ಸರ್ಕಾರದ ಓಲೈಕೆ ರಾಜಕಾರಣದ ಫಲವೇ ಶಿವಮೊಗ್ಗ ಗಲಭೆ: ಮಾಜಿ ಸಿಎಂ ಬೊಮ್ಮಾಯಿ

Date:

  • ಸರ್ಕಾರದ ತುಷ್ಟೀಕರಣ ನೀತಿಯಿಂದ ಸಮಾಜಘಾತಕ ಶಕ್ತಿಗಳು ಹೆಚ್ಚಾಗುತ್ತಿವೆ
  • ಹುಬ್ಬಳ್ಳಿ ಗಲಭೆಯ ಪ್ರಕರಣ ವಾಪಸ್ ಪಡೆಯಲು ಪತ್ರ ಬರೆದಿರುವುದು ಏನರ್ಥ?

ರಾಜ್ಯ ಸರ್ಕಾರ ಒಂದು ಸಮುದಾಯದ ಓಲೈಕೆ ರಾಜಕಾರಣ ಮಾಡುತ್ತಿರುವುದರಿಂದ ಶಿವಮೊಗ್ಗದ ಗಲಭೆಗೆ ಪ್ರೇರಣೆಯಾಗಿದ್ದು, ತಪ್ಪಿತಸ್ಥರು ಯಾರೆ ಇರಲಿ ಅವರನ್ನು ಹಿಡಿದು ಒಳಗೆ ಹಾಕುವ ಬದಲು ಸಚಿವರು ಅವರಿಗೆ ಕ್ಲೀನ್ ಚಿಟ್ ಕೊಡುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಬಿಜೆಪಿಯವರು ಗಲಭೆ ಮಾಡಿಸುತ್ತಿದ್ದಾರೆಂದು ಸಚಿವರೇ ದಾರಿ ತಪ್ಪಿಸುತ್ತಿದ್ದಾರೆ‌.‌ ಯಾರು ಕ್ರಮ ಕೈಗೊಳ್ಳಬೇಕೊ ಅವರೇ ಹೀಗೆ ಹೇಳಿದರೆ ಸರ್ಕಾರದ ಮೇಲೆ ಜನ ಭರವಸೆ ಇಡುವುದು ಹೇಗೆ? ಗೃಹ ಸಚಿವರು ಇದು ಸಣ್ಣ ಘಟನೆ ಅಂತ ಹೇಳಿದ್ದಾರೆ. ಈ ಸರ್ಕಾರದ ತುಷ್ಟೀಕರಣದ ನೀತಿಯೇ ಸಮಾಜಘಾತಕ ಶಕ್ತಿಗಳು ಹೆಚ್ಚಾಗಲು ಕಾರಣವಾಗಿದೆ. ಗಡಿ ಜಿಲ್ಲೆಗಳಲ್ಲಿ ಸಮಾಜಘಾತಕ‌ಶಕ್ತಿಗಳು ಜಾಲ ವ್ಯಾಪಿಸಿಕೊಳ್ಳಲು ಕಾರಣವಾಗಿದೆ‌” ಎಂದರು.

