ರಾಜ್ಯ ಬಜೆಟ್ | NABARD ಸಹಯೋಗದೊಂದಿಗೆ ಮೈಸೂರಿನಲ್ಲಿ ರೇಷ್ಮೆಗೂಡು ಮಾರುಕಟ್ಟೆ ಸ್ಥಾಪನೆ

Date:

  • ಅಂತಾರಾಷ್ಟ್ರೀಯ ದರ್ಜೆಯ ದ್ವಿತಳಿ ಕಚ್ಚಾ ರೇಷ್ಮೆಯ ದೇಶೀಯ ಬೇಡಿಕೆಯನ್ನು ಪೂರೈಸಲು ಮಧ್ಯಮ ವರ್ಗದ ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ 120 ಕೊನೆಗಳ ಸ್ವಯಂಚಾಲಿತ ರೀಲಿಂಗ್‌ ಘಟಕಗಳನ್ನು ಸ್ಥಾಪಿಸಲು ಪ್ರೋತ್ಸಾಹಿಸಲಾಗುವುದು.
  • ರಾಮನಗರ ಮತ್ತು ಶಿಡ್ಲಘಟ್ಟ ಹೈ-ಟೆಕ್‌ ರೇಷ್ಮೆ ಗೂಡಿನ ಮಾರುಕಟ್ಟೆಯ ಮೊದಲನೇ ಹಂತದ ಕಾಮಗಾರಿಗಳು ಮುಕ್ತಾಯಗೊಳ್ಳಲಿದ್ದು, ಪ್ರಸಕ್ತ ಸಾಲಿನಲ್ಲಿ ಎರಡನೇ ಹಂತದ ಕಾಮಗಾರಿಗಳನ್ನು 250 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು.
  • ಮೈಸೂರು ಮತ್ತು ಸುತ್ತಮುತ್ತಲಿನ ಭಾಗದ ರೇಷ್ಮೆ ಬೆಳೆಗಾರರಿಗೆ ಅನುಕೂಲವಾಗುವಂತೆ ಮೈಸೂರಿನಲ್ಲಿ ರೇಷ್ಮೆಗೂಡಿನ ಮಾರುಕಟ್ಟೆಯನ್ನು NABARD ಸಹಯೋಗದಲ್ಲಿ ಸ್ಥಾಪಿಸಲಾಗುವುದು.
  • ರೈತರು ಉತ್ಪಾದಿಸುವ ರೇಷ್ಮೆಗೂಡುಗಳಿಗೆ ಸೂಕ್ತ ಬೆಲೆ ದೊರಕಿಸಲು ಹಾಗೂ ಅಂತಾರಾಷ್ಟ್ರೀಯ ಮಟ್ಟದ ಗುಣಮಟ್ಟವನ್ನು ಸಾಧಿಸುವ ದೃಷ್ಟಿಯಿಂದ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಗಳಲ್ಲಿ ಗುಣಮಟ್ಟ ಪರೀಕ್ಷೆ ಮತ್ತು ಶ್ರೇಣೀಕರಣದ ಕಾರ್ಯಕ್ಕಾಗಿ Assayer ಗಳನ್ನು ನಿಯೋಜಿಸಲಾಗುವುದು.
  • ರಾಜ್ಯದಲ್ಲಿ ರೇಷ್ಮೆ ಬೆಳೆ ವಿಸ್ತರಿಸಲು ರೇಷ್ಮೆ ಗೂಡಿನ ಪೂರ್ವ ಮತ್ತು ನಂತರದ ಚಟುವಟಿಕೆಗಳಿಗೆ ಪ್ರೋತ್ಸಾಹಿಸಲು ರೇಷ್ಮೆ ಅಭಿವೃದ್ಧಿ ಯೋಜನೆಯಡಿಯಲ್ಲಿ ಪ್ರಸಕ್ತ ಸಾಲಿನಲ್ಲಿ 55 ಕೋಟಿ ರೂ. ಅನುದಾನ ಒದಗಿಸಲಾಗುವುದು.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...