ಅರಸು ಜನ್ಮದಿನದಂದೇ ಅಧಿವೇಶನದಲ್ಲಿ ಒಳಮೀಸಲಾತಿ ಘೋಷಿಸಿದ ಸಿದ್ದರಾಮಯ್ಯ

Date:

  • ಶಾಶ್ವತ ಪರಿಶಿಷ್ಟ ಜಾತಿಗಳ ಆಯೋಗ ರಚಿಸಲು ತೀರ್ಮಾನ
  • ಒಳಮೀಸಲಾತಿ ಹೋರಾಟಗಾರರ ಮೇಲಿನ ಮೊಕದ್ದಮೆ ರದ್ದು
  • ಮಾರ್ಪಾಡುಗಳ ಅಗತ್ಯತೆ ಕಂಡುಬಂದರೆ ಬದಲಾವಣೆ ಷರತ್ತಿಗೆ ಬದ್ಧ

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಕುರಿತು ಸರ್ಕಾರದ ಅಂತಿಮ ತೀರ್ಮಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವರಾಜ ಅರಸು 110ನೇ ಜನ್ಮದಿನವಾದ ಬುಧವಾರ (ಆ.20) ನಡೆದ ವಿಧಾನಸಭೆ ಅಧಿವೇಶನದಲ್ಲಿ ಘೋಷಿಸಿದರು.

ಸದನವನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, “19-8-2025 ರಂದು ನಡೆದ ಸಚಿವ ಸಂಪುಟದಲ್ಲಿ ಜಸ್ಟೀಸ್ ನಾಗಮೋಹನ್ ದಾಸ್ ಅವರ ಶಿಫಾರಸ್ಸುಗಳನ್ನು ಕೆಲವು ಮಾರ್ಪಾಟುಗಳೊಂದಿಗೆ ಅಂಗೀಕರಿಸಿದ್ದೇವೆ. ದಾಸ್ ಆಯೋಗವು ರಾಜ್ಯದ 101 ಪರಿಶಿಷ್ಟ ಜಾತಿಗಳನ್ನು ಸಮಗ್ರವಾಗಿ ಅಧ್ಯಯನ ಮಾಡಿ 01.08.2025 ರಂದು ವರದಿಯನ್ನು ಸಲ್ಲಿಸಿತು. ಆಯೋಗವು ಪರಿಶಿಷ್ಟ ಜಾತಿಗಳಿಗೆ ಸೇರಿದ 1,05,09,871 ಜನರ ದತ್ತಾಂಶಗಳನ್ನು ಸಂಗ್ರಹಿಸಿದೆ. ಶೇ.93 ರಷ್ಟು ಪರಿಶಿಷ್ಟ ಜಾತಿಗಳ ಜನಸಂಖ್ಯೆಯು ಈ ಸಮೀಕ್ಷೆಗೆ ಲಭ್ಯವಾಗಿದೆ. ಸಚಿವ ಸಂಪುಟವು ಈ ವರದಿಯನ್ನು ಕೂಲಂಕಶವಾಗಿ ಪರಿಶೀಲಿಸಿದೆ” ಎಂದರು.

