ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ಇನ್ನಿಲ್ಲ

Date:

ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕದ ಸಂಪಾದಕರಾದ ವಸಂತ ನಾಡಿಗೇರ್ (59) ಅವರು ಸೋಮವಾರ ಬೆಳಗಿನ ಜಾವ 3.13ರ ಸುಮಾರಿಗೆ ಹೃದಯಾಘಾತದಿಂದ ನಿಧನರಾದರು.

ಮೂಲತಃ ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನವರಾದ ನಾಡಿಗೇರ್ ಅವರು ಕಳೆದ ಮೂರುವರೆ ದಶಕದಿಂದ ಕನ್ನಡ ಪತ್ರಿಕೋದ್ಯಮದಲ್ಲಿ ಗುರುತಿಸಿಕೊಂಡಿದ್ದಾರೆ.

ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ, ವಿಶ್ವವಾಣಿ, ಕನ್ನಡ ಪ್ರಭ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು. ಕಳೆದ ಎರಡು ವರ್ಷಗಳಿಂದ ಸಂಯುಕ್ತ ಕರ್ನಾಟಕ ಸಂಪಾದಕರಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಉಡುಪಿ | ಸನ್ಮಾರ್ಗ, ಅನುಪಮ ಪತ್ರಿಕೆಯ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ವೈ ಸಿ ಅಬ್ದುಲ್ಲಾ ನಿಧನ

ಶೀರ್ಷಿಕೆಗಳ ಮೂಲಕವೇ ಹೆಸರು ಪಡೆದಿದ್ದ ವಸಂತ ನಾಡಿಗೇರ್ ಅವರನ್ನು ಹೆಡ್​ಲೈನ್ ಮಾಸ್ತರ್ ಎಂದೂ ಕರೆಯಲಾಗುತ್ತಿತ್ತು.

ವಸಂತ ನಾಡಿಗೇರ್ ಪ್ರಾಥಮಿಕ ಮತ್ತು ಪೌಢ ಶಿಕ್ಷಣವನ್ನು ರಾಣೆಬೆನ್ನೂರಿನಲ್ಲಿ ಪೂರ್ಣಗೊಳಿಸಿದ್ದು ಬಳಿಕ ಧಾರವಾಡದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ.

ರಾಸಯಾನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದ ವಸಂತ ನಾಡಿಗೇರ್ ಪತ್ರಿಕೋದ್ಯಮ ಕ್ಷೇತ್ರಕ್ಕೆ ಮೊದಲು ಎಂಬತ್ತರ ದಶಕದಲ್ಲಿ ಮುಖ ಮಾಡಿದ್ದಾರೆ. ಸಂಯುಕ್ತ ಕರ್ನಾಟಕದಲ್ಲಿ ತನ್ನ ವೃತ್ತಿ ಜೀವನ ಆರಂಭಿಸಿದರು. ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಖಾದ್ರಿ ಶಾಮಣ್ಣ ಪ್ರಶಸ್ತಿ ಲಭಿಸಿದೆ.

ವಸಂತ ನಾಡಿಗೇರ್ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿಎಂ, “ಹಿರಿಯ ಪತ್ರಕರ್ತರಾದ ವಸಂತ ನಾಡಿಗೇರ್ ಅವರ ನಿಧನವಾರ್ತೆ ನೋವುಂಟುಮಾಡಿದೆ. ವಿಜಯ ಕರ್ನಾಟಕದಲ್ಲಿ ಹಿರಿಯ ಸಹಾಯಕ ಸಂಪಾದಕರಾಗಿ, ಸಂಯುಕ್ತ ಕರ್ನಾಟಕದಲ್ಲಿ ಸಂಪಾದಕರಾಗಿ, ಹೀಗೆ ಹಲವು ದಶಕಗಳಿಂದ ಪತ್ರಿಕಾರಂಗದಲ್ಲಿ ಸೇವೆಸಲ್ಲಿಸುತ್ತಿದ್ದ ವಸಂತ ನಾಡಿಗೇರ ಅವರ ಅಗಲಿಕೆಯಿಂದ ಪತ್ರಿಕಾರಂಗಕ್ಕೆ ಬಹುದೊಡ್ಡ ನಷ್ಟವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಅವರ ದುಃಖತಪ್ತ ಕುಟುಂಬ ವರ್ಗಕ್ಕೆ ನನ್ನ ಸಂತಾಪಗಳು” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...