ಶಿವಮೊಗ್ಗ ಗಲಾಟೆ | ಪರಿಸ್ಥಿತಿ ನಿಯಂತ್ರಣದಲ್ಲಿದೆ: ಗೃಹ ಸಚಿವ ಪರಮೇಶ್ವರ್‌

Date:

  • ‘ಯಾರೂ ಆತಂಕ ಪಡುವ ಅಗತ್ಯವಿಲ್ಲ’
  • ‘ರಾಜ್ಯದಲ್ಲಿ ಶಾಂತಿ ಕಾಪಾಡುತ್ತಿದ್ದೇವೆ’

ಶಿವಮೊಗ್ಗ ಗಲಾಟೆ ವಿಚಾರವಾಗಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿಯನ್ನೇ ನಾವು ಸ್ಥಳಕ್ಕೆ ಕಳುಹಿಸಿದ್ದೆವು. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಆತಂಕ ಪಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು.

ಮಂಗಳವಾರ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಘಟನೆಗೆ ಕಾರಣ ಏನು? ಅದರ ಹಿಂದೆ ಯಾರಿದ್ದಾರೆ ಎಂಬುವುದರ ಬಗ್ಗೆ ಪೊಲೀಸರಿಂದ ತನಿಖೆ ನಡೆಯುತ್ತಿದೆ” ಎಂದರು.

”ಗಲಾಟೆಯಲ್ಲಿ ಎರಡು ಧರ್ಮಿಯರಿಂದ ಕಲ್ಲು ತೂರಾಟ ನಡೆದಿದೆ. ಕೆಲವರ ಬಂಧನ ಆಗಿದ್ದು, ತನಿಖೆ ಮುಗಿದ ಮೇಲೆ ಸತ್ಯಾಂಶ ಗೊತ್ತಾಗಲಿದೆ” ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ವಿರೋಧದ ಬಗ್ಗೆ ಪ್ರತಿಕ್ರಿಯಿಸಿ, “ನಾನು ಸಣ್ಣ ಘಟನೆ ಅಂತ ಹೇಳಿದ್ದು ಆ ಕಾರಣಕ್ಕೆ ಅಲ್ಲ. ಹಿಂದೆಲ್ಲಾ ಇಂತಹ ಘಟನೆಗಳಾಗಿವೆ. ಆ ಅರ್ಥದಲ್ಲಿ ಹೇಳಿದ್ದೇನೆ. ಶಿವಮೊಗ್ಗದಲ್ಲಿ ಇಂತಹ ಘಟನೆ ನಡೆದೇ ಇಲ್ವಾ? ಆ ರೀತಿ ಹೇಳಿದ್ದಕ್ಕೆ ಅದನ್ನೇ ತಿರುಚುವ ಪ್ರಯತ್ನ ಬೇಡ” ಎಂದರು.

”ಬಿಜೆಪಿಯವರು ಹೇಳಿದ್ದರಲ್ಲಿ ಸಲಹೆ ಇದ್ದರೆ ಸ್ವೀಕರಿಸುತ್ತೇವೆ. ನಮ್ಮ ತಪ್ಪಿದ್ದರೆ ತಿದ್ದಿಕೊಳ್ತೀವಿ. ನಾವು ಜವಾಬ್ದಾರಿಯಿಂದ ಕೆಲಸ ಮಾಡ್ತಿದ್ದೇವೆ. ರಾಜ್ಯದಲ್ಲಿ ಶಾಂತಿ ಕಾಪಾಡುತ್ತಿದ್ದೇವೆ. ಕಾನೂನು ವಿರೋಧಿ ಕೆಲಸಗಳು ಆಗಬಾರದು ಅಂತ ಎಲ್ಲ ಕ್ರಮಗಳನ್ನೂ ಆಗಿಂದಾಗ್ಗೆ ಕೈಗೊಳ್ಳುತ್ತಿದ್ದೇವೆ” ಎಂದು ಹೇಳಿದರು.

ಬಿಜೆಪಿ ಸರ್ಕಾರ ಒಪ್ಪಿದ್ದು

ಡಿಜೆ ಹಳ್ಳಿ ಕೆಜಿ ಹಳ್ಳಿ ಗೋಲಿಬಾರ್ ಕುರಿತ ಮ್ಯಾಜಿಸ್ಟ್ರೇಟ್ ವರದಿ ಅಂಗೀಕಾರ ವಿಚಾರವಾಗಿ ಮಾತನಾಡಿ, “2022 ರ ಡಿಸೆಂಬರ್ ನಲ್ಲಿ ಬಿಜೆಪಿ ಸರ್ಕಾರ ಇದ್ದಾಗಲೇ ವರದಿ ಕೊಡಲಾಗಿದೆ. ಆ ವರದಿಯನ್ನು ಅವರೇ ಒಪ್ಪಿಕೊಂಡಿದ್ದರು. ಅವರು ಒಪ್ಪಿಕೊಂಡಿದ್ದನ್ನು ನಾವು ತಿರಸ್ಕರಿಸಲು ಆಗುತ್ತಾ? ಹಾಗಾಗಿ ಅದರ ಗೆಜೆಟ್ ಅಧಿಸೂಚನೆ ಪ್ರಕಟಿಸಲಾಗಿದೆ” ಎಂದು ಸಮರ್ಥನೆ ನೀಡಿದರು.

ಬಿಹಾರ ರಾಜ್ಯದಂತೆ ಕರ್ನಾಟಕದಲ್ಲೂ ಜಾತಿ ಸಮೀಕ್ಷೆ ಅಂಗೀಕಾರಕ್ಕೆ ಒತ್ತಾಯ ವಿಚಾರವಾಗಿ ಪ್ರತಿಕ್ರಿಯಿಸಿ, “ಆ ಬಗ್ಗೆ ಚರ್ಚೆ ಮಾಡುವಾಗ ನನ್ನ ಅಭಿಪ್ರಾಯ ತಿಳಿಸುವೆ. ಸರ್ಕಾರ ಇದರ ಬಗ್ಗೆ ಒಂದು ತೀರ್ಮಾನಕ್ಕೆ ಬರಲಿದೆ. ವರದಿ ಬಗ್ಗೆ ಮುಖ್ಯಮಂತ್ರಿಗಳು ಸಾಧಕ ಬಾಧಕ ಬಗ್ಗೆ ಚರ್ಚೆ ಮಾಡಲಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...