ಸಿಜೆಐ ಮೇಲೆ ಶೂ ಎಸೆತ | ದುಷ್ಕರ್ಮಿಯ ಮನಸ್ಥಿತಿ ಹಿಂದೆ ದ್ವೇಷ ಬಿತ್ತುವ RSS ಇದೆ: ಬಿ ಕೆ ಹರಿಪ್ರಸಾದ್

Date:

ಮಹಾತ್ಮಾ ಗಾಂಧಿಯನ್ನು ಕೊಂದ ಗೋಡ್ಸೆಗೂ, ಬಾಬಾರಿ ಮಸೀದಿ ಧ್ವಂಸ ಮಾಡಿದ ಸಂಘಿಗಳಿಗೂ, ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಾಧೀಶರಿಗೆ ಶೂ ಎಸೆದ ಸನಾತನಿ ವಕೀಲನಿಗೂ ಸಾಮ್ಯತೆಗಳಿವೆಯೇ ಎಂದು ಎಐಸಿಸಿ ಮುಖಂಡ ಮತ್ತು ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ ಪ್ರಶ್ನಿಸಿದ್ದಾರೆ.

“ಯಾವ ಸಿದ್ಧಾಂತ ದೇಶದಲ್ಲಿ ದ್ವೇಷವನ್ನು ಹರಡುತ್ತಿದ್ದಿಯೋ, ಯಾವ ಸಿದ್ಧಾಂತ ದೇಶದ ಭಾವೈಕ್ಯತೆಗೆ ಧಕ್ಕೆ ತರುತ್ತಿದೆಯೋ, ಯಾವ ಸಿದ್ಧಾಂತ ಸಂವಿಧಾನದ ಮೇಲೆಯೇ ದಾಳಿ ನಡೆಸುತ್ತಿದಿಯೋ, ಯಾವ ಸಿದ್ಧಾಂತ ದೇಶದಲ್ಲಿ ಭಯೋತ್ಪದಾನೆಯನ್ನು ಹುಟ್ಟು ಹಾಕುತ್ತಿದೆಯೋ, ಅದೇ ಸಿದ್ಧಾಂತವೇ ಇಂದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆಯುವಂತೆ ಮಾಡಿರುವುದು ಸ್ಪಷ್ಟ” ಎಂದು ಎಕ್ಸ್‌ ಖಾತೆಯಲ್ಲಿ ಖಂಡಿಸಿದ್ದಾರೆ.

“ದೇಶದ ಸರ್ವೋಚ್ಛ ನ್ಯಾಯಾಧೀಶರ ಮೇಲೆ ಶೂ ಎಸೆದಿರುವ ದುಷ್ಕರ್ಮಿಯ ಪರದೆಯ ಹಿಂದಿನ ಸೂತ್ರದಾರರು ಯಾರು? ದೇಶದ ಅಮಾಯಕ ಜನರ ತಲೆಯಲ್ಲಿ ಮನುಷ್ಯ ವಿರೋಧಿ ಮನಸ್ಥಿತಿ ತುಂಬುತ್ತಿರುವವವರು ಯಾರು? ಅದಕ್ಕೆ ಮೂಲ ಕಾರಣವೇ ಸಮಾಜದಲ್ಲಿ ಆರ್.ಎಸ್.ಎಸ್ ಬಿತ್ತುತ್ತಿರುವ ದ್ವೇಷ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆರ್‌ಎಸ್‌ಎಸ್ ಸಿದ್ಧಾಂತದ ವಿರೋಧಿಗಳಾದ ಸಂವಿಧಾನದ ರಕ್ಷಕರು, ಪ್ರಜಾಪ್ರಭುತ್ವವಾದಿಗಳು, ಸಮಾನತಾವಾದಿಗಳು,
ಜಾತ್ಯಾತೀತವಾದಿಗಳನ್ನು ಇಲ್ಲವಾಗಿಸುವ ವಿಷಕಾರಿ, ದ್ವೇಷಮಯ ವಾತಾವರಣವನ್ನು ಸಮಾಜದಲ್ಲಿ ಆರ್.ಎಸ್.ಎಸ್ ಹುಟ್ಟು ಹಾಕಿದೆ. ಇಂತಹ ವಿಚ್ಛದ್ರಕಾರಿ ಶಕ್ತಿಗಳ ವಿರುದ್ಧ ದೇಶ ಒಟ್ಟಾಗಿ ಮುಖಾಮುಖಿಯಾಗಬೇಕಿದೆ” ಎಂದು ಹೇಳಿದ್ದಾರೆ.

“ದಲಿತ ಸಮುದಾಯವನ್ನು ಪ್ರತಿನಿಧಿಸುವ ಸುಪ್ರೀಂಕೋರ್ಟ್ ನ ನ್ಯಾಯಾಧೀಶರ ಮೇಲಿನ ದಾಳಿಯನ್ನು ಅತ್ಯಂತ ಕಟುವಾಗಿ ಖಂಡಿಸುತ್ತೇನೆ. ಸಿಜೆಐ ಗವಾಯಿ ಅವರ ಬೆನ್ನಿಗೆ ದೇಶದ ಪ್ರಜ್ಞಾವಂತ ಜನರು ಗಟ್ಟಿಯಾಗಿ ನಿಲ್ಲಬೇಕಿದೆ” ಎಂದು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...