ಅಧಿವೇಶನ | ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಸಚಿವ ಚಲುವರಾಯಸ್ವಾಮಿ

Date:

ಕೇಂದ್ರದಿಂದ ರಸಗೊಬ್ಬರ ಪೂರೈಕೆಯಲ್ಲಿ ಆಗಿರುವ ಕೊರತೆಯಿಂದಾಗಿ ರಾಜ್ಯದಲ್ಲಿ ರಸಗೊಬ್ಬರ ಸಮಸ್ಯೆ ಉಂಟಾಗಿದ್ದು, ಇದರಲ್ಲಿ ಯಾವುದೇ ರಾಜಕೀಯ ಮಾಡದೇ ಒಂದಾಗಿ ರೈತರ ಹಿತ ಕಾಯಬೇಕಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ವಿಧಾನಸಭೆಯಲ್ಲಿ ಬುಧವಾರ ರಸಗೊಬ್ಬರ ಸಮಸ್ಯೆಯ ಮೇಲೆ ನಡೆದ ಚರ್ಚೆಯಲ್ಲಿ ವಿರೋಧ ಪಕ್ಷದ ನಾಯಕರು ಮಾಡಿದ ಆರೋಪಕ್ಕೆ ಕೃಷಿ ಸಚಿವರು ಅಂಕಿ ಸಮೇತ ಉತ್ತರ ನೀಡಿದರು.

“ರಾಜ್ಯದಲ್ಲಿ ಮುಂಗಾರು ಬೇಗ ಪ್ರಾರಂಭವಾಗಿದ್ದು ಬಿತ್ತನೆ ನಿರೀಕ್ಷೆಗೂ ಮುಂಚೆ ಚಾಲನೆಯಾಗಿದೆ. ಅಲ್ಲದೇ 2 ಲಕ್ಷ ಹೆಕ್ಟರ್ ಬಿಳಿ ಜೋಳ ಬಿತ್ತನೆ ಪ್ರದೇಶ ಹೆಚ್ಚಳವಾಗಿದ್ದು ಹಾಗೂ ಕೇಂದ್ರದಿಂದ ಈ ವರೆಗೆ 2.7 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಪೂರೈಕೆ ಕೊರತೆಯಾಗಿದ್ದು ಸಮಸ್ಯೆಗೆ ಕಾರಣವಾಗಿದೆ ಆದರೂ ಲಭ್ಯವಿದ್ದ ಕಾಪುದಾಸ್ತಾನು ಬಳಸಿ ಬಹುತೇಕ ತೊಂದರೆಯನ್ನು ನಿಭಾಯಿಸಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಸಗೊಬ್ಬರ ಪೂರೈಕೆ ಸಂಪೂರ್ಣ ಕೇಂದ್ರದ ಜವಾಬ್ದಾರಿ ರಾಜ್ಯದಿಂದ 12.5 ಲಕ್ಷ ಮೆ.ಟನ್ ಯೂರಿಯಾಕ್ಕೆ ಬೇಡಿಕೆ ಸಲ್ಲಿಸಲಾಗಿತ್ತು ಕೇಂದ್ರದಿಂದ 11.7 ಲಕ್ಷ ಮೆ.ಟನ್ ಹಂಚಿಕೆ ಮಾಡಲಾಗಿತ್ತು. ಆಗಸ್ಟ್ ಅಂತ್ಯದವರೆಗೆ 9.05ಲಕ್ಷ ಮೆ.ಟನ್ ಪೂರೈಕೆ ಮಾಡಬೇಕಾಗಿತ್ತು ಆದರೆ ಈವರೆಗೆ 6.30 ಲಕ್ಷ ಮೆ.ಟನ್ ಮಾತ್ರ ಪೂರೈಕೆಯಾಗಿದೆ. ಹಿಂದೆ ಇದ್ದ 3.46 ಲಕ್ಷ ಮೆ.ಟನ್ ಕಾಪುದಾಸ್ತಾನು ಬಳಸಿ ಪರಿಸ್ಥಿತಿ ನಿಬಾಯಿಸಲಾಗಿದೆ. ಈ ಹಿಂದಿನ ವರ್ಷಗಳಲ್ಲಿ ಕಾಪುದಾಸ್ತಾನು ಪರಿಗಣಿಸಿದೆ ರಸಗೊಬ್ಬರವನ್ನು ರಾಜ್ಯಕ್ಕೆ ಪೂರೈಕೆ ಮಾಡಲಾಗುತ್ತಿತ್ತು ಆದರೆ ಈ ಬಾರಿ ಸರಬರಾಜಿನಲ್ಲಿ ಕೊರತೆ ಮಾಡಲಾಗಿದೆ. ಅಲ್ಲದೇ ಡಿ.ಎ.ಪಿ ಮತ್ತು ಯೂರಿಯಾ ಬಳಕೆ ಕಡಿಮೆ ಮಾಡಬೇಕೆಂದು ಪ್ರಧಾನಿ ಮೋದಿಯವರೇ ಮನವಿ ಮಾಡಿದ್ದಾರೆ” ಎಂದು ತಿಳಿಸಿದರು.

“ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್‌ರವರು ರಾಜ್ಯದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು ನಮ್ಮ ಇತರ ಬೇಡಿಕೆಗಳಿಗೆ ಸಕರಾತ್ಮಕವಾಗಿ ಸ್ಪಂದನೆ ನೀಡುತ್ತಿದ್ದಾರೆ ಅವರನ್ನು ಜುಲೈ ತಿಂಗಳಿನಲ್ಲೇ ಭೇಟಿ ಮಾಡಿ ರಾಜ್ಯದ ಕೃಷಿ ಹಾಗೂ ರಸಗೊಬ್ಬರ ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸಲಾಗಿತ್ತು. ಕೇಂದ್ರ ರಸಗೊಬ್ಬರ ಸಚಿವರ ಬೇಟಿಗೂ ಅವಕಾಶ ಕೋರಲಾಗಿತ್ತು.‌ ಅಲ್ಲದೇ ಕೇಂದ್ರದಿಂದ ಅಗತ್ಯ ಪ್ರಮಾಣದ ರಸಗೊಬ್ಬರ ಪೂರೈಸುವಂತೆ ರಾಜ್ಯದಿಂದ ಆಯ್ಕೆಯಾಗಿರುವ ಕೇಂದ್ರ ಸಚಿವರು ಹಾಗೂ ಸಂಸದರು, ರಾಜ್ಯಸಭಾ ಸದಸ್ಯರುಗಳಿಗೆ ಪತ್ರ ಬರೆದು ಮನವಿ ಮಾಡಲಾಗಿತ್ತು. ರಸಗೊಬ್ಬರದ ವಾಸ್ತವ ಸ್ಥಿತಿ ಅರಿತಿದ್ದರೂ ಪ್ರತಿಪಕ್ಷಗಳು ಪ್ರತಿಭಟನೆಗೆ ಇಳಿದ ಕಾರಣ ರೈತರಲ್ಲೂ ಗೊಂದಲ ಮೂಡಿ ಕೆಲವೆಡೆ ರೈತರು ಇದಕ್ಕಿಂತ ಮುಂದಿನ 2 ತಿಂಗಳ ಅವಧಿಗೆ ಬೇಕಿರುವ ಗೊಬ್ಬರವನ್ನು ಈಗಲೇ ಖರೀದಿಸಲು ಮುಂದಾಗಿದ್ದು ಯೂರಿಯಾ ಕೊರತೆಗೆ ಪ್ರಮುಖ ಕಾರಣವಾಯಿತು” ಎಂದು ವಿವರಿಸಿದರು.

“ಈಗಾಲಾದರೂ ರಾಜಕೀಯ ಬಿಟ್ಟು ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿರುವ ಬಾಕಿ ರಸಗೊಬ್ಬರ ಪೂರೈಕೆಗೆ ಸಹಕರಿಸುವುದರ ಜೊತೆಗೆ ರೈತರ ಸಮಸ್ಯೆಗಳನ್ನು ಬಗೆಹರಿಸಲು ಒಟ್ಟಾಗಿ ಕೆಲಸ ಮಾಡೋಣ” ಎಂದರು. ಅಲ್ಲದೇ ಕೃಷಿ ಇಲಾಖೆ ಕಳೆದ 2 ವರ್ಷಗಳ ಅವಧಿಯಲ್ಲಿ ಕೈಗೊಂಡಿರುವ ರೈತಪರ ಯೋಜನೆಗಳು ಇಲಾಖಾ ಸುಧಾರಣಾ ಕ್ರಮಗಳು, ನೇಮಕಾತಿ ಪ್ರಕ್ರಿಯೆ, ಕೇಂದ್ರದ ಯೋಜನೆಗಳ ಸದ್ಭಳಕೆ ಬರಪರಿಸ್ಥಿತಿಯಲ್ಲಿ ಕೈಗೊಂಡ ಕ್ರಮಗಳು, ಬೆಳೆವಿಮೆ ಮತ್ತು ಇತರ ವಿಚಾರಗಳ ಬಗ್ಗೆ ಸವಿವಿವರವಾಗಿ ಮಾಹಿತಿ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...