ಶಿವಮೊಗ್ಗ ಗಲಭೆ | ಪರಿಸ್ಥಿತಿ ನಿಯಂತ್ರಣದಲ್ಲಿದೆ, ಆತಂಕ ಅಗತ್ಯವಿಲ್ಲ: ಎಸ್‌ಪಿ

Date:

ಶಿವಮೊಗ್ಗದ ರಾಗಿಗುಡ್ಡ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದ ಗಲಭೆಗೆ ಸಂಬಂಧಿಸಿದಂತೆ ಪರಿಸ್ಥಿತಿಯನ್ನು ತಕ್ಷಣವೇ ನಿಯಂತ್ರಣಕ್ಕೆ ತರಲಾಗಿದ್ದು, ಪರಿಸ್ಥಿತಿ ತಹಬದಿಗೆ ಬರುತ್ತಿದೆ. ಯಾರೂ ಅನಗತ್ಯ ಭಯಭೀತರಾಗುವ ಅಗತ್ಯವಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ ಕೆ ಮಿಥುನ್‌ಕುಮಾರ್ ತಿಳಿಸಿದ್ದಾರೆ.

“ಗಲಭೆಯಲ್ಲಿ ಒಂದು ಕಾರು, ಮೂರು ಆಟೊ, ಎರಡು ದ್ವಿಚಕ್ರ ವಾಹನ ಜಖಂಗೊಂಡಿದ್ದು, ಕಲ್ಲು ತೂರಾಟದಿಂದ ಏಳು ಮನೆಗಳ ಕಿಟಕಿಗಳಿಗೆ ಹಾನಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಈವರೆಗೆ 24 ಪ್ರಕರಣಗಳನ್ನು ದಾಖಲಿ‌ಸಿದ್ದು, 60 ಮಂದಿಯನ್ನು ಬಂಧಿಸಲಾಗಿದೆ” ಎಂದು ತಿಳಿಸಿದ್ದಾರೆ.

ಘಟನೆ ಹಿನ್ನೆಲೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನೆಗಳಿಗೆ ಕಲ್ಲು ತೂರಾಟ, ಪೊಲೀಸರೊಂದಿಗೆ ಘರ್ಷಣೆಯಿಂದಾಗಿ ಭಾನುವಾರ ರಾತ್ರಿ ಇಡೀ ರಾಜ್ಯದ ಗಮನ ಸೆಳೆದಿದ್ದ ಶಿವಮೊಗ್ಗದ ರಾಗಿಗುಡ್ಡ ಪ್ರದೇಶದಲ್ಲಿ ಸೋಮವಾರ ನೀರವ ಮೌನ ಆವರಿಸಿತ್ತು. ಜಿಲ್ಲಾಡಳಿತ 144ನೇ ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿಗೊಳಿಸಿದ್ದರಿಂದ ಇಡೀ ದಿನ ಸ್ಥಳೀಯರ ಗದ್ದಲ ಅಡಗಿತ್ತು. ಪೊಲೀಸರ ಓಡಾಟ, ಗಣ್ಯರ ಭೇಟಿಯ ಗದ್ದಲ ಮಾತ್ರ ಅಲ್ಲಿತ್ತು.

ರಾಗಿಗುಡ್ಡ ದೇವಸ್ಥಾನ, ಕೆಲವು ಮನೆಗಳ ಬಳಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿನ ದೃಶ್ಯಗಳನ್ನು ಪರಿಶೀಲಿಸಿ ಗಲಾಟೆ ನಡೆಸಿದವರನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ನಿರತರಾಗಿದ್ದರು. ಆರ್‌ಎಎಫ್ ತುಕಡಿ ಮೊಕ್ಕಾಂ ಹೂಡಿದ್ದು, ಮೀಸಲು ಪಡೆ ಪೊಲೀಸರೊಂದಿಗೆ ಸೇರಿ ಆ ಪ್ರದೇಶದ ಗಸ್ತಿನ ಜೊತೆಗೆ ಬಂದು ಹೋಗುವವರ ಮೇಲೆ ನಿಗಾ ವಹಿಸಿತ್ತು. ರಾತ್ರಿಯೇ ಪೂರ್ವವಲಯ ಐಜಿಪಿ ತ್ಯಾಗರಾಜನ್ ಹಾಗೂ ಜಿಲ್ಲಾಧಿಕಾರಿ ಡಾ ಆರ್ ಸೆಲ್ವಮಣಿ ರಾಗಿಗುಡ್ಡಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದರು.

ಬೆಳಿಗ್ಗೆ ಕೆಲ ಹೊತ್ತು ಅಂಗಡಿ ತೆಗೆದು ದಿನಸಿ, ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಮಾಡಿಕೊಡಲಾಗಿತ್ತು. ಬಳಿಕ ಜನರು ಮನೆಗಳನ್ನು ಬಿಟ್ಟು ಹೊರಗೆ ಬರಲಿಲ್ಲ.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ ಗಲಾಟೆ | ಪರಿಸ್ಥಿತಿ ನಿಯಂತ್ರಣದಲ್ಲಿದೆ: ಗೃಹ ಸಚಿವ ಪರಮೇಶ್ವರ್‌

ನಿಷೇಧಾಜ್ಞೆ ಶಿವಮೊಗ್ಗ ನಗರಕ್ಕೂ ವಿಸ್ತರಿಸಿದ್ದರಿಂದ ಮಾರುಕಟ್ಟೆ ಸ್ತಬ್ಧವಾಗಿತ್ತು. ಅಂಗಡಿಗಳು ಬಾಗಿಲು ಹಾಕಿದ್ದವು. ಗಾಂಧಿ ಜಯಂತಿ ಪ್ರಯುಕ್ತ ಮದ್ಯ–ಮಾಂಸ ಮಾರಾಟಕ್ಕೂ ನಿಷೇಧ ಇದ್ದ ಕಾರಣ ಬಹಳಷ್ಟು ಹೋಟೆಲ್‌, ಮದ್ಯದಂಗಡಿಗಳು ಬಾಗಿಲು ಹಾಕಿದ್ದವು. ಚೇಂಬರ್ ಆಫ್ ಕಾಮರ್ಸ್‌ನ ಮನವಿ ಮೇರೆಗೆ ಸಂಜೆ ಕೆಲವು ಕಡೆ ಅಂಗಡಿಗಳ ಬಾಗಿಲು ತೆರೆಯಲು ಪೊಲೀಸರು ಅವಕಾಶ ಮಾಡಿಕೊಟ್ಟಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...