸಿಇಒಗಳಿಗೆ ಸೂಚನೆ ನೀಡಲಾಗಿದ್ದು, ಜಿಲ್ಲಾಧಿಕಾರಿಗಳ ಬಳಿ 800 ಕೋಟಿ ರೂ.ಗಳು ಲಭ್ಯವಿದೆ. ಮೇವಿಗೆ, ಉದ್ಯೋಗ ನೀಡಲು, ಕುಡಿಯುವ ನೀರಿಗೆ ರಾಜ್ಯ ಸರ್ಕಾರ ಈಗಾಗಲೇ 800 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಬರಗಾಲವನ್ನು ನಮ್ಮ ಸರ್ಕಾರ ಸಮರ್ಥವಾಗಿ ನಿಭಾಯಿಸುತ್ತದೆ” ಎಂದರು.

ಸಹಕಾರಿ ರಂಗ ಜಾತಿ ಧರ್ಮರಹಿತ ಕ್ಷೇತ್ರ

“ಸ್ವಾತಂತ್ರ್ಯಪೂರ್ವದಿಂದಲೂ ಸಹಕಾರಿ ಕ್ಷೇತ್ರ ಬೆಳೆಯುತ್ತಾ ಬಂದಿದೆ. ಸಿದ್ದನಗೌಡ ಸಣ್ಣರಾಮನಗೌಡ ಪಾಟೀಲರು ಸಹಕಾರ ಸಂಘ ಪ್ರಾರಂಭಿಸಿದರು. ಇಂದು ರಾಜ್ಯದಲ್ಲಿ 45,600 ಸಹಕಾರ ಸಂಘಗಳಿದ್ದು, ಭಾರತದಲ್ಲಿ ಸುಮಾರು 8.50 ಲಕ್ಷ ಸಹಕಾರ ಸಂಘಗಳಿದ್ದು, 31 ಕೋಟಿ ಸದಸ್ಯರಿದ್ದಾರೆ. ಸಹಕಾರಿ ಕ್ಷೇತ್ರದ ದೇಶದಾದ್ಯಂತ ವ್ಯಾಪಕವಾಗಿ ಬೆಳೆದಿರುವುದಕ್ಕೆ ಇದೇ ಸಾಕ್ಷಿ. ಈ ಬೆಳವಣಿಗೆ ದೇಶದ ಆರ್ಥಿಕ ಹಾಗೂ ಸಾಮಾಜಿಕ ಬೆಳವಣಿಗೆಯನ್ನೂ ಬಿಂಬಿಸುತ್ತದೆ” ಎಂದರು ಹೇಳಿದರು.

ದಲಿತರು, ಮಹಿಳೆಯರು ಸಹಕಾರಿ ಸದಸ್ಯರಾಗಲು ಪ್ರೋತ್ಸಾಹ

“ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳೆಯರನ್ನು ಸಹಕಾರ ಸಂಘದ ಸದಸ್ಯರಾಗಲು ಸರ್ಕಾರವೇ ಜನರ ಪರವಾಗಿ ಶೇರು ಮೊತ್ತವನ್ನು ಭರಿಸಲಾಗಿತ್ತು. ಈ ಕಾರ್ಯಕ್ರಮ ಇಂದಿಗೂ ಮುಂದುವರೆಯುತ್ತಿದೆ. ಎಲ್ಲ ದಲಿತರು ಹಾಗೂ ಮಹಿಳೆಯರು ಸಹಕಾರ ಸಂಘದ ಸದಸ್ಯರಾಗಬೇಕು. ಸರ್ಕಾರದ ಸಹಾಯದಿಂದಾಗಿ ದಲಿತರು ಹಾಗೂ ಮಹಿಳೆಯರು ಹಾಲು ಸಹಕಾರ ಸಂಘದಲ್ಲಿ ಸದಸ್ಯರಾಗುತ್ತಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...