“ಇಷ್ಟೇ ಅಲ್ಲದೇ ಈ ತರಹದ ಕೇಸ್‌ಗಳಲ್ಲಿ ಅರೆಸ್ಟ್ ಆದವರನ್ನು ಬಿಡುಗಡೆ ಮಾಡುವಂತೆ ಸಚಿವರು, ಶಾಸಕರು ಒತ್ತಾಯ ಮಾಡುವುದನ್ನು ನೋಡಿದರೆ ಈ ಸರ್ಕಾರ ಏನು ಮಾಡಲು ಹೊರಟಿದೆ ಅಂತ ತಿಳಿಯುತ್ತಿಲ್ಲ. ಹಿಂದೆ ಪಿಎಫ್‌ಐನಲ್ಲಿ ಇದ್ದವರೆ ಹುಬ್ಬಳ್ಳಿ ಗಲಭೆಯಲ್ಲಿ ಇದ್ದರು. ಡಿಸಿಎಂ ಶಿವಕುಮಾರ್ ಅವರೇ ಹುಬ್ಬಳ್ಳಿ ಗಲಭೆಯಲ್ಲಿ ಪಾಲ್ಗೊಂಡವರ ಪ್ರಕರಣ ವಾಪಸ್ ಪಡೆಯಲು ಪತ್ರ ಬರೆದಿದ್ದಾರೆ ಎಂದರೆ ಏನರ್ಥ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗೃಹ ಸಚಿವರು ಶಿವಮೊಗ್ಗ ಘಟನೆ ಸಣ್ಣ ಘಟನೆ ಅಂತ ಗೃಹ ಸಚಿವರು ಹೇಳಿದ್ದಾರೆ. ಈಗ ತಪ್ಪಿನ ಅರಿವಾಗಿ ತಾವು ಹೇಳಿಲ್ಲ ಅಂತ ತಿರುಗಿಸುತ್ತಿದ್ದಾರೆ. ಉಡುಪಿಯಲ್ಲಿ ಹಿಂದೂ ಸಂಘಟನೆಗಳು ಕಾರ್ಯಕ್ರಮಕ್ಕೆ ಹಾಕಿರುವ ಬ್ಯಾನರ್‌ಗಳನ್ನು ತೆರವುಗೊಳಿಸುವುದು ಓಲೈಕೆ ರಾಜಕಾರಣಕ್ಕೆ ಸ್ಪಷ್ಟ ಉದಾಹರಣೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಹಾರದ ಜಾತಿ ಜನಗಣತಿ- ಕಮಂಡಲ ರಾಜಕಾರಣ ಕಕ್ಕಾಬಿಕ್ಕಿ

ಜಾತಿ ಸಮೀಕ್ಷೆ ಬರಲಿ ನೋಡೋಣ

“ನಾವು ಜಾತಿ ಸಮೀಕ್ಷೆ ವಿರೋಧ ಮಾಡಿಲ್ಲ. ರಾಜ್ಯ ಸರ್ಕಾರ ಸಾಮಾಜಿಕ ಆರ್ಥಿಕ ಸಮೀಕ್ಷೆ ಮಾಡಿಸಿದ್ದು, ಅದು ಜಾತಿ ಗಣತಿ ಅಲ್ಲ ಅಂತ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ‌. ಉತ್ತರ ಭಾರತದ ಜಾತಿ ಸಮೀಕರಣಕ್ಕೂ ದಕ್ಷಿಣ ಭಾರತದ ಜಾತಿ ಸಮಿಕರಣಕ್ಕೂ ವ್ಯತ್ಯಾಸ ಇದೆ. ಈ ವರದಿಯಿಂದ ತುಳಿತಕ್ಕೊಳಗಾದವರಿಗೆ ನ್ಯಾಯ ಒದಗಿಸುವ ಜವಾಬ್ದಾರಿ ಸರ್ಕಾರಕ್ಕೆ ಇದೆ” ಎಂದರು.

“ಈ ವರದಿಯಲ್ಲಿ ಏನಿದೆ ಅಂತ ಗೊತ್ತಿಲ್ಲ. ಈಗಾಗಲೇ ವರದಿ ಸೋರಿಕೆ ಆಗಿದೆ ಅಂತ ಆರೋಪ ಇದೆ. ಹೀಗಾಗಿ ಈ ವರದಿಯಲ್ಲಿ ಏನಿದೆಯೊ ಗೊತ್ತಿಲ್ಲ‌‌. ವರದಿ ಬಂದ ಮೇಲೆ ನೋಡೊಣ. ಸಿದ್ದರಾಮಯ್ಯ ಅವರು ಹಿಂದೆ ಸಿಎಂ ಆಗಿದ್ದಾಗಲೇ ವರದಿ ಸ್ವೀಕಾರ ಮಾಡಬಹುದಿತ್ತು. ಆದರೆ ಆಗ ಚುನಾವಣೆ ಬಂತು ಅಂತ ಜಾರಿ ಮಾಡಿಲ್ಲ. ಈಗ ಏನು ಮಾಡುತ್ತಾರೊ ನೋಡೊಣ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...