ಹಿರಿಯ ಪತ್ರಕರ್ತ ಸಂಜೆವಾಣಿ ಶಿವಣ್ಣ ನಿಧನ

Date:

ಹಿರಿಯ ಪತ್ರಕರ್ತ ಸಂಜೆವಾಣಿ ಶಿವಣ್ಣ ಎಂದೇ ಖ್ಯಾತರಾಗಿದ್ದ ಅ.ಚ. ಶಿವಣ್ಣ ಅವರು ಶುಕ್ರವಾರ ಮಧ್ಯಾಹ್ನ ನಿಧನರಾಗಿದ್ದಾರೆ.

ಮೃತರಿಗೆ 84 ವರ್ಷ ವಯಸ್ಸಾಗಿತ್ತು. ಪತ್ನಿ ಇಂದಿರಾ ಶಿವಣ್ಣ ಪುತ್ರ ವಿಕ್ಟೋರಿಯಾ ಆಸ್ಪತ್ರೆಯ ತಜ್ಞ ವೈದ್ಯ ಡಾ.ದೀಪಕ್ ಶಿವಣ್ಣ ಅವರನ್ನು ಶಿವಣ್ಣ ಅಗಲಿದ್ದಾರೆ.

ಪತ್ರಿಕೋದ್ಯಮ ಅಲ್ಲದೇ ರಾಜಕೀಯ ಕ್ಷೇತ್ರದಲ್ಲಿಯೂ ಹೆಚ್ಚು ಚಿರಪರಿಚಿತರಾಗಿದ್ದರು. ಶಿವಣ್ಣ ಅವರು 1941ರ ಡಿಸೆಂಬರ್ 10ರಂದು ದೊಡ್ಡಬಳ್ಳಾಪುರ ಸಮೀಪದ ಅರಳು ಮಲ್ಲಿಗೆಯಲ್ಲಿ ಜನಿಸಿದರು. ಶಿವಣ್ಣ ಅವರು ‘ಲೋಕವಾಣಿ’ ಮೂಲಕ ಲೇಖನಿ ಹಿಡಿದು ಪತ್ರಕರ್ತರಾಗಿ ಗುರುತಿಸಿಕೊಂಡರು. ಲೋಕವಾಣಿಯಲ್ಲಿ ವರದಿಗಾರರಾಗಿ, ಚಲನಚಿತ್ರ ವಿಮರ್ಶಕರಾಗಿ ಸೇವೆ ಸಲ್ಲಿಸಿ ಕಾಲಾನುಕ್ರಮದಲ್ಲಿ ಪ್ರಧಾನ ವರದಿಗಾರರಾಗಿ ಕಾರ್ಯ ನಿರ್ವಹಿಸಿ, ಅಲ್ಲಿಂದ ಜನಪ್ರಿಯ ಸಂಜೆ ದಿನಪತ್ರಿಕೆ ‘ಸಂಜೆವಾಣಿ’ಯಲ್ಲಿ 26 ವರ್ಷಗಳ ಕಾಲ ಮುಖ್ಯವರದಿಗಾರರಾಗಿ ಅವರು ಸಲ್ಲಿಸಿದ ಸೇವೆ ಮಹತ್ವವಾದದ್ದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿವಣ್ಣ ಅವರು ಕೇವಲ ಪತ್ರಿಕೋದ್ಯಮ ಅಲ್ಲದೆ ಅದಕ್ಕೆ ಸಂಬಂಧಿಸಿದ ಸಂಸ್ಥೆಗಳ ಚಟುವಟಿಕೆಗಳಲ್ಲಿಯೂ ಸಕ್ರಿಯರಾಗಿ ಪಾಲ್ಗೊಂಡು ಅವುಗಳ ಬೆಳವಣಿಗೆಗೂ ಕಾರಣೀಭೂತರಾಗಿದ್ದರು. ವಿಶೇಷವಾಗಿ ಬೆಂಗಳೂರು ಪ್ರೆಸ್‌ಕ್ಲಬ್‌, ಬೆಂಗಳೂರು ವರದಿಗಾರರ ಕೂಟಗಳಿಗೆ ಹೊಸ ರೂಪ ನೀಡುವಲ್ಲಿಯೂ ಅವರ ಪಾತ್ರ ಸ್ಮರಣೀಯ.

ಶಿವಣ್ಣ ಅವರಿಗೆ ರಾಜ್ಯ ಸರ್ಕಾರ 1992ರಲ್ಲಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತು. ಬೆಂಗಳೂರು ಮಹಾನಗರ ಪಾಲಿಕೆಯ ಕೆಂಪೇಗೌಡ ಪ್ರಶಸ್ತಿ (1999), ಕನ್ನಡ ಸಾಹಿತ್ಯ ಪರಿಷತ್ತಿನ ಕಿಡಿ ಶೇಷಪ್ಪ ಪ್ರಶಸ್ತಿ (1999), 2004ರಲ್ಲಿ ಡಾ. ವಿಶ್ವೇಶ್ವರಯ್ಯ ಪ್ರಶಸ್ತಿ, 2009ರಲ್ಲಿ ಕನ್ನಡ ಸಾಹಿತ್ಯ ಪ್ರಶಸ್ತಿ, ಬೆಂಗಳೂರು ಪ್ರೆಸ್‌ಕ್ಲಬ್ ಪ್ರಶಸ್ತಿ ಹಾಗೂ ಬೆಂಗಳೂರು ಕೆ.ಯು.ಡಬ್ಲ್ಯೂ.ಜೆ ಪ್ರಶಸ್ತಿ, ಎಸ್.ವಿ. ಜಯಶೀಲರಾವ್ ಪ್ರಶಸ್ತಿ, ಅ.ನ.ಕೃ. ಪ್ರಶಸ್ತಿ ಮುಂತಾದ ಅನೇಕ ಗೌರವಗಳು ಅವರಿಗೆ ಸಂದಿವೆ.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...