ಅಧಿವೇಶನ | 2 ಎಕರೆ ವರೆಗೆ ಕೃಷಿ ಭೂಮಿಯನ್ನು ಕೈಗಾರಿಕೆಗೆ ಪರಿವರ್ತಿಸಲು ವಿನಾಯಿತಿ

Date:

ವಿಧಾನಸಭೆಯಲ್ಲಿ ಬುಧವಾರ ಕರ್ನಾಟಕ ಭೂ ಸುಧಾರಣೆಗಳು ಮತ್ತು ಕೆಲವು ಇತರ ಕಾನೂನು ತಿದ್ದುಪಡಿ ವಿಧೇಯಕ 2025ಕ್ಕೆ ಅಂಗೀಕಾರ ದೊರೆಯಿತು. ಈ ವಿಧೇಯಕದಲ್ಲಿ ಕೃಷಿ ಭೂಮಿ ಖರೀದಿ ಸಂಬಂಧ ಕೆಲವು ಕಾನೂನುಗಳನ್ನು ಸರಳೀಕರಣ ಮಾಡಲಾಗಿದೆ.

ಕರ್ನಾಟಕದಲ್ಲಿ ಎಲ್ಲೇ ಆಗಲಿ 2 ಎಕರೆ ವರೆಗೆ ಕೈಗಾರಿಗೆ ಮಾಡಲು ಪರಿವರ್ತನೆಗೆ ವಿನಾಯಿತಿ ನೀಡಲಾಗುತ್ತದೆ. ಸಣ್ಣ ಉದ್ದಿಮೆದಾರರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ತಿದ್ದುಪಡಿಯನ್ನು ತರಲಾಗಿದೆ.

ಖಾಸಗಿ ವ್ಯಕ್ತಿಗಳ ಕೃಷಿ ಜಮೀನನ್ನು ಶಿಕ್ಷಣ ಸಂಸ್ಥೆಗಳು ಅಥವಾ ಸಣ್ಣ ಉದ್ದಿಮೆ/ಕೈಗಾರಿಕೆಗಳಿಗೆ ಖರೀದಿಸಲು ಸೆಕ್ಷನ್‌ 109ರ ಅಡಿಯಲ್ಲಿ ಈ ಹಿಂದೆಯೇ ಅನುಮತಿ ನೀಡಲಾಗಿದೆ. ಆದರೆ, ಆ ಅನುಮತಿಗಾಗಿ ಅವರು ಸರ್ಕಾರ ಮುಖ್ಯ ಕಾರ್ಯದರ್ಶಿ ವರೆಗೆ ಬರುವಂತಿದೆ. ಈಗಿನ ನೂತನ ತಿದ್ದುಪಡಿಯಲ್ಲಿ ಆ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೇ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಣ್ಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿಗಳೇ 4 ಹೆಕ್ಟೇರ್‌ ವರೆಗಿನ ಭೂಮಿ ಖರೀದಿಗೆ ಅನುಮತಿ ನೀಡಬಹುದು. ಹೀಗೆ ನೀಡುವ ಅನುಮತಿ ಆಟೋಮ್ಯಾಟಿಕ್ ಭೂ-ಪರಿವರ್ತನೆಯಾಗಿರುತ್ತದೆ.‌ಇದಲ್ಲದೆ, ಈ ಹಿಂದೆ ಸಣ್ಣ ಉದ್ದಿಮೆದಾರರು/ಶಿಕ್ಷಣ ಸಂಸ್ಥೆಗಳು ಭೂಮಿಯನ್ನು ಏನೋ ಉದ್ದೇಶಕ್ಕೆ ತಗೊಂಡು ಇನ್ನೇನೋ ಉದ್ದೇಶಕ್ಕೆ ಬಳಸಲೂ ಸಹ ನಮ್ಮ ಬಳಿ ಅನುಮತಿ ಕೇಳುತ್ತಾರೆ. ಆದರೆ, ಅದಕ್ಕೆ ಅನುಮತಿ ನೀಡುವುದು ಅವಕಾಶ ಇರಲಿಲ್ಲ. ಪ್ರಸ್ತುತ ಅದಕ್ಕೂ ಅವಕಾಶ ನೀಡಲಾಗಿದೆ.

“ನವೀಕರಿಸಬಹುದಾದ ಇಂಧನ ಕ್ಷೇತ್ರ ಪ್ರಸ್ತುತ ಉದಯೋನ್ಮುಖ ವಲಯ. ದೇಶದ ಆದ್ಯತೆ ಕಲ್ಲಿದ್ದಲಿಂದ ನವೀಕರಿಸಬಹುದಾದ ಇಂಧನ ಕ್ಷೇತ್ರದ ಕಡೆ ಬದಲಾಗಬೇಕು ಎಂಬುದು ಸರ್ಕಾರದ ಹಾಗೂ ಜನ ಸಾಮಾನ್ಯರ ಆದ್ಯತೆ. ಸೋಲಾರ್, ಪವನ ಶಕ್ತಿ ಘಟಕ ಸ್ಥಾಪಿಸಲು ಅನುಮತಿ ಕೊಡಿಸುವ ನೆಪದಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ. ಇದರಿಂದ ಸಣ್ಣ ಉದ್ದಿಮೆದಾರರು ಮಧ್ಯವರ್ತಿಗಳ ಕಾಟಕ್ಕೆ ಬೇಸತ್ತಿದ್ದರೆ, ಸೋಲಾರ್ ಹಾಗೂ ಪವನ ಶಕ್ತಿ ವಿಂಡ್ ಮಿಲ್ ಸ್ಥಾಪಿಸುವ ಉದ್ದಿಮೆದಾರರ ಬಂಡವಾಳ ಹೂಡಿಕೆಯೂ ಕಡಿಮೆಯಾಗುತ್ತಿದೆ. ಹೀಗಾಗಿ ಮಧ್ಯವರ್ತಿಗಳ ಉಪಟಳ ತಪ್ಪಿಸಿ ಬಂಡವಾಳ ಹೆಚ್ಚಿಸುವ ಸಲುವಾಗಿ ಆಟೋ ಕನ್‌ವರ್ಷನ್‌ಗೆ ಅವಕಾಶ ನೀಡಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಒತ್ತಾಯವೂ ಇತ್ತು. ಹೀಗಾಗಿ ಬಹಳ ದಿನಗಳ ಚರ್ಚೆಯ ನಂತರ ಕಾನೂನಿನಲ್ಲಿ ಅವಕಾಶ ಮಾಡಿಕೊಡಲಾಗುತ್ತಿದೆ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನಕ್ಕೆ ಮಾಹಿತಿ ನೀಡಿದರು.

ಬುಧವಾರ ವಿಧಾನಸಭೆಯಲ್ಲಿ ಅಂಗೀಕಾರಗೊಂಡ ಪ್ರಾಧಿಕಾರಕ್ಕೆ ಸಂಬಂಧಿಸಿದ ತಿದ್ದುಪಡಿ ವಿಧೇಯಕಗಳ ಮಾಹಿತಿ

1) ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ವಿಧೇಯಕ – 2025

2) ನಾಡಪ್ರಭು ಕೆಂಪೆಗೌಡ ಪಾರಂಪರಿಕ ತಾಣ ಅಭಿವೃದ್ಧಿ ತಿದ್ದುಪಡಿ ವಿಧೇಯಕ – 2025

3) ಕಿತ್ತೂರು ಅಭಿವೃದ್ದಿ ಪ್ರಾಧಿಕಾರ ತಿದ್ದುಪಡಿ ವಿಧೇಯಕ – 2025

4) ಕೂಡಲಸಂಗಮ ಅಭಿವೃದ್ದಿ ಮಂಡಳಿ ತಿದ್ದುಪಡಿ ವಿಧೇಯಕ – 2025

5) ಬನವಾಸಿ ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ವಿಧೇಯಕ – 2025

6) ಸರ್ವಜ್ಞ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ವಿಧೇಯಕ – 2025

“ರಾಜ್ಯದ ಎಲ್ಲಾ ಪ್ರಾಧಿಕಾರಗಳ ಅಭಿವೃದ್ಧಿ ಕೆಲಸ ಸಕ್ರೀಯವಾಗಿ ಮತ್ತು ಪರಿಣಾಮಕಾರಿಯಾಗಿ ನಡೆಯಬೇಕು ಎಂಬ ಉದ್ದೇಶದಿಂದ ಈ ಎಲ್ಲಾ ತಿದ್ದುಪಡಿ ವಿಧೇಯಕಗಳನ್ನೂ ಮಂಡಿಸಲಾಗಿದೆ. ಈ ಹಿಂದೆ ಒಂದೆರಡು ಅಭಿವೃದ್ಧಿ ಪ್ರಾಧಿಕಾರಗಳು ಇದ್ದವು, ಹೀಗಾಗಿ ಪ್ರಾಧಿಕಾರಗಳಿಗೆ ಮುಖ್ಯಮಂತ್ರಿಗಳೇ ಅಧ್ಯಕ್ಷರಾಗಿರಬೇಕು ಎಂಬ ನಿಯಮ ಇತ್ತು. ಆದರೆ, ಇಂದು ಪ್ರಾಧಿಕಾರಗಳ ಸಂಖ್ಯೆ ಅಧಿಕವಾಗಿದೆ. ಅಲ್ಲದೆ, ಮುಖ್ಯಮಂತ್ರಿಗಳಿಗೂ ಕೆಲಸದ ಒತ್ತಡ ಅಧಿಕವಾಗಿದ್ದು, ಈ ನಡುವೆ ಪ್ರಾಧಿಕಾರಗಳ ಅಭಿವೃದ್ಧಿಗೆ ಮುಖ್ಯಮಂತ್ರಿಗಳಿಂದ ಗಮನ ನೀಡುವುದು ಕಷ್ಟದ ವಿಚಾರ. ಹೀಗಾಗಿ ಎಲ್ಲಾ ಪ್ರಾಧಿಕಾರಗಳ ಅಭಿವೃದ್ಧಿ ಕೆಲಸ ಸಕ್ರೀಯವಾಗಿ ಮತ್ತು ಪರಿಣಾಮಕಾರಿಯಾಗಿ ನಡೆಯಬೇಕು ಎಂಬ ಉದ್ದೇಶದಿಂದ ಪ್ರಾಧಿಕಾರಗಳಿಗೆ ಮುಖ್ಯಮಂತ್ರಿ ಅಥವಾ ಇಲಾಖೆ ಸಚಿವರಾದ ಕಂದಾಯ ಸಚಿವರು ಅಥವಾ ಸರ್ಕಾರ ಸೂಚಿಸಿದ ಪ್ರಾಧಿಕಾರದ ಅಭಿವೃದ್ಧಿ ಬಗ್ಗೆ ಆಸಕ್ತಿ ಇರುವ ಯಾವುದೇ ಸಚಿವರನ್ನು ನೇಮಕ ಮಾಡಲು ಈ ತಿದ್ದುಪಡಿಯಲ್ಲಿ ಅವಕಾಶ ನೀಡಲು ಉದ್ದೇಶಿಸಲಾಗಿದೆ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನಕ್ಕೆ ಮಾಹಿತಿ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...