“ನಾಗಮೋಹನ್ ದಾಸ್ ಆಯೋಗವು ಎ,ಬಿ,ಸಿ,ಡಿ,ಇ ಎಂದು ಪ್ರವರ್ಗಗಳನ್ನಾಗಿ ವಿಭಾಗೀಕರಿಸಿ ಮಾಡಿದ್ದ ಶಿಫಾರಸ್ಸನ್ನು ಸಚಿವ ಸಂಪುಟವು ಎ,ಬಿ,ಸಿ ಎಂದು ಮೂರು ಪ್ರವರ್ಗಗಳನ್ನಾಗಿ ವಿಭಾಗೀಕರಿಸಲು ಹಾಗೂ ಎಡಗೈ ಸಂಬಂಧಿತ ಜಾತಿಗಳುಳ್ಳ ಎ ಪ್ರವರ್ಗಕ್ಕೆ – ಶೇ. 6, ಬಲಗೈ ಸಂಬಂಧಿತ ಜಾತಿಗಳುಳ್ಳ ಬಿ ಪ್ರವರ್ಗಕ್ಕೆ – ಶೇ. 6 ಹಾಗೂ ಸಿ ಪ್ರವರ್ಗಕ್ಕೆ – ಶೇ.5 ರಷ್ಟು ಒಳಮೀಸಲಾತಿ ನೀಡಲು ತೀರ್ಮಾನಿಸಿದ್ದೇವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪರಿಶಿಷ್ಟ ಜಾತಿಗಳಲ್ಲಿರುವ ಎಲ್ಲ 101 ಜಾತಿಗಳಿಗೆ ಶಿಕ್ಷಣ, ಉದ್ಯೋಗಾವಕಾಶ ಹಾಗೂ ಇನ್ನಿತರೆ ವಿಷಯಗಳಲ್ಲಿ ಅವಕಾಶಗಳನ್ನು ಒದಗಿಸುವಲ್ಲಿ ಸಮಾನತೆ ಮತ್ತು ನ್ಯಾಯ ಸಮ್ಮತತೆಯನ್ನು ಖಚಿತಪಡಿಸಿಕೊಳ್ಳುವ ದೃಷ್ಟಿಯಿಂದ ಈ ಮಾರ್ಪಾಡುಗಳನ್ನು ಮಾಡಲಾಗಿದೆ. ಈ ರೀತಿ ನಿರ್ಧಾರ ಮಾಡುವಾಗ ಸಚಿವ ಸಂಪುಟವು ಸರ್ವೋಚ್ಛ ನ್ಯಾಯಾಲಯದ ತೀರ್ಪಿನಲ್ಲಿ ನಮೂದಿಸಲಾದ ತತ್ವಗಳನ್ನು ಗಮನದಲ್ಲಿಟ್ಟುಕೊಂಡಿದೆ” ಎಂದರು.

“ಎಡಗೈ ಸಂಬಂಧಿತ ಜಾತಿಗಳೆಂದು ಆಯೋಗವು ಗುರ್ತಿಸಿರುವ ಸಮುದಾಯಗಳಿಗೆ ಶೇ.6 ರಷ್ಟು ಒಳಮೀಸಲಾತಿ ಕಲ್ಪಿಸಲು ತೀರ್ಮಾನಿಸಿದ್ದೇವೆ. ದಾಸ್ ಆಯೋಗವು ಪರಯ, ಮೊಗೇರ ಮುಂತಾದ ಬಲಗೈ ಸಂಬಂಧಿತ ಜಾತಿಗಳನ್ನು ಎಡಗೈ ಸಂಬಂಧಿತ ಜಾತಿಗಳ ಜೊತೆ ಸೇರಿಸಲಾಗಿದೆ ಎಂಬುದನ್ನು ಗಮನಿಸಿದ ಸಚಿವ ಸಂಪುಟವು ಈ ಜಾತಿಗಳನ್ನು ಬಲಗೈ ಸಂಬಂಧಿತ ಜಾತಿಗಳ ಜೊತೆ ಸೇರಿಸಿ ಬಲಗೈ ಸಂಬಂಧಿತ ಜಾತಿಗಳ ಸಮೂಹಕ್ಕೆ ಶೇ.6 ರಷ್ಟು ಮೀಸಲಾತಿ ಕಲ್ಪಿಸಲು ತೀರ್ಮಾನಿಸಿದ್ದೇವೆ” ಎಂದು ಹೇಳಿದರು.

“ಹಾಗೆಯೇ ಆದಿ ಕರ್ನಾಟಕ, ಆದಿ ಆಂಧ್ರ, ಆದಿ ದ್ರಾವಿಡ ಗುಂಪುಗಳಲ್ಲಿನ 4,74,954 ಜನಸಂಖ್ಯೆಯನ್ನು ಎಡಗೈ ಸಂಬಂಧಿತ ಮತ್ತು ಬಲಗೈ ಸಂಬಂಧಿತ ಜಾತಿಗಳ ಜೊತೆ ಸಮಾನವಾಗಿ ಹಂಚಿಕೆ ಮಾಡಲು ತೀರ್ಮಾನಿಸಿದ್ದೇವೆ. ​ಸ್ಪೃಶ್ಯ ಜಾತಿಗಳ ಗುಂಪಿಗೆ ದಾಸ್ ಅವರು ಶೇ. 4 ರಷ್ಟು ಮೀಸಲಾತಿಯನ್ನು ಶಿಫಾರಸ್ಸು ಮಾಡಿದ್ದರು. ಹಾಗೆಯೇ 59 ಜಾತಿಗಳ 5,22,099 ಜನಸಂಖ್ಯೆಯನ್ನು ಪ್ರವರ್ಗ-ಎ ಎಂದು ತೀರ್ಮಾನಿಸಿ ಶೇ.1 ರಷ್ಟು ಮೀಸಲಾತಿಯನ್ನು ಶಿಫಾರಸ್ಸು ಮಾಡಿದ್ದರು. ಕೆಲವು ತಾಂತ್ರಿಕ ಕಾರಣಗಳಿಂದ ಈ ಎರಡೂ ಗುಂಪುಗಳನ್ನು ಒಟ್ಟಿಗೆ ಸೇರಿಸಿ ಶೇ.5 ರಷ್ಟು ಮೀಸಲಾತಿ ನೀಡಲು ತೀರ್ಮಾನಿಸಿದ್ದೇವೆ” ಎಂದು ವಿವರಿಸಿದರು.

“​ಪರಿಶಿಷ್ಟ ಜಾತಿಗಳಲ್ಲಿನ ಚಲನಶೀಲತೆಯನ್ನು ಹಾಗೂ ಲಭ್ಯವಾಗುವ ದತ್ತಾಂಶಗಳನ್ನು ಪರಿಶೀಲಿಸಿಕೊಂಡು, ಕಾಲಕಾಲಕ್ಕೆ ಈ ಜಾತಿಗಳನ್ನು ಅಧ್ಯಯನ ಮಾಡಿ ವರದಿ ನೀಡಲು ಶಾಶ್ವತ ಪರಿಶಿಷ್ಟ ಜಾತಿಗಳ ಆಯೋಗವನ್ನು ರಚಿಸಲು ತೀರ್ಮಾನಿಸಿದ್ದೇವೆ. ​ಒಳ ಮೀಸಲಾತಿಯ ಕುರಿತಂತೆ ಆದೇಶ ಹೊರಡಿಸಿದ ಕೂಡಲೇ ನೇಮಕಾತಿ ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಹಾಗೂ ಒಂದು ಬಾರಿಗೆ ವಯೋಮಿತಿ ಸಡಿಲಿಸಲು ತೀರ್ಮಾನಿಸಿದ್ದೇವೆ.​ ಇದೇ ಸಂದರ್ಭದಲ್ಲಿ ಒಳಮೀಸಲಾತಿ ಹೋರಾಟಗಾರರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆಯಲು ತೀರ್ಮಾನಿಸಿದ್ದೇವೆ” ಎಂದು ಹೇಳಿದರು.

“​ಸರ್ಕಾರವು ಈಗ ಕೈಗೊಂಡಿರುವ ತೀರ್ಮಾನದಲ್ಲಿ ಯಾವುದಾದರೂ ಮಾರ್ಪಾಡುಗಳ ಅಗತ್ಯತೆ ಕಂಡುಬಂದರೆ ಅವುಗಳನ್ನು ಮುಂದಿನ ರಾಷ್ಟ್ರೀಯ ಜನಗಣತಿಯಲ್ಲಿನ ಅಂಕಿ-ಅಂಶಗಳನ್ನು ಆಧರಿಸಿ ಬದಲಾವಣೆಗೆ ಒಳಪಡಿಸುವ ಷರತ್ತಿಗೆ ಬದ್ಧವಾಗಿದೆ. ನ್ಯಾಯಮೂರ್ತಿ ನಾಗಮೋಹನ್‌ದಾಸ್ ಅವರ ವರದಿಯನ್ನು ಮೇಲೆ ಪ್ರಸ್ತಾಪಿಸಿದ ಮಾರ್ಪಾಟುಗಳೊಂದಿಗೆ ಅಂಗೀಕರಿಸಿದೆ ಎಂಬ ಅಂಶಗಳನ್ನು ಸದನದ ಮುಂದೆ ಮಂಡಿಸಲು ಸರ್ಕಾರವು ಸಂತೋಷ ಪಡುತ್ತದೆ. ನಮ್ಮ ಈ ತೀರ್ಮಾನವು ಒಳ ಮೀಸಲಾತಿ ಕುರಿತ ದಶಕಗಳ ಹೋರಾಟಕ್ಕೆ ನ್ಯಾಯ ಕಲ್ಪಿಸುವಲ್ಲಿ ಯಶಸ್ವಿಯಾಗಿದೆ ಎಂದು ಭಾವಿಸಿದ್ದೇವೆ. ಅಭಿವೃದ್ಧಿಶೀಲ ರಾಜ್ಯವಾದ ಕರ್ನಾಟಕವು ಸಾಮಾಜಿಕ ನ್ಯಾಯದ ವಿಚಾರದಲ್ಲೂ ಮುಂಚೂಣಿಯಲ್ಲಿದೆ ಎಂಬುದನ್ನು ನಮ್ಮ ಸರ್ಕಾರವು ಸಾಬೀತು ಮಾಡಿದೆ” ಎಂದು ತಿಳಿಸಿದರು.

” ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸುವ ಕುರಿತಂತೆ ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯವು 01.08.2024 ರಂದು ಪಂಜಾಬ್ ರಾಜ್ಯ ಮತ್ತು ಇತರರು ವರ್ಸಸ್ ದೇವಿಂದರ್ ಸಿಂಗ್ ಪ್ರಕರಣದಲ್ಲಿ ಒಳಮೀಸಲಾತಿ ತೀರ್ಪು ನೀಡಿದೆ. ಅಂದರೆ, ಪರಿಶಿಷ್ಟ ಜಾತಿಗಳ ಉಪವರ್ಗೀಕರಣ ಮಾಡುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಸಾಂವಿಧಾನಿಕವಾಗಿ ದತ್ತವಾಗಿದೆ ಎಂದು ಸ್ಪಷ್ಟವಾಗಿ ಹೇಳಿದೆ. ಸಂವಿಧಾನದ ಅನುಚ್ಚೇದ 14, 15 ಮತ್ತು 16 ರಲ್ಲಿ ತಿಳಿಯಪಡಿಸಿರುವ ಸಮಾನತೆಯ ತತ್ವಕ್ಕೆ ಯಾವುದೇ ಚ್ಯುತಿ ಬಾರದಂತೆ ಅದರ ಮೂಲ ಆಶಯವನ್ನು ಸದೃಢಗೊಳಿಸುವ ದೃಷ್ಟಿಯಿಂದ ಒಳ ಮೀಸಲಾತಿ ವ್ಯವಸ್ಥೆ ಕಲ್ಪಿಸಬಹುದು ಎಂದು ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ, ನಮ್ಮ ಸರ್ಕಾರವು ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್‌ದಾಸ್ ಅವರ ಏಕ ಸದಸ್ಯ ಆಯೋಗವನ್ನು ರಚಿಸಿ, ಸದರಿ ಆಯೋಗವು ಸೂಕ್ತ ದತ್ತಾಂಶಗಳನ್ನು (Empirical Data) ಸಂಗ್ರಹಿಸಿ, ಒಳ ಮೀಸಲಾತಿ ನೀಡುವ ಕುರಿತು ಶಿಫಾರಸ್ಸುಗಳನ್ನು ಮಾಡಲು ಕೋರಲಾಯಿತು